ಚಿತ್ರದುರ್ಗ ಲೋಕಸಭಾ ಚುನಾವಣೆ: ಏ.04ರಂದು 19 ಅಭ್ಯರ್ಥಿಗಳಿಂದ 22 ನಾಮಪತ್ರ ಸಲ್ಲಿಕೆ

suddionenews
1 Min Read

ಚಿತ್ರದುರ್ಗ. ಏ.04:ಚಿತ್ರದುರ್ಗ ಲೋಕಸಭಾ ಸಾರ್ವತ್ರಿಕ ಚುನಾವಣೆ ಅಂಗವಾಗಿ ನಾಮಪತ್ರ ಸಲ್ಲಿಕೆಗೆ ಅಂತಿಮ ದಿನವಾದ ಗುರುವಾರ 19 ಅಭ್ಯರ್ಥಿಗಳಿಂದ ಒಟ್ಟು 22 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

ನಾಮಪತ್ರ ಸಲ್ಲಿಸಿದವರ ವಿವರ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಬಿ.ಎನ್.ಚಂದ್ರಪ್ಪ 3 ನಾಮಪತ್ರ, ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಗೋವಿಂದ ಕಾರಜೋಳ 2 ನಾಮಪತ್ರ ಸಲ್ಲಿಸಿದರು.

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿ ಬಿ.ವೆಂಕಟೇಶ್, ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿ ರಮೇಶ್‍ನಾಯ್ಕ್.ಟಿ, ಪಕ್ಷೇತರ ಅಭ್ಯರ್ಥಿಗಳಾಗಿ ಗಣೇಶ್, ತಿಮ್ಮಯ್ಯ, ಮಂಜುನಾಥ.ವಿಎಸ್., ತುಳಸಿ.ಹೆಚ್, ಆರ್.ದಾಸಪ್ಪ, ನಾಗರಾಜಪ್ಪ, ಭೂತರಾಜ.ವಿ.ಎಸ್, ಸುಧಾಕರ.ಆರ್, ಗೋವಿಂದನಾಯ್ಕ್.ಟಿ, ಕೆ.ಶಿವಲಿಂಗಪ್ಪ, ಎಂ.ಇ.ಸುಜಾತ, ಮಂಜುನಾಥಸ್ವಾಮಿ.ಟಿ, ಎಂ.ಪಿ.ದಾರಕೇಶ್ವರಯ್ಯ, ಅಮೃತ್‍ರಾಜ, ಶ್ರೀನಿವಾಸ.ಎಸ್.ಹೆಚ್ ಅವರು ತಲಾ ಒಂದು ನಾಮಪತ್ರ ಸಲ್ಲಿಸಿದ್ದಾರೆ.

ಚಿತ್ರದುರ್ಗ ಲೋಕಸಭಾ ಕ್ಷೇತ್ರ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ಕೊನೆಯ ದಿನಾಂಕ ಮುಕ್ತಾಯವಾಗಿದ್ದು, ಚಿತ್ರದುರ್ಗ ಲೋಕಸಭಾ ಚುನಾವಣೆಗೆ 28 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆಯಾಗಿರುತ್ತದೆ. ಏಪ್ರಿಲ್ 05ರಂದು ಬೆಳಿಗ್ಗೆ 11 ಗಂಟೆಗೆ ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆಯಲಿದೆ.

Share This Article
Leave a Comment

Leave a Reply

Your email address will not be published. Required fields are marked *