Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ಲೋಕಸಭಾ ಚುನಾವಣೆ ಟಿಕೆಟ್ ಗಾಗಿ ಪುತ್ರನ ಪರ ಬ್ಯಾಟಿಂಗ್..? ಸಚಿವ ಆರ್.ಬಿ ತಿಮ್ಮಾಪುರ ಅವರು ಹೇಳಿದ್ದೇನು ?

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.16 : ಲೋಕಸಭಾ ಚುನಾವಣೆಗಾಗಿ ರಾಜ್ಯದಲ್ಲಿ ಈಗಾಗಲೇ ತಯಾರಿ ನಡೆಯುತ್ತಿದೆ. ಈಗಾಗಲೆ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆಯೂ ಏರುತ್ತಲೆ ಇದೆ.  ಸಚಿವ ಆರ್.ಬಿ. ತಿಮ್ಮಾಪುರ ಮಗನಿಗಾಗಿ ಚಿತ್ರದುರ್ಗ ಲೋಕಸಭಾ ಚುನಾವಣಾ ಟಿಕೆಟ್ ಆಕಾಂಕ್ಷಿಯಾಗಿದ್ದಾರಾ ಎಂಬ ಚರ್ಚೆಗಳು ಶುರುವಾಗಿವೆ. ಅದಕ್ಕೆ ಕಾರಣ ಅವರೇಳಿದ ಮಾತುಗಳೇ.

ಈಗಾಗಲೇ ಜಿಲ್ಲೆಯಲ್ಲಿ ಈ ವಿಚಾರವಾಗಿ ಬಹಳಷ್ಟು ಗಾಸಿಪ್ ಹಬ್ಬಿದೆ. ಹೀಗಾಗಿ ಈ ಸಂಬಂಧ ಇಂದು ಮಾತನಾಡಿರುವ ಆರ್ ತಿಮ್ಮಾಪುರ, “ನಾನು ನನ್ನ ಮಗ ಅಭ್ಯರ್ಥಿ ಅಂತ ಹೇಳಿಲ್ಲ, ಇಲ್ಲಿನ ಜನ, ಶಾಸಕರು, ಹೈಕಮಾಂಡ್ ಎಲ್ರೂ ಒಪ್ಪಬೇಕು. ಚಿತ್ರದುರ್ಗ ಲೋಕಸಭಾ ಚುನಾವಣೆಗೆ ಟಿಕೆಟ್ ಗಾಗಿ ಇಲ್ಲಿನ ಜನನಾಯಕರು ಪ್ರಯತ್ನ ಮಾಡ್ತಾ ಇದ್ದಾರೆ. ಎಲ್ಲ ಹೈಕಮಾಂಡ್ ಗೆ ಬಿಟ್ಟ ವಿಚಾರ, ನಾನು ಒತ್ತಡ ಹಾಕಿ ನನ್ನ ಮಗನ ಆಯ್ಕೆ ಮಾಡೋಕೆ ಆಗಲ್ಲ ಎಂದರು. ನನ್ನ ಮಗನಿಗೆ ಟಿಕೆಟ್ ಬೇಕು ಎಂದರೆ ಇಲ್ಲಿನ ಜನ, ನಾಯಕರು ಎಲ್ಲರೂ ಒಪ್ಪಬೇಕು ಎಂದು ಹೇಳಿದರು.

 

ಮಾಜಿ ಸಚಿವ ಹೆಚ್. ಆಂಜನೇಯ, ಮಾಜಿ ಸಂಸದ ಬಿಎನ್. ಚಂದ್ರಪ್ಪ, ಜೆಜೆ ಹಟ್ಟಿ ತಿಪ್ಪೇಸ್ವಾಮಿ ಅವರು ಟಿಕೆಟ್ ಪ್ರಯತ್ನ ಮಾಡ್ತಿದ್ದಾರೆ. ಅವರ ಮಧ್ಯೆ ನೀನು ಪ್ರಯತ್ನ ಮಾಡು ಅಂತ ಹೇಳಿದ್ದೇನೆ ಎಂದರು ಪರೋಕ್ಷವಾಗಿ ಮಗ ಲೋಕಸಭಾ ಟಿಕೆಟ್ ಆಕಾಂಕ್ಷಿ ಎಂಬುದನ್ನು ಪರೋಕ್ಷವಾಗಿ ವ್ಯಕ್ತಪಡಿಸಿದರು.

ಇನ್ನು ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿರುವ ವಿಚಾರಕ್ಕೆ ಮಾತನಾಡಿದ ಅವರು, ಬ್ರಹ್ಮಾಂಡ ಭ್ರಷ್ಟಾಚಾರ ನಡೆಯುತ್ತಲೇ ಇದೆ. ಬಹಳ ವರ್ಷದಿಂದ ಇಲಾಖೆಯಲ್ಲಿ ಭ್ರಷ್ಟಾಚಾರ ಇದೆ. ಅದನ್ನು ನಾವು ಸುಧಾರಣೆ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ. ನಮ್ಮ ಇಲಾಖೆಯಲ್ಲಿ ಲಂಚಾವತಾರ ಇರೋದು ಗಮನಕ್ಕೆ ಇದೆ. ಇದು ಎಷ್ಟೋ ವರ್ಷಗಳ ಬಳುವಳಿಯಾಗಿ ಬಂದಿದೆ. ಯಾವ ಯಾವ ರೀತಿಯಲ್ಲಿ ತಡೆಯುವ ಕೆಲಸ ಮಾಡೋಣ. ಇದರ ಬಗ್ಗೆ ಸಿಎಂಗೆ ಹಲವಾರು ಬಾರಿ ಪತ್ರ ಬರೆದಿದ್ದಾರೆ. ನಾನು ಸಚಿವ ಆಗಿದ್ದೇನೆ ಬಗೆಹರಿಸುವೆ ಎಂದು ಭರವಸೆ ನೀಡಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!