ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 06 : ತಾಲ್ಲೂಕಿನ
ತುರುವನೂರು ಗ್ರಾಮದ ಕಂದಾಯ ಇಲಾಖೆಯ ನಿವೃತ್ತ ಅಧಿಕಾರಿ ಮೃತ್ಯುಂಜಯಪ್ಪ ಬಿ. ಅವರು ನಿನ್ನೆ (ಫೆಬ್ರವರಿ. 05) ಸಂಜೆ ಬೆಂಗಳೂರಿನಲ್ಲಿ ನಿಧನರಾದರು.
ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಇಂದು (ಫೆಬ್ರವರಿ. 06) ಮಧ್ಯಾಹ್ನ 3:00ಗೆ ಬೆಂಗಳೂರಿನ ಸಂಭ್ರಮ ಕಾಲೇಜು ಹತ್ತಿರದ ವೀರಶೈವ ರುದ್ರಭೂಮಿಯಲ್ಲಿ ನೆರವೇರಿಸಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.











