ಚಿತ್ರದುರ್ಗ | ಅತ್ಯುತ್ತಮ ಸಹಕಾರ ಬ್ಯಾಂಕ್ ಪ್ರಶಸ್ತಿ ಮುಡಿಗೇರಿಸಿಕೊಂಡ ಮರ್ಚೆಂಟ್ಸ್ ಬ್ಯಾಂಕ್

1 Min Read

 

ಸುದ್ದಿಒನ್, ಚಿತ್ರದುರ್ಗ, ನ. 16 – ನಗರದ ಚಳ್ಳಕೆರೆ ರಸ್ತೆಯಲ್ಲಿರುವ ಶ್ರೀರಾಮ ಕಲ್ಯಾಣ ಮಂಟಪದಲ್ಲಿ ಅಖಿಲ ಭಾರತ 71ನೇ ಸಹಕಾರ ಸಪ್ತಾಹ ನಡೆಯಿತು. ಇದೇ ಸಂದರ್ಭದಲ್ಲಿ ನಗರದ ದಿ ಮರ್ಚೆಂಟ್ಸ್ ಸೌಹಾರ್ದ ಸಹಕಾರ ಬ್ಯಾಂಕನ್ನು ರಾಜ್ಯದ ಅತ್ಯುತ್ತಮ ಸಹಕಾರ ಬ್ಯಾಂಕೆಂದು ಗುರುತಿಸಿ, ಪ್ರಶಸ್ತಿ ನೀಡಲಾಯಿತು.

ಬ್ಯಾಂಕಿನ ಆಡಳಿತ ಮಂಡಳಿ ಪರವಾಗಿ ಬ್ಯಾಂಕಿನ ನಿರ್ದೇಶಕ ರಘುರಾಮ ರೆಡ್ಡಿ, ಬ್ಯಾಂಕಿನ ಸಿಬ್ಬಂದಿ ಪರವಾಗಿ ಬ್ಯಾಂಕಿನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಆರ್. ಮಲ್ಲಿಕಾರ್ಜುನ ಅವರಿಗೆ ಪ್ರಶಸ್ತಿ ಫಲಕ, ಪ್ರಶಸ್ತಿ ಪತ್ರ ನೀಡಿ ಸನ್ಮಾನಿಸಲಾಯಿತು.

ಬ್ಯಾಂಕು ಇದುವರೆಗೂ ಪಡೆದಿರುವ ಪ್ರಶಂಸೆಗಳ ಸಾಲಿಗೆ ಅತ್ಯುತ್ತಮ ಸಹಕಾರ ಪ್ರಶಸ್ತಿ ಪಡೆಯುವುದರೊಂದಿಗೆ ಈ ಪ್ರಶಸ್ತಿಯನ್ನು ಮುಡಿಗೇರಿಸಿಕೊಳ್ಳುವ ಮೂಲಕ ಗರಿ ಮೂಡಿದಂತಾಗಿದೆ.

Share This Article
Leave a Comment

Leave a Reply

Your email address will not be published. Required fields are marked *