ಚಿತ್ರದುರ್ಗ | ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಎಸ್‌ಎಸ್‌ಎಲ್‌ಸಿ ಫಲಿತಾಂಶ : 100 ಕ್ಕೆ 100 ಫಲಿತಾಂಶ ಪಡೆದ 13 ಶಾಲೆಗಳು

ಸುದ್ದಿಒನ್, ಚಿತ್ರದುರ್ಗ, ಮೇ. 09 :   ಜಿಲ್ಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ 35 ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ಏಕಲವ್ಯ ಮಾದರಿ ವಸತಿ ಶಾಲೆಗಳ 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ.

ಒಟ್ಟು 1588 ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆ-1ಕ್ಕೆ ಹಾಜರಾಗಿದ್ದು 1539 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ. 96.91% ಫಲಿತಾಂಶ ಸಾಧಿಸಿದ್ದಾರೆ.

284 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 1044 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, 196 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ  ಹಾಗೂ 62 ವಿದ್ಯಾರ್ಥಿಗಳು ತೇರ್ಗಡೆ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ.

35 ವಸತಿ ಶಾಲೆಗಳ ಪೈಕಿ 13 ವಸತಿ ಶಾಲೆಗಳು ಶೇ. 100ಕ್ಕೆ 100 ಫಲಿತಾಂಶ ದಾಖಲಿಸಿರುತ್ತವೆ. ಅಲ್ಲದೇ ಸಾರ್ವಜನಿಕ ಶಿಕ್ಷಣ ಇಲಾಖೆಯ ಫಲಿತಾಂಶ ವಿಶ್ಲೇಷಣೆಯ Quality Weightage Percantage ನಲ್ಲಿ 34 ವಸತಿ ಶಾಲೆಗಳು ‘A’ ಗ್ರೇಡ್ ಪಡೆದಿರುತ್ತವೆ.

ಹಿರಿಯೂರಿನ ಜವಗೊಂಡನಹಳ್ಳಿಯ
ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ (ಪ.ಜಾತಿ-43),
ಇಲ್ಲಿನ ವಿದ್ಯಾರ್ಥಿನಿ ಕು|| ನವ್ಯಶ್ರೀ ಆರ್ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆ (ಹಿಂ.ವರ್ಗ-35) ದೇವರಕೊಟ್ಟ, ಹಿರಿಯೂರು ತಾ|| ಇಲ್ಲಿನ ವಿದ್ಯಾರ್ಥಿ ಕು|| ಸಂಜಯ್ ಎಸ್ ರವರು 625 ಕ್ಕೆ 616 (ಶೇ 98.56%) ಅಂಕಗಳನ್ನು ಪಡೆಯುವ ಮೂಲಕ ವಸತಿ ಶಾಲೆಯ ಕೀರ್ತಿಯನ್ನು ಹೆಚ್ಚಿಸಿರುತ್ತಾರೆ.

ಶ್ರೀ ಮತಿ ಇಂದಿರಾಗಾಂಧಿ ವಸತಿ ಶಾಲೆ ಕಡ್ಲೆಗುದ್ದು
ಶೇಕವಾರು ಫಲಿತಾಂಶ:-97.82
ಒಟ್ಟು ವಿದ್ಯಾರ್ಥಿಗಳು :- 46
ಅತ್ಯುನ್ನತ ಶ್ರೇಣಿ:-08
ಪ್ರಥಮ ದರ್ಜೆ :- 32
ದ್ವಿತೀಯ ದರ್ಜೆ:-05
ಅನುತ್ತೀರ್ಣ:-01

1.ಕೆಂಚಲಾ ಆರ್  566 -90.56
2.ತರುಣ ನಾಯಕೆ ಎನ್ ಯು 560 – 89.56
3.ನವೀನ ಎ 555 – 88.8
4.ಅನುಷ ಎಂ ಟಿ 549 – 87.84
5.ಹೇಮಂತರಾಜ್ ಆರ್ 543 – 86.88

ವಸತಿ ಶಾಲೆಗಳು ಇಂಗ್ಲಿಷ್ ಮಾಧ್ಯಮದಲ್ಲಿ ಅತ್ಯುತ್ತಮವಾದ ಶಿಕ್ಷಣವನ್ನು ನೀಡುತ್ತವೆ ಎಂಬುದಕ್ಕೆ ನಿರ್ದರ್ಶನವಾಗಿದೆ, ಪೋಷಕರು ಖಾಸಗಿ ಶಾಲೆಗಳ ವ್ಯಾಮೋಹನ ಬಿಟ್ಟು ಸರ್ಕಾರಿ ವಸತಿ ಶಾಲೆಗಳಿಗೆ ತಮ್ಮ ಮಕ್ಕಳನ್ನ ಸೇರಿಸುವಂತೆ ಕರೆ ನೀಡಿದ್ದಾರೆ ಮತ್ತು ವಿದ್ಯಾರ್ಥಿಗಳನ್ನು ಮತ್ತು ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರನ್ನು  ಪ್ರಾಂಶುಪಾಲರಾದ ರಮೇಶ ಆರ್ ಅಭಿನಂದಿಸಿದ್ದಾರೆ.

ವಸತಿ ಶಾಲೆಗಳ ವಿದ್ಯಾರ್ಥಿಗಳ ಈ ಸಾಧನೆಗೆ ವಿದ್ಯಾರ್ಥಿಗಳು ಪ್ರಾಂಶುಪಾಲರು ಮತ್ತು ಬೋಧಕ ಬೋಧಕೇತರ ಸಿಬ್ಬಂದಿಗಳಿಗೆ ಅಭಿನಂದನೆ ತಿಳಿಸಿರುವ ಚಿತ್ರದುರ್ಗ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಶ್ರೀ ಜಗದೀಶ್ ಹೆಬ್ಬಳ್ಳಿ ರವರು ಸರ್ಕಾರಿ ವಸತಿ ಶಾಲೆಗಳಲ್ಲಿ ಅತ್ಯುತ್ತಮ ಬೋಧಕ ಸಿಬ್ಬಂದಿ ವರ್ಗ, ಉಚಿತ ಊಟ-ವಸತಿ, ಪಠ್ಯಪುಸ್ತಕ, ಲೇಖನ ಸಾಮಗ್ರಿ, ಸಮವಸ್ತ್ರ, ವಿಜ್ಞಾನ ಪ್ರಯೋಗಾಲಯ, ಕಂಪ್ಯೂಟರ್ ಮತ್ತು ಸಂಗೀತ ಶಿಕ್ಷಣ ಮುಂತಾದ ಸೌಲಭ್ಯಗಳನ್ನು ಒದಗಿಸುತ್ತಿದ್ದು ಪೋಷಕರು ಖಾಸಗಿ ಶಾಲೆಗಳ ವ್ಯಾಮೋಹಕ್ಕೆ ಒಳಗಾಗದೇ ವಸತಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ದಾಖಲಿಸುವ ಮೂಲಕ ಅತ್ಯುತ್ತಮ ಗುಣಮಟ್ಟದ ಆಂಗ್ಲ ಮಾಧ್ಯಮ ಶಿಕ್ಷಣವನ್ನು ಪಡೆದುಕೊಳ್ಳಲು ಕರೆ ನೀಡಿದ್ದಾರೆ.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

39 minutes ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

1 hour ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

4 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago