Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಲೋಕಸಭಾ ಚುನಾವಣೆ: ಏ.03ರಂದು ಆರು ನಾಮಪತ್ರ ಸಲ್ಲಿಕೆ

---Advertisement---

ಚಿತ್ರದುರ್ಗ. ಏ.03:  ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಗೆ ಏಪ್ರಿಲ್ 03 ಬುಧವಾರದಂದು ಆರು ಅಭ್ಯರ್ಥಿಗಳು ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ಅವರಿಗೆ ಜಿಲ್ಲಾಧಿಕಾರಿಗಳ ಕಚೇರಿಯ ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ನಾಮಪತ್ರ ಸಲ್ಲಿಸಿದರು.

ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಸಾರ್ವತ್ರಿಕ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಗಳಾಗಿ ದೇವರಾಜ ಟಿ, ಕೆ.ನರಸಿಂಹಮೂರ್ತಿ, ಕೃಷ್ಣಮೂರ್ತಿ, ರಘುಕುಮಾರ್ ಎಸ್, ಕರುನಾಡ ಸೇವಕ ಪಕ್ಷದ ಅಭ್ಯರ್ಥಿಯಾಗಿ ಶಬರೀಶ್ ಆರ್, ಇಂಡಿಯನ್ ಮೂವ್‍ಮೆಂಟ್ ಪಾರ್ಟಿಯ ಅಭ್ಯರ್ಥಿಯಾಗಿ ಬಿ.ಟಿ.ರಾಮಸುಬ್ಬಯ್ಯ ಅವರು ಉಮೇದುವಾರಿಕೆ ಸಲ್ಲಿಸಿದರು.

ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಇದುವರೆಗೆ ಒಟ್ಟು  11 ಅಭ್ಯರ್ಥಿಗಳಿಂದ 14 ನಾಮಪತ್ರ ಸಲ್ಲಿಕೆಯಾಗಿರುತ್ತದೆ. ಏಪ್ರಿಲ್ 04 ನಾಮಪತ್ರ ಸಲ್ಲಿಸಲು ಕಡೆಯ ದಿನವಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment