ಚಿತ್ರದುರ್ಗ : ಲೋಕಾಯುಕ್ತ ದಾಳಿ :  ಪಿಡಿಓ ಮತ್ತು ಎಸ್.ಡಿ.ಎ. ಸಿಬ್ಬಂದಿ ವಶಕ್ಕೆ…!

suddionenews
0 Min Read

ಚಿತ್ರದುರ್ಗ, (ನ.04): ಲೋಕಾಯುಕ್ತ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆ ವೇಳೆ ಲಂಚ ಸ್ವೀಕರಿಸಿದ ಆರೋಪದಲ್ಲಿ ಪಿಡಿಓ ಮತ್ತು ಎಸ್.ಡಿ.ಎ. ಸಿಬ್ಬಂದಿಯನ್ನು ಬಂಧಿಸಿದ್ದಾರೆ.

ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಅಂದನೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಶಿವಕುಮಾರ್ ಹಾಗೂ ದ್ವಿತೀಯ ದರ್ಜೆಯ ಸಹಾಯಕ ಸೋನು ಅವರು
ಗಂಜಿಗಟ್ಟೆ ಗ್ರಾಮದ ತಿಪ್ಪೇಸ್ವಾಮಿ ಎಂಬುವವರಿಂದ ಇ ಸ್ವತ್ತು ಮಾಡಿಕೊಡಲು 8 ಸಾವಿರ ರೂಪಾಯಿಗಳನ್ನು ಲಂಚಕ್ಕೆ ಬೇಡಿಕೆ ಇಟ್ಟು, ಲಂಚ ಸ್ವೀಕರಿಸುತ್ತಿದ್ದ ವೇಳೆ
ಲೋಕಾಯುಕ್ತ ಡಿವೈಎಸ್ಪಿ ಜಿ.ಮಂಜುನಾಥ್ ನೇತೃತ್ವದಲ್ಲಿ ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

Share This Article
Leave a Comment

Leave a Reply

Your email address will not be published. Required fields are marked *