Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಚಿತ್ರದುರ್ಗ ಲೋಕಸಭಾ ಚುನಾವಣೆ | ಈ ಬಾರಿ ಬಿಜೆಪಿ ಪಕ್ಷದಿಂದ ನಾನೂ ಸ್ಪರ್ಧಾಕಾಂಕ್ಷಿ : ನಿವೃತ್ತ ಜಿಲ್ಲಾಧಿಕಾರಿ ಶ್ರೀರಂಗಯ್ಯ

---Advertisement---

 

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ. ಫೆಬ್ರವರಿ 28 : ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿ ಹಲವಾರು ಜನಪರವಾದ ಕೆಲಸವನ್ನು ಮಾಡಿದ್ದೇನೆ. ನನ್ನ ಅಭಿಮಾನಿಗಳು ಹಿತೈಷಿಗಳು ರಾಜಕೀಯಕ್ಕೆ ಬನ್ನಿ ಎಂಬ ಒತ್ತಾಯದ ಮೇರೆಗೆ ರಾಜಕೀಯಕ್ಕೆ ಬರುತ್ತಿದ್ದು ಈ ಬಾರಿ ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಭಾರತೀಯ ಜನತಾ ಪಾರ್ಟಿವತಿಯಿಂದ ಟಿಕೆಟ್ ಕೇಳಿದ್ದೇನೆ. ಅದರೆ ಪಕ್ಷದ ವರಿಷ್ಟರು ಯಾವುದೇ ರೀತಿಯ ಭರವಸೆಯನ್ನು ನೀಡಿಲ್ಲ ಎಂದು ನಿವೃತ್ತ ಜಿಲ್ಲಾಧಿಕಾರಿ ಶ್ರೀರಂಗಯ್ಯ ತಿಳಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿ 2024 ರಲ್ಲಿ ಕೆಲಸವನ್ನು ಮಾಡಿದ್ದೇನೆ, ಇಲ್ಲಿನ ಹಲವಾರು ಸಮಸ್ಯೆಗಳಿಗೆ ಪರಿಹಾರವನ್ನು ಕಂಡು ಹಿಡಿದಿದ್ದೆನೆ. ಇಷ್ಟಲ್ಲದೆ ಹಲವಾರು ಜನತೆಯ ವಿವಿಧ ರೀತಿಯ ಸಮಸ್ಯೆಯನ್ನು ಬಗೆಹರಿಸಿದ್ದೇನೆ. ಇದರೊಂದಿಗೆ ಚಿತ್ರದುರ್ಗ ಜಿಲ್ಲೆಯ ಆರು ತಾಲ್ಲೂಕುಗಳ ಪರಿಚಯ ವಿದ್ದು, ಅಲ್ಲಿನ ಜನತೆಯ ನಡುವೆ ಒಡನಾಟ ಇದೆ, ಜನಪ್ರತಿನಿಧಿಗಳೊಂದಿಗೆ ಉತ್ತಮವಾದ ಬಾಂಧವ್ಯವನ್ನು ಹೊಂದಿದ್ದೇನೆ, 2014 ರಲ್ಲಿ ವಿವಿಧ ರೀತಿಯ ಚುನಾವಣೆಯನ್ನು ಮಾಡಿದ್ದೆನೆ, ಚಿತ್ರದುರ್ಗ ಲೋಕಸಭಾ 8 ಕ್ಷೇತ್ರಗಳ ಪರಿಚಯವಿದ್ದು, ಇಲ್ಲಿನ ಆಗು ಹೋಗುಗಳನ್ನು ತಿಳಿದಿದ್ದೇನೆ ಇದರಿಂದ ಈ ಬಾರಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಸ್ಫರ್ಧೆ ಮಾಡಲು ತೀರ್ಮಾನ ಮಾಡಿದ್ದೇನೆ ಎಂದರು.

ಬಿಜೆಪಿಯ ವರಿಷ್ಠರನ್ನು ಹಲವಾರು ಭೇಟಿಯಾಗಿದ್ದೇನೆ, ನನಗೆ ಟೀಕೆಟ್ ನೀಡುವಂತೆ ಮನವಿ ಮಾಡಿದ್ದೇನೆ ಈಗ ಹಾಲಿ ಸಂಸದರು ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಇದರಿಂದ ನಾನು ಕಣಕ್ಕೆ ಇಳಿದಿದ್ದೇನೆ, ಈ ಕ್ಷೇತ್ರದಲ್ಲಿ ಮಾದಿಗ ಎಡಗೈ ಸಮುದಾಯದವರ ಸುಮಾರು 4 ರಿಂದ 5 ಲಕ್ಷ ಮತದಾರರಿದ್ದಾರೆ. ಈಗಾಗಲೇ ಒಂದು ಬಾರಿ ಕ್ಷೇತ್ರದ ನಾಯಕರನ್ನು ಭೇಟಿ ಮಾಡಿದ್ದೇನೆ ಇನ್ನು ಮತದಾರರನ್ನು ಭೇಟಿ ಮಾಡಿಲ್ಲ ಮುಂದಿನ ದಿನದಲ್ಲಿ ಅವರನ್ನು ಸಹಾ ಭೇಟಿ ಮಾಡುವುದರ ಮೂಲಕ ಜಿಲ್ಲಾಧಿಕಾರಿಯಾಗಿದ್ದಾಗ ನಾನು ಮಾಡಿದ ವಿವಿಧ ರೀತಿಯ ಕೆಲಸಗಳನ್ನು ಅವರಿಗೆ ತಿಳಿಸಿಕೊಡಲಾಗುವುದು ಎಂದು ಶ್ರೀರಂಗಯ್ಯ ತಿಳಿಸಿದರು.

ಬಿಜೆಪಿ ಪಕ್ಷದಲ್ಲಿ ನಾನು ಟೀಕೇಟ್ ಕೇಳಿದ್ದೇನೆ ಪಕ್ಷ ತೀರ್ಮಾನ ಮಾಡಿ ನನಗೆ ಟೀಕೆಟ್ ನೀಡಿದರೆ ಸ್ಪರ್ದೆ ಮಾಡುತ್ತೇನೆ, ಇಲ್ಲವಾದಲ್ಲಿ ಕಾರ್ಯಕರ್ತನಾಗಿ ಪಕ್ಷ ಯಾರಿಗೆ ಟೀಕೇಟ್ ನೀಡುತ್ತದ್ದೇಯೇ ಅವರ ಪರವಾಗಿ ಕೆಲಸವನ್ನು ಮಾಡುತ್ತೇನೆ, ನಾನು ಸಹಾ ಸ್ಥಳಿಯನಾಗಿದ್ದೇನೆ, ಹೂರಗಿನಿಂದ ಬಂದವನಲ್ಲ, ಗಡಿ ಪ್ರದೇಶದಲ್ಲಿ ನಮ್ಮ ಪರಿವಾರ ಇದೆ ಎಂದು ಸ್ಪಷ್ಟಪಡಿಸಿದರು.

ಗೋಷ್ಟಿಯಲ್ಲಿ ತಾಲ್ಲೂಕು ಪಂಚಾಯಿ ಮಾಜಿ ಸದಸ್ಯ ಮೋಹನ್, ಗ್ರಾಮ ಪಂಚಾಯಿತಿ ಸದಸ್ಯ ರಂಗಯ್ಯ ಉಪಸ್ಥಿತರಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...