ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ ಮೇ, 20 : ಕರ್ನಾಟಕ ಕಾಂಗ್ರೆಸ್ ಸಮಿತಿ ಕಾರ್ಮಿಕ ವಿಭಾಗದ ವತಿಯಿಂದ ಬೆಂಗಳೂರಿನಲ್ಲಿ ಇತ್ತಿಚೇಗೆ ನಡೆದ ವಿಶ್ವ ಕಾರ್ಮಿಕ ದಿನಾಚರಣೆಯ ಕಾರ್ಯಕ್ರಮದಲ್ಲಿ ಚಿತ್ರದುರ್ಗ ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷರಾದ ಸೈಯದ್ ಮೋಹಿದ್ದಿನ್ ರವರಿಗೆ ಕಾರ್ಮಿಕ ಸೇವಾ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಸೈಯದ್ ಮೋಹಿದ್ದಿನ್ರವರು ಕಾರ್ಮಿಕ ಕ್ಷೇತ್ರದಲ್ಲಿ ಧೃಡ ಸಂಕಲ್ಪ,ನಿಷ್ಠೆ, ಮತ್ತು ಅವಿರತ ಸೇವೆ ಸಲ್ಲಿಸಿರುವು ದನ್ನು ಗುರುತಿಸಿ ಕಾರ್ಮಿಕ ಸೇವಾ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಕೆ.ಪಿ.ಸಿ.ಸಿ. ಕಾರ್ಮಿಕ ವಿಭಾಗದ ರಾಜ್ಯಾದ್ಯಕ್ಷರಾದ ಕೆ.ಪುಟ್ಟಸ್ವಾಮಿ ಗೌಡ ಸೇರಿದಂತೆ ಸಚಿವ ಸಂಪುಟದ ವಿವಿಧ ಸಚಿವರು, ಸಂಸÀದರು,ಶಾಸಕರು, ವಿಧಾನ ಪರಿಷತ್ ಸದಸ್ಯರು ಭಾಗವಹಿಸಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.















