ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜೂ.12 : ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಬಿಜೆಪಿ ಯುವ ಮುಖಂಡ ಎಂ.ಸಿ.ರಘುಚಂದನ್ ದೆಹಲಿಯಲ್ಲಿ ಕೇಂದ್ರ ಸಚಿವರುಗಳಾದ ಎಚ್.ಡಿ.ಕುಮಾರಸ್ವಾಮಿ, ಸೋಮಣ್ಣ ಇವರುಗಳನ್ನು ಭೇಟಿಯಾಗಿ ಶುಭ ಕೋರಿದರು.
ಮಧ್ಯ ಕರ್ನಾಟಕದ ಬಯಲುಸೀಮೆ ಚಿತ್ರದುರ್ಗದಲ್ಲಿ ಕೈಗಾರಿಕೆಯನ್ನು ಸ್ಥಾಪಿಸಿ ನಿರುದ್ಯೋಗಿಗಳ ಕೈಗೆ ಕೆಲಸ ನೀಡಬೇಕು. ಭದ್ರಾಮೇಲ್ದಂಡೆ ಯೋಜನೆ ಶೀಘ್ರವೇ ಪೂರ್ಣಗೊಳ್ಳುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವುದರ ಜೊತೆಗೆ ಚಿತ್ರದುರ್ಗದಲ್ಲಿ ಶೀಘ್ರವೇ ಮೆಡಿಕಲ್ ಕಾಲೇಜು ಕಟ್ಟಡ ಪೂರ್ಣಗೊಳಿಸಿ ಜಿಲ್ಲೆಯ ಬಡವರಿಗೆ ಸುಲಭವಾಗಿ ವೈದ್ಯಕೀಯ ಚಿಕಿತ್ಸೆ ದೊರಕುವಂತೆ ಮಾಡಬೇಕೆಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಸಚಿವ ಸೋಮಣ್ಣ ಇವರುಗಳಲ್ಲಿ ಮನವಿ ಮಾಡಿದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.









