ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಚಿತ್ರದುರ್ಗ ಮೇ. 10 : ದೇಶದ ಹೆಮ್ಮೆಯ ವೀರ ಸೈನಿಕರಿಗೆ ಆತ್ಮಸ್ಥೈರ್ಯ ತುಂಬುವ ಹಾಗೂ ಅವರ ಜೀವ ರಕ್ಷಣೆಗಾಗಿ ನಗರದ ಮೆದೆಹಳ್ಳಿ ರಸ್ತೆಯಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಶನಿವಾರ ಅಯ್ಯಪ್ಪ ಸ್ವಾಮಿ ದೇವರಿಗೆ ವಿಶೇಷವಾದ ಹೂವಿನ ಅಲಂಕಾರ ಹಾಗೂ ಮಹಾ ಮೃತ್ಯುಂಜಯ ಹೋಮವನ್ನುನೆರವೇರಿಸಲಾಯಿತು.
ಪಾಕಿಸ್ತಾನದ ಉಗ್ರರ ವಿರುದ್ಧ ಹೋರಾಡುತ್ತಿರುವ ಭೂ ಸೇನೆ ವಾಯು ಸೇನೆ ಹಾಗೂ ನೌಕಾ ಸೇನೆ ಸೈನಿಕರಿಗೆ ಆತ್ಮಸ್ಥೈರ್ಯ ತುಂಬಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಪಹಲ್ಗಾವ್ನಲ್ಲಿ ಭಾರತೀಯರ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಗೆ ಪ್ರತೀಕವಾಗಿ ಆಪರೇಷನ್ ಸಿಂಧೂರ ಯಶಸ್ವಿಗಾಗಿ ಪೂಜೆ ಹಮ್ಮಿಕೊಳ್ಳ ಲಾಯಿತು.
ಜಾಗತಿಕ ಮಟ್ಟದಲ್ಲಿ ಉಗ್ರರ ಉತ್ಪಾದನಾ ಸ್ಥಾನವಾಗಿರುವ ಪಾಕಿಸ್ತಾನಕ್ಕೆ ಯುದ್ಧ ಮಾಡಲು ಸೈನಿಕರು ಮುಂದಾಗಿದ್ದಾರೆ ಭಾರತ ದೇಶಕ್ಕೂ ಹಾಗೂ ಸೈನಿಕರಿಗೂ ಯುದ್ಧದಲ್ಲಿ ಪಾಲ್ಗೊಳ್ಳುತ್ತಿರುವ ಅಧಿಕಾರಿಗಳು ಹಾಗೂ ಸಾರ್ವಜನಿಕರಿಗೂ ಯಾವುದೇ ರೀತಿಯ ಜೀವ ಹಾನಿಯಾಗದಿರಲಿ ಹಾಗೂ ಶತ್ರು ಸಂಹಾರವಾಗಲಿ. ಯುದ್ಧವು ಬೇಗನೆ ಯುದ್ಧ ಮುಗಿದು ದೇಶದಲ್ಲಿ ಶಾಂತಿ ನೆಲಸಲಿ ಶ್ರೀ ಅಯ್ಯಪ್ಪ ಸ್ವಾಮಿ ದೇವರಲ್ಲಿ ಪೂಜೆ ಹಾಗೂ ಸಂಕಲ್ಪ ಮಾಡಲಾಯಿತು .ವಿಶೇಷ ಪೂಜೆ ನಂತರ ದೇವಸ್ಥಾನಕ್ಕೆ ಬಂದಂತಹ ಸಾರ್ವಜನಿಕರಿಗೆ ಪ್ರಸಾದದ ವ್ಯವಸ್ಥೆಯನ್ನು ಮಾಡಲಾಯಿತು.
ಅಯ್ಯಪ್ಪ ಸ್ವಾಮಿ ದೇವಸ್ಥಾನದ ಅಧ್ಯಕ್ಷರಾದ ಶರಣ್ ಕುಮಾರ್, ಕಾರ್ಯದರ್ಶಿ ಎಂ ಪಿ ವೆಂಕಟೇಶ್ ಹಾಗೂ ದೇವಸ್ಥಾನದ ನಿರ್ದೇಶಕರಾದಂತಹ ಮೋಹನ್ ಕುಮಾರ್ ರೇಷ್ಮೆಮಂಜುನಾಥ್ ವಕೀಲರಾದ ವಿಜಯಕುಮಾರ್ ರಮೇಶ್ ಮೋಹನ್ ಗಾಂಧಿ ಹಾಗೂ ದೇವಸ್ಥಾನದ ಪ್ರಧಾನ ಅರ್ಚಕರಾದ ರಘು ರವರು ಉಪಸ್ಥಿತರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.



















