ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಚಿತ್ರದುರ್ಗ ಆ. 24 : ಕಳೆದ ವಾರ ಸುರಿದ ಹೆಚ್ಚಿನ ಮಳೆಯಿಂದ ಹಾನಿಗೊಳಗಾದ ಚಿತ್ರದುರ್ಗ ತಾಲ್ಲೂಕಿನ ಓಬಣ್ಣನಹಳ್ಳಿ ಗ್ರಾಮಕ್ಕೆ ಸಂಸದ ಗೋವಿಂದ ಎಂ ಕಾರಜೋಳ ಶನಿವಾರ ಭೇಟಿ ನೀಡಿ, ಪರಿಶೀಲನೆ ನಡೆಸಿ ಸಂತ್ರಸ್ಥರ ಅಹವಾಲು ಆಲಿಸಿದರು.
ತೀವ್ರ ಮಳೆಯಿಂದಾಗಿ ಓಬಣ್ಣನಹಳ್ಳಿ ಗ್ರಾಮದ ಬಹುತೇಕ ಮನೆಗಳು ಹಾನಿಯಾಗಿರುವುದನ್ನು ಕಂಡು ಮರುಕ ವ್ಯಕ್ತಪಡಿಸಿ, ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುವಂತೆ ಸ್ಥಳದಲ್ಲಿದ್ದ ತಹಶೀಲ್ದಾರ್ ಅವರಿಗೆ ಸೂಚನೆ ನೀಡಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಗೋವಿಂದ ಎಂ.ಕಾರಜೋಳ ಅವರು, ಓಬಣ್ಣನಹಳ್ಳಿ ಸುತ್ತಮುತ್ತ ಬೆಟ್ಟ ಇದೆ. ಹೀಗಾಗಿ ಹೆಚ್ಚಿನ ಮಳೆಯಿಂದಾಗಿ, ಬೆಟ್ಟದಿಂದ ಮಳೆನೀರು ಹರಿದು ಇಡೀ ಗ್ರಾಮದ ಮನೆಗಳಿಗೆ ನೀರು ನುಗ್ಗಿ ಅನೇಕ ಮನೆಗಳು ಹಾನಿಗೀಡಾಗಿವೆ. ಮಳೆ ನೀರು ನುಗ್ಗಿದ್ದರಿಂದ ಮನೆಯ ಸಾಮಾಗ್ರಿಗಳು ಹಾನಿಯಾಗಿವೆ. ಈಗಾಗಲೇ ತಹಶೀಲ್ದಾರ್ ಅವರು ಹಾನಿಯಾದ ಮನೆಗಳಿಗೆ ₹ 5 ಸಾವಿರ ತುರ್ತು ಪರಿಹಾರ ನೀಡಿದ್ದಾರೆ ಎಂದು ತಿಳಿಸಿದ ಅವರು, ಗ್ರಾಮದಲ್ಲಿ ಮಳೆಯಿಂದ ಹಾನಿಯಾಗಿರುವ ಮನೆಗಳು, ಗುಡಿಸಲುಗಳನ್ನು ಪಟ್ಟಿ ಮಾಡಿ ಮನೆ ನಿರ್ಮಾಣಕ್ಕೆ ಕ್ರಮಕ್ಕೆ ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ಮಾಡಿದರು.
ಗ್ರಾಮಕ್ಕೆ ವಿಶೇಷ ಪ್ಯಾಕೇಜ್ ಭರವಸೆ:
ಓಬಣ್ಣನಹಳ್ಳಿ ಗ್ರಾಮಕ್ಕೆ ಎಸ್ಸಿಪಿ, ಟಿ ಎಸ್ ಪಿ ಯೋಜನೆ ಅನುದಾನದಲ್ಲಿ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಕೂಡಲೇ ಸಲ್ಲಿಸಿ ವಿಶೇಷ ಪ್ಯಾಕೇಜ್ ನೀಡಲು ಪ್ರಯತ್ನಿಸಲಾಗುವುದು ಎಂದು ಸಂಸದ ಗೋವಿಂದ ಎಂ ಕಾರಜೋಳ ಭರವಸೆ ನೀಡಿದರು.
ಗ್ರಾಮದಲ್ಲಿ ಲೇ ಔಟ್ ನಿರ್ಮಾಣ: ಓಬಣ್ಣನಹಳ್ಳಿ ಗ್ರಾಮದ ಕೆಲವರಿಗೆ ನಿವೇಶನದ ಸಮಸ್ಯೆ ಇದ್ದು, ಇದರ ಜೊತೆಗೆ ಹಳ್ಳ ಒತ್ತುವರಿ ಮಾಡಿಕೊಂಡು ಹಲವರು ಮನೆಗಳನ್ನು ನಿರ್ಮಿಸಿದ್ದು, ಅವುಗಳನ್ನು ತೆರವುಗೊಳಿಸಿ, ಗ್ರಾಮದಲ್ಲಿ 3 ಎಕೆರೆ ಗ್ರಾಮಠಾಣಾ ಲಭ್ಯವಿದ್ದು, ಇದನ್ನು ಲೇ ಔಟ್ ಮಾಡಲು ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಕಾನೂನು ಪ್ರಕಾರ ಹಕ್ಜುಪತ್ರಗಳನ್ನು ನೀಡಿ, ಮನೆ ನಿರ್ಮಾಣಕ್ಕೆ ಸರ್ಕಾರದಿಂದ ಅನುದಾನ ಕೊಡಿಸಲು ವ್ಯವಸ್ಥೆ ಮಾಡಲಾಗುವುದು ಎಂದು ಸಂಸದರು ಹೇಳಿದರು.
ಚಿತ್ರದುರ್ಗ ತಹಶೀಲ್ದಾರ್ ಡಾ.ನಾಗವೇಣಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್