Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ಲೋಕಸಭಾ ಚುನಾವಣೆ | ಈ ಬಾರಿ ಬಿಜೆಪಿಯಿಂದ ರಘುಚಂದನ್‍ ಗೆ ಟಿಕೆಟ್ ನೀಡಿ : ತಿಪ್ಪೇಸ್ವಾಮಿ

Facebook
Twitter
Telegram
WhatsApp

 

 

ವರದಿ ಮತ್ತು ಫೋಟೋ ಕೃಪೆ :
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಫೆ. 15 :  ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಇದುವರೆವಿಗೂ ಹೊರಗಿನವರು ಬಂದು ಆಯ್ಕೆಯಾಗಿದ್ದಾರೆ, ಹೊರೆತು ಜಿಲ್ಲೆಯ ಅಭಿವೃದ್ದಿಯ ಬಗ್ಗೆ ಯಾವ ಕಾಳಜಿಯನ್ನು ವಹಿಸಿಲ್ಲ, ಈ ಹಿನ್ನಲೆಯಲ್ಲಿ ಈ ಭಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಥಳೀಯರಾದ ರಘುಚಂದನ್‍ರವರಿಗೆ ಟಿಕೆಟ್ ನೀಡುವಂತೆ ಪಕ್ಷದ ಮುಖಂಡರನ್ನು ರಾಷ್ಟ್ರೀಯ ಈಡಿಗ ಮಹಾ ಮಂಡಳಿಯ ಜಿಲ್ಲಾಧ್ಯಕ್ಷರಾದ ತಿಪ್ಪೇಸ್ವಾಮಿ ಒತ್ತಾಯಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಚಿತ್ರದುರ್ಗ ಜಿಲ್ಲೆಯ ಅಕ್ಕ-ಪಕ್ಕದ ಜಿಲ್ಲೆಗಳಾದ ದಾವಣಗರೆ, ತುಮುಕೂರು ಜಿಲ್ಲೆಗಳು ಸಾಕಷ್ಟು ಪ್ರಮಾಣದಲ್ಲಿ ಅಭಿವೃದ್ದಿಯಾಗಿದೆ.  ಇದಕ್ಕೆ ಕಾರಣ ಅಲ್ಲಿ ಸ್ಥಳೀಯರು ಲೋಕಸಭಾ ಸದಸ್ಯರಾಗಿದ್ದಾರೆ. ಇದರಿಂದ ಅವರಲ್ಲಿ ಬದ್ದತೆ ಇದ್ದು ಕ್ಷೇತ್ರವನ್ನು ಅಭಿವೃದ್ದಿ ಮಾಡಿದ್ದಾರೆ. ಆದರೆ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸದಸ್ಯರು ಹೊರಗಿನವರಾಗಿದ್ದಾರೆ. ಅವರಿಗೆ ಕ್ಷೇತ್ರದ ಅಭಿವೃದ್ದಿ ಬಗ್ಗೆ ಕಾಳಜಿ ಇಲ್ಲ ಕ್ಷೇತ್ರವನ್ನು ಅಭಿವೃದ್ದಿ ಮಾಡಬೇಕೆಂಬ ಆಸೆಯೂ ಸಹಾ ಇಲ್ಲ ಇದರಿಂದ ಚಿತ್ರದುರ್ಗ ಕಳೆದ 20 ವರ್ಷದ ಹಿಂದೆ ಯಾವ ರೀತಿ ಇದೆ ಈಗಲೂ ಸಹಾ ಅದೇ ರೀತಿ ಇದೆ ಎಂದು ಆರೋಪಿಸಿದರು.

ಈ ಭಾರಿಯು ಲೋಕಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷವಾದ ಬಿಜೆಪಿ ಹೊರಗಿನವರಿಗೆ ಪಕ್ಷದ ಟಿಕೇಟ್ ನೀಡುವ ಬದಲು ಸ್ಥಳಿಯರಿಗೆ ಟೀಕೇಟ್ ನೀಡಿದರೆ ಅವರು ಗೆಲುವು ಸಾಧಿಸುವುದಲ್ಲಿಯೂ ಮಂದೆ  ಇರುತ್ತಾರೆ ಅಲ್ಲದೆ ಚಿತ್ರದುರ್ಗವನ್ನು ಅಭೀವೃದ್ದಿ ಮಾಡುತ್ತಾರೆ. ಈ ಹಿನ್ನಲೆಯಲ್ಲಿ ಬಿಜೆಪಿಯವತಿಯಿಂದ ಶಾಸಕ ಎಂ. ಚಂದ್ರಪ್ಪರವರ ಪುತ್ರರಾದ ರಘುಚಂದನ್ ರವರಿಗೆ ಟಿಕೆಟ್ ನೀಡುವುದರ ಮೂಲಕ ಚಿತ್ರದುರ್ಗ ಲೋಕಸಭಾ ಕ್ಷೇತ್ರವನ್ನು ಅಭಿವೃದ್ದಿ ಮಾಡಬೇಕಿದೆ ಇಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಅವಕಾಶ ಇದ್ದು ಇದರ ಬಗ್ಗೆ ಇದುವರೆವಿಗೂ ಯಾವ ಸಂಸದರು ಸಹಾ ಗಮನ ನೀಡಿಲ್ಲ ಬರೀ ಸಭೆಯನ್ನು ಮಾಡುವುದರ ಮೂಲಕ ಕಾಗದದಲ್ಲಿ ಅಭಿವೃದ್ದಿಯನ್ನು ತೋರಿಸುತ್ತಿದ್ದಾರೆ ಎಂದು ತಿಪ್ಪೇಸ್ವಾಮಿ ದೂರಿದರು.

ಈ ಭಾಗಕ್ಕೆ ಯಾವುದೇ ರೀತಿಯ ಕೃಗಾರಿಕೆಗಳಾಗಲಿ, ಕಂಪನಿಗಳಾಗಲಿ ಬಾರದೇ ಇರುವುದರಿಂದ ಇಲ್ಲಿನ ಯುವ ಜನತೆ ಕೆಲಸವನ್ನು ಹುಡುಕಿಕೊಂಡು ಬೇರೆ ಜಿಲ್ಲೆಗಳಿಗೆ ಹೋಗುತ್ತಿದ್ದಾರೆ. ಇದರಿಂದ ನಮ್ಮ ಜಿಲ್ಲೆ ಯುವ ಸಂಪತ್ತು ಖಾಲಿಯಾಗುತ್ತಿದೆ ನಮ್ಮ ಯುವ ಜನತೆಯನ್ನು ಇಲ್ಲಿಯೇ ಹಿಡಿದಿಟ್ಟುಕೊಳ್ಳುವಂತಹ ಕೈಗಾರಿಕೆಗಳು ವಿವಿಧ ಕಂಪನಿಗಳು ಬರುವಂತೆ ಮಾಡಬೇಕಿರುವುದು ಚುನಾಯಿತ ಪ್ರತಿನಿಧಿಗಳ ಕೆಲಸವಾಗಿದೆ ಆದರೆ ಇದನ್ನು ಯಾರು ಸಹಾ ಮಾಡುತ್ತಿಲ್ಲ ಎಂದು ಆಕ್ಷೇಪಿಸಿದರು.

ಗೋಷ್ಠಿಯಲ್ಲಿ ಜಿಲ್ಲಾ ಉಪಾಧ್ಯಕ್ಷರ ಮನು, ಜಿಲ್ಲಾ ಕಾರ್ಯದರ್ಶಿ ಮೋಹನ್, ಸದಸ್ಯರಾದ ರಂಗನಾಥ್, ಗಂಗಾಧರ್, ಕುಮಾರ್ ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!