Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಲೋಕಸಭಾ ಸಾರ್ವತ್ರಿಕ ಚುನಾವಣೆ : 24 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧ

---Advertisement---

ಚಿತ್ರದುರ್ಗ.  ಏ.05: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಲ್ಲಿಕೆಯಾಗಿದ್ದ 28 ಅಭ್ಯರ್ಥಿಗಳ ನಾಮಪತ್ರಗಳ ಪೈಕಿ ನಾಲ್ವರ ನಾಮಪತ್ರಗಳು ತಿರಸ್ಕøತಗೊಂಡಿದ್ದು, 24 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿನ ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ಶುಕ್ರವಾರ 28 ಅಭ್ಯರ್ಥಿಗಳಿಂದ ಸಲ್ಲಿಕೆಯಾಗಿದ್ದ 36 ನಾಮಪತ್ರಗಳ ಪರಿಶೀಲನೆ ನಡೆಸಿದರು.

ಕ್ರಮಬದ್ಧವಾಗಿರುವ ನಾಮಪತ್ರಗಳ ವಿವರ: ಬಹುಜನ ಸಮಾಜ ಪಾರ್ಟಿಯ ಅಶೋಕ ಚಕ್ರವರ್ತಿ, ಭಾರತೀಯ ಜನತಾ ಪಾರ್ಟಿಯ ಗೋವಿಂದ ಮಕ್ತಪ್ಪ ಕಾರಜೋಳ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಬಿ.ಎನ್.ಚಂದ್ರಪ್ಪ,ಕರ್ನಾಟಕ ರಾಷ್ಟ್ರಸಮಿತಿ ಪಕ್ಷದ ನರಸಿಂಹರಾಜು ಸಿ.ಎನ್,ಉತ್ತಮ ಪ್ರಜಾಕೀಯ ಪಾರ್ಟಿಯ ರಮೇಶ್ ನಾಯ್ಕ್ ಟಿ, ಇಂಡಿಯನ್ ಮೂವ್‍ಮೆಂಟ್ ಪಾರ್ಟಿಯ ಬಿ.ಟಿ.ರಾಮಸುಬ್ಬಯ್ಯ, ಕರುನಾಡ ಸೇವಕರ ಪಕ್ಷದ ಶಬರೀಶ್ ಆರ್, ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಪಕ್ಷದ ಸುಜಾತ.ಡಿ, ಪಕ್ಷೇತರ ಅಭ್ಯರ್ಥಿಗಳಾದ ಅಮೃತ ರಾಜ, ಕೃಷ್ಣಮೂರ್ತಿ,ಗಣೇಶ್,ತುಳಸಿ ಹೆಚ್, ಎಂ.ಪಿ.ದಾರಕೇಶ್ವರಯ್ಯ, ಆರ್.ದಾಸಪ್ಪ,ದೇವರಾಜ ಟಿ, ಕೆ.ನರಸಿಂಹಮೂರ್ತಿ,ನಾಗರಾಜಪ್ಪ, ಭೂತರಾಜ ವಿ.ಎಸ್,ಮಂಜುನಾಥ ಸ್ವಾಮಿ ಟಿ,ರಘುಕುಮಾರ್ ಎಸ್, ಬಿ.ವೆಂಕಟೇಶ್, ಕೆ.ಶಿವಲಿಂಗಪ್ಪ, ಶ್ರೀನಿವಾಸ ಎಸ್.ಹೆಚ್, ಸುಧಾಕರ. ಆರ್ ಅವರ ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment