Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದಲ್ಲಿ ಮೆಡಿಕಲ್ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ..!

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 01 : ಆತನ ಭವಿಷ್ಯ ಉಜ್ವಲವಾಗುತ್ತದೆ.. ಮಗ ಮುಂದೆ ಡಾಕ್ಟರ್ ಆಗುತ್ತಾನೆ ಎಂದು ಪೋಷಕರು ಅದೆಷ್ಟು ಕನಸು ಕಂಡಿದ್ದರೋ ಏನೋ. ಆದರೆ ಆತನಿಗೆ ಡಾಕ್ಟರ್ ಪದವಿಯೇ ಕಂಟಕ ತಂದಿದೆ. ಓದುವುದಕ್ಕೆ ಕಷ್ಟ ಎಂದುಕೊಂಡಾತ ಭವಿಷ್ಯದ ಬಗ್ಗೆಯೂ ಯೋಚನೆ ಮಾಡದೆ, ಬದುಕನ್ನೇ ಕೊನೆಗೊಳಿಸಿಕೊಂಡಿದ್ದಾನೆ.

ಈತನ ಹೆಸರು ಮನೋಜ್. ಈಗಿನ್ನು 22 ವರ್ಷ. ಕನಸು ಜಿಗುರಿದ್ದ ವಯಸ್ಸು. ಬದುಕಿಗಾಗಿ ಏನನ್ನಾದರೂ ಮಾಡಬೇಕೆಂದುಕೊಳ್ಳುವ ವಯಸ್ಸು. ಮೆಡಿಕಲ್ ಓದುತ್ತಿದ್ದವ ಆತ್ಮಹತ್ಯೆಗೆ ಶರಣಾಗಿದ್ದಾನೆ. ಚಿತ್ರದುರ್ಗದ ಬಸವೇಶ್ವರ ಕಾಲೇಜಿನಲ್ಲಿ ಎರಡನೇ ವರ್ಷದ ಪದವಿಯಲ್ಲಿದ್ದ. ಮೆಡಿಕಲ್ ಹಾಸ್ಟೇಲಿನಲ್ಲಿಯೇ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ.

ಈತ ಹಾಸನ ಮೂಲದ ವಿದ್ಯಾರ್ಥಿ. ಮೆಡಿಕಲ್ ಓದಲಿ ಎಂದು ತಂದೆ ತಾಯಿ ಚಿತ್ರದುರ್ಗದ ಕಾಲೇಜಿಗೆ ಸೇರಿಸಿದ್ದರು. ಚೆನ್ನಾಗಿ ಓದಲಿ ಎಂದು ಹಾಸ್ಟೆಲ್ ವ್ಯವಸ್ಥೆ ಕೂಡ ಮಾಡಿದ್ದರು. ಆದರೆ ಆ ಓದುವುದೇ ಒತ್ತಡವಾಗಿದೆ. ಡೆತ್ ನೋಟ್ ಬರೆದಿಟ್ಟಿರುವ ಮನೋಜ್, ನನ್ನ ಸಾವಿಗೆ ನಾನೇ ಕಾರಣ, ಓದುವ ಒತ್ತಡದಿಂದ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಡೆತ್ ನೋಟ್ ಬರೆದಿಟ್ಟಿದ್ದಾನೆ. ಹಾಸ್ಟೇಲ್ ಗೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮೃದೇಹವನ್ನು ಸರ್ಕಾರಿ ಆಸ್ಪತ್ರೆಗೆ ಪೋಸ್ಟ್ ಮಾರ್ಟಮ್ ಕಳುಹಿಸಲಾಗಿದೆ. ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ಓದುವುದಕ್ಕೆ ಕಷ್ಟವಾಗ್ತಾ ಇದೆ ಎಂದು ಹೇಳಿದ್ದರೆ ಮನೆಯಲ್ಲಿ ಅರ್ಥ ಮಾಡಿಕೊಳ್ಳುತ್ತಿದ್ದರೋ ಏನೋ. ಆದರೆ ಜೀವನವನ್ನೇ ತೆಗೆದುಕೊಳ್ಳುವ ಹಂತಕ್ಕೆ ತಲುಪಬಾರದಿತ್ತು. ಈಗ ಆ ಹುಡುಗನ ಬದುಕು ನಾಶ, ತಂದೆ ತಾಯಿಯ ಕನಸು ನುಚ್ಚು ನೂರು. ಮಗನನ್ನು ಕಳೆದುಕೊಂಡ ಪೋಷಕರು ಕಣ್ಣೀರಲ್ಲಿ ಕೈತೊಳೆಯುತ್ತಿದ್ದಾರೆ. ದುಃಖದಲ್ಲಿ ಮುಳುಗಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶ್ವಾಸ ಇರುವವರೆಗೂ ವಿಶ್ವಾಸ ಕಳೆದುಕೊಳ್ಳಬೇಡಿ : ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

    ಸುದ್ದಿಒನ್ : ಶ್ವಾಸ ಇರುವವರಿಗೂ ವಿಶ್ವಾಸ ಕಳೆದುಕೊಳ್ಳಬೇಡಿ ಎಂದು ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದರು. ಮಾಲ್ಡೀವ್ಸ್ ದೇಶದ ವಿಲ್ಲಾ ನೌಟೀಕ ಪ್ಯಾರಡೇಸ್ ದ್ವೀಪದಲ್ಲಿ ಶುಕ್ರವಾರ ನಡೆದ ವಿಶ್ವ

ಡಿ.ಕೆಂಪಣ್ಣನವರು ತಮ್ಮ ಜೀವಿತಾವಧಿಯ ಕೊನೆಯವರೆಗೂ ಭ್ರಷ್ಠಾಚಾರದ ವಿರುದ್ಧ ಹೋರಾಡಿದರು : ಕೆ.ಮಲ್ಲೇಶಪ್ಪ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.20 : ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣನವರ ನಿಧನಕ್ಕೆ ಜಿಲ್ಲಾ ಗುತ್ತಿಗೆದಾರರ ಸಂಘದಿಂದ

ಶಾಸಕ ಮುನಿರತ್ನ ವಿರುದ್ಧ ದೌರ್ಜನ್ಯ ತಡೆ ಕಾಯಿದೆಯಡಿ ಪ್ರಕರಣ ದಾಖಲಿಸಿ : ಎಸ್.ಜಯಣ್ಣ ಮನವಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.20 : ಗುತ್ತಿಗೆದಾರನನ್ನು ಮನೆಗೆ ಕರೆಸಿಕೊಂಡು ಲಂಚಕ್ಕೆ ಬೇಡಿಕೆಯಿಟ್ಟು ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಬೆಂಗಳೂರು ರಾಜರಾಜೇಶ್ವರಿ

error: Content is protected !!