ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ ಮಾ. 28 : ಚಿತ್ರದುರ್ಗ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಸ್ಥಳೀಯರಿಗೆ ಬಿಜೆಪಿ ಟಿಕೆಟ್ ನೀಡದೆ 500 ಕಿಮೀ ದೂರದಿಂದ ಕರೆ ತಂದು ಅಭ್ಯರ್ಥಿ ಹಾಕುವ ಅವಶ್ಯಕತೆ ಏನಿತ್ತು, ಚಿತ್ರದುರ್ಗದಲ್ಲಿ ಯಾರೂ ಗಂಡಸರು ಇರಲಿಲ್ವವೇ ಎಂದು ಪಕ್ಷದ ಮುಖಂಡರನ್ನು ಬಿಜೆಪಿ ಯುವ ಮುಖಂಡ ರಘು ಚಂದನ್ ಪ್ರಶ್ನಿಸಿದ್ದಾರೆ.

ಚಿತ್ರದುರ್ಗದ ಅವರ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ನನಗೆ ಟಿಕೆಟ್ ಸಿಗುವ ಭರವಸೆ ಬಹಳವಿತ್ತು. ಅದರೆ ಜಿಲ್ಲೆಯ ಸ್ಥಳೀಯ ನಾಯಕರುಗಳೇ ಕಳ್ಳಿನರಪ್ಪನ ಆಟವಾಡಿ ನನಗೆ ಟಿಕೆಟ್ ತಪ್ಪಿಸಿದ್ದಾರೆ. ಕಾರಜೋಳರನ್ನು ಅಭ್ಯರ್ಥಿಯಾಗಿ ಘೋಷಿಸಿದ್ದು, ಖಂಡನೀಯ, ಪಕ್ಷದ ಕಾರ್ಯಕರ್ತರು ಮತ ಹಾಕಿಸಲು ಮಾತ್ರವೇ ಬೇಕೆ, ಚುನಾವಣೆಯಲ್ಲಿ ಸ್ಪರ್ಧಿಸಲು ಅವರಿಗೆ ಅರ್ಹತೆ ಇಲ್ಲವೆ? ಕಳೆದ ಬಾರಿ ಅನೇಕಲ್ ಅಭ್ಯರ್ಥಿ ಕರೆ ತಂದು ಹಾಕಿದ್ದರು. ಈ ಬಾರಿ ಮಧೋಳ್ ನಿಂದ ಅಭ್ಯರ್ಥಿಯನ್ನು ಕರೆ ತಂದಿದ್ದಾರೆ. ಇದು ಚಿತ್ರದುರ್ಗದ ದುರಂತ ಎಂದು ತಮ್ಮ ಆಕ್ರೋಶವನ್ನು ಹೂರ ಹಾಕಿದ್ದಾರೆ.
ಈ ಬಾರಿ ಟಿಕೆಟ್ ದೊರೆಯದೆಂಬ ಆಕಾಂಕ್ಷೆಯಲ್ಲಿ ನಾನಿದ್ದೆ, ಇದಕ್ಕೆ ಸಂಬಂಧಪಟ್ಟಂತೆ ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರನ್ನು ನಾನು ಬಹಳ ನಂಬಿದ್ದೆ ಆದರೆ ಕೊನೆ ಗಳಿಗೆಯಲ್ಲಿ ನನಗೆ ಟಿಕೆಟ್ ಕೊಡಿಸುವಲ್ಲಿ ಅನ್ಯಾಯ ಮಾಡಿದ್ದಾರೆ. ಮದಕರಿನಾಯಕನ ಕಾಲದಿಂದಲೂ ಸ್ಥಳೀಯರಿಗೆ ಅನ್ಯಾಯವಾಗುತ್ತಿದೆ. ಇದನ್ನು ಯಾರೂ ಖಂಡಿಸದಿರುವುದು ನಮ್ಮ ದೌರ್ಬಾಗ್ಯವಾಗಿದೆ. ಮುಂದಿನ ದಿನಗಳಲ್ಲಿ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷದ ವಿರುದ್ಧವಾಗಲಿ ಮೋದಿ ವಿರುದ್ದವಾಗಲಿ ಯಾವುದೇ ತೀರ್ಮಾನ ತೆಗೆದುಕೊಳ್ಳದೆ ಕಾರ್ಯಕರ್ತರ ಅಭಿಪ್ರಾಯಕ್ಕೆ ಮನ್ನಣೆ ನೀಡಲಾಗುವುದು,ನನ್ನ ಮುಂದಿನ ನಡೆಯನ್ನು ನಾಳೆ ನಡೆಯುವ ಕಾರ್ಯರ್ತರ ಅಭಿಮಾನಿಗಳ ಸಭೆಯಲ್ಲಿ ತೀರ್ಮಾನ ಮಾಡಲಾಗುವುದು ಎಂದು ತಿಳಿಸಿದರು.
ಈ ಬಾರಿ ಟಿಕೆಟ್ ನನ್ನ ವಯಸ್ಸಿನ ಮತ್ತು ಅನುಭವದ ಮೇಲೆ ತಪ್ಪಿಸಲಾಗಿದೆ. ನನಗಲ್ಲದಿದ್ದರೂ ಜನಾರ್ಧನ ಸ್ವಾಮಿ ಅವರಿಗೆ ನೀಡಬಹುದಾಗಿತ್ತು.ಆದು ಬಿಟ್ಟು ಎಲ್ಲೋ ಇರುವ ವ್ಯಕ್ತಿಯನ್ನು ಕರೆ ತಂದು ಚುನಾವಣೆಯಲ್ಲಿ ನಿಲ್ಲಿಸುವ ಅವಶ್ಯಕತೆ ಏನಿತ್ತು. ಎಂದು ಪಕ್ಷದ ನಾಯಕರನ್ನು ಪ್ರಶ್ನಿಸಿದ ರಘುಚಂದನ್, ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಕಾರ್ಯಕರ್ತರಿಗೆ ಏನಾದರೂ ಅನ್ಯಾಯವಾದರೆ ದೂರದ ಐದುನೂರು ಕಿಮೀನಿಂದ ಯಾರೂ ಬರುವುದಿಲ್ಲ. ಸ್ಥಳಿಯರಾದ ನಾವುಗಳೇ ಕಾರ್ಯಕರ್ತರ ನೆರವಿಗೆ ಹೋಗಬೇಕಿದೆ ಇದು ಪಕ್ಷದ ಅರಿವಿಗೆ ಬಂದಿಲ್ಲ ಎಂದು ನೊಂದು ಹೇಳಿದರು.
ಕಳೆದ ಹಲವಾರು ಬಾರಿ ಚುನಾವಣೆಯಲ್ಲಿಯೂ ಸಹಾ ಎರಡು ರಾಷ್ಟ್ರೀಯ ಪಕ್ಷಗಳು ಹೂರಗಿನವರಿಗೆ ಮಣೆಯುನ್ನು ಹಾಕಿದ್ದಾರೆ, ಇದು ನಮ್ಮ ಚಿತ್ರದುರ್ಗದ ದುರಂತವಾಗಿದೆ, ಇಲ್ಲಿನ ಕಾರ್ಯಕರ್ತರನ್ನು ಪಕ್ಷದ ಮುಖಂಡರು ನಂಬುವುದೇ ಇಲ್ಲ ಇಲ್ಲಿ ಯಾರೇ ಹಾಕಿದರೂ ಸಹಾ ಕಾರ್ಯಕರ್ತರು ಗೆಲ್ಲಿಸುತ್ತಾರೆ ಎಂಬ ನಂಬಿಕೆಯಿದ್ದ ಈ ರೀತಿ ಮಾಡುತ್ತಿದ್ದಾರೆ ಇಂದಿನ ಚುನಾವಣೆ ಹಿಂದಿನಂತೆ ಇಲ್ಲ ಎರಡು ಪಕ್ಷದಲ್ಲಿಯೂ ಸಹಾ ಪಕ್ಷದ ಕಾರ್ಯಕರ್ತರು ಆಕ್ರೋಶಗೊಂಡಿದ್ದಾರೆ, ನಮ್ಮ ನಾಯಕರಿಗೆ ಟಿಕೇಟ್ ಸಿಗದಿದ್ದಕ್ಕೆ ಪಕ್ಷದ ಮುಖಂಡರ ವಿರುದ್ದ ಕೋಪಗೊಂಡಿದ್ದಾರೆ ಇದರ ಪರಿಣಾಮವನ್ನು ಮುಂದಿನ ಚುನಾವಣೆಯಲ್ಲಿ ಎದುರಿಸಲಿದ್ದಾರೆ ಎಂದು ತಿಳಿಸಿದರು.
ಈ ಸಮಯದಲ್ಲಿ ತಿಪ್ಪೇಸ್ವಾಮಿ, ಶ್ರೀಮತಿ,ರತ್ನಮ್ಮ,ಸಿದ್ದೇಶ, ಶಿವನಕೆರೆ ರಾಜಣ್ಣ, ತಿಪ್ಪೇಸ್ವಾಮಿ, ನಾಗೇಂದ್ರ ಸೇರಿದಂತೆ ಇತರರು ಇದ್ದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್