Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಲೋಕಸಭಾ ಸಾರ್ವತ್ರಿಕ ಚುನಾವಣೆ : ಅಭ್ಯರ್ಥಿಗಳಿಗೆ ಚಿಹ್ನೆ ಹಂಚಿಕೆ

---Advertisement---

 

ಚಿತ್ರದುರ್ಗ. ಏ.09:  ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆ ನಾಮಪತ್ರ ಹಿಂಪಡೆಯುವ ಪ್ರಕ್ರಿಯೆ ಸೋಮವಾರ ಮುಕ್ತಾಯಗೊಂಡಿದೆ. ಅಂತಿಮವಾಗಿ 20 ಅಭ್ಯರ್ಥಿಗಳು ಚುನಾವಣಾ  ಕಣದಲ್ಲಿ ಉಳಿದಿದ್ದಾರೆ. ಮಾನ್ಯತೆ ಪಡೆದ ರಾಷ್ಟೀಯ ಮತ್ತು ರಾಜ್ಯ ರಾಜಕೀಯ ಪಕ್ಷಗಳ ಅಭ್ಯರ್ಥಿಗಳನ್ನು ಹೊರತು ಪಡಿಸಿ, ಉಳಿದ ನೊಂದಾಯಿತ ರಾಜಕೀಯ ಪಕ್ಷಗಳು ಹಾಗೂ ಇತರೆ ಪಕ್ಷೇತರ ಅಭ್ಯರ್ಥಿಗಳಿಗೆ ಚುನಾವಣೆ ಚಿಹ್ನೆಯನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ಹಂಚಿಕೆ ಮಾಡಿದ್ದಾರೆ.

ಮಾನ್ಯತೆ ಪಡೆದ ರಾಷ್ಟೀಯ ಪಕ್ಷಗಳ ಅಭ್ಯರ್ಥಿಗಳಾದ,

ಬಹುಜನ ಸಮಾಜ ಪಾರ್ಟಿಯ ಅಶೋಕ ಚಕ್ರವರ್ತಿ-ಆನೆ,

ಭಾರತೀಯ ಜನತಾ ಪಾರ್ಟಿಯ ಗೋವಿಂದ ಮಕ್ತಪ್ಪ ಕಾರಜೋಳ-ಕಮಲ ಹಾಗೂ

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಬಿ.ಎನ್.ಚಂದ್ರಪ್ಪ-ಕೈ, ಚಿಹ್ನೆಯನ್ನು ಹೊಂದಿದ್ದಾರೆ.

ನೊಂದಾಯಿತ ರಾಜಕೀಯ ಪಕ್ಷಗಳ ಅಭ್ಯರ್ಥಿಗಳಾದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ನರಸಿಂಹರಾಜು ಸಿ.ಎನ್-ಬ್ಯಾಟರಿ ಟಾರ್ಚ್,

ಉತ್ತಮ ಪ್ರಜಾಕೀಯ ಪಾರ್ಟಿಯ ರಮೇಶ್ ನಾಯ್ಕ್ ಟಿ-ಆಟೋರಿಕ್ಷಾ,

ಇಂಡಿಯನ್ ಮೂವ್‌ಮೆಂಟ್ ಪಾರ್ಟಿಯ ಬಿ.ಟಿ.ರಾಮಸುಬ್ಬಯ್ಯ-ಸೀಟಿ(ವ್ಹಿಸಲ್),

ಕರುನಾಡ ಸೇವಕರ ಪಕ್ಷದ ಶಬರೀಶ್ ಆರ್-ತೆಂಗಿನ ತೋಟ,

ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಪಕ್ಷದ ಸುಜಾತ ಡಿ-ಪ್ರೆಷರ್ ಕುಕ್ಕರ್ ಚಿಹ್ನೆ ಪಡೆದಿದ್ದಾರೆ.

ಪಕ್ಷೇತರ ಅಭ್ಯರ್ಥಿಗಳಾದ
ಅಮೃತ ರಾಜ-ಗಣಕಯಂತ್ರ,
ಗಣೇಶ್-ಮೈಕ್,
ತುಳಸಿ.ಹೆಚ್-ಬಳೆಗಳು,
ಎಂ.ಪಿ.ದಾರಕೇಶ್ವರಯ್ಯ-ಸ್ಟೊತೋಸ್ಕೋಪ್, ಕೆ.ನರಸಿಂಹಮೂರ್ತಿ-ಕಲ್ಲಂಗಡಿ,
ನಾಗರಾಜಪ್ಪ-ಟ್ರಕ್,
ಭೂತರಾಜ ವಿ.ಎಸ್-ಸಿಸಿಟಿವಿ ಕ್ಯಾಮರಾ,
ಮಂಜುನಾಥ ಸ್ವಾಮಿ ಟಿ-ಹಡಗು,
ರಘುಕುಮಾರ್ ಎಸ್-ದೂರವಾಣಿ,
ಬಿ.ವೆಂಕಟೇಶ್ ಶಿಲ್ಪಿ-ಹಲಸಿನ ಹಣ್ಣು,
ಶ್ರೀನಿವಾಸ ಎಸ್.ಹೆಚ್-ಐಸ್‌ಕ್ರೀಂ,
ಸುಧಾಕರ ಆರ್-ಹಣ್ಣುಗಳ ಇರುವ ಬ್ಯಾಸ್ಕೆಟ್ ಇವರುವ ಚಿಹ್ನೆಗಳನ್ನು ಚುನಾವಣಾಧಿಕಾರಿ ಟಿ.ವೆಂಕಟೇಶ್ ಹಂಚಿಕೆ ಮಾಡಿದ್ದಾರೆ.

ರಾಷ್ಟೀಯ, ನೊಂದಾಯಿತ ಹಾಗೂ ಪಕ್ಷೇತರ ಅಭ್ಯರ್ಥಿಗಳು ನಿಗದಿ ಪಡಿದ ಈ ಚಿಹ್ನೆಗಳ ಅಡಿ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment