ಚಿತ್ರದುರ್ಗ. ಸೆ.23 : ಇದೇ ಸೆಪ್ಟೆಂಬರ್ 24 ರಿಂದ ಜಿಲ್ಲಾ ಆಸ್ಪತ್ರೆಯಲ್ಲಿ ಎಂ.ಆರ್.ಐ ಸ್ಕ್ಯಾನಿಂಗ್ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವುದಾಗಿ ಜಿಲ್ಲಾ ಆಸ್ಪತ್ರೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಎಸ್.ಪಿ. ರವೀಂದ್ರ ಅವರು ತಿಳಿಸಿದ್ದಾರೆ.
ಎಂ.ಆರ್.ಐ ಸ್ಕ್ಯಾನಿಂಗ್ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವುದಾಗಿ KRSNAA DIAGNOSTICS LTD ಅವರು ಪತ್ರ ಮುಖೇನ ಮಾಹಿತಿ ನೀಡಿರುತ್ತಾರೆ. ಹೀಗಾಗಿ ಸಾರ್ವಜನಿಕರು ಮತ್ತು ರೋಗಿಗಳು ಸಹಕರಿಸಬೇಕು ಎಂದು ಜಿಲ್ಲಾ ಆಸ್ಪತ್ರೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.








