ಚಿತ್ರದುರ್ಗದ ನಗರಸಭೆ ಪೌರ ಕಾರ್ಮಿಕರಿಂದ ಪರಿಸರ ಸ್ನೇಹಿ ಮಣ್ಣಿನ ಗಣೇಶ ಪ್ರತಿಷ್ಠಾಪಿಸುವಂತೆ ಜಾಗೃತಿ ಜಾಥಾ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ ಸೆ. 17 : ಚಿತ್ರದುರ್ಗ ನಗರಸಭೆ ಪೌರ ಕಾರ್ಮಿಕರಿಂದ ಪರಿಸರಕ್ಕೆ ಮಾರಕವಾಗಿರುವ ಪಿಒಪಿ (ಪ್ಲಾಸ್ಟರ್ ಆಫ್ ಪ್ಯಾರಿಸ್) ಗಣೇಶ ಮೂರ್ತಿಗಳ ಬದಲಾಗಿ ಪರಿಸರ ಸ್ನೇಹಿ ಮಣ್ಣಿನ ಗಣೇಶ ಪ್ರತಿಷ್ಠಾಪಿಸುವಂತೆ ನಡೆಸಿದ ಜಾಗೃತಿ ಜಾಥಾಕ್ಕೆ ಪೌರಾಯುಕ್ತರಾದ ಶ್ರೀಮತಿ ಎಂ.ರೇಣುಕಾ ಅವರು ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು
ಈ ಬಾರಿಯ ಗಣೇಶ ಚತುರ್ಥಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಬೇಕು. ಮಣ್ಣಿನಿಂದ ಮಾಡಿರುವ ಗಣೇಶ ಮೂರ್ತಿಗಳನ್ನು ಪೂಜಿಸಬೇಕು. ಪರಿಸರಕ್ಕೆ ಮಾರಕವಾಗಿರುವ ಹಾಗೂ ರಾಸಾಯನಿಕಯುಕ್ತ ಬಣ್ಣ ಲೇಪಿತ ಗಣೇಶ ಮೂರ್ತಿಗಳನ್ನು ಬಳಸದಂತೆ ಸಾರವಜನಿಕರಲ್ಲಿ ಮನವಿ ಮಾಡಿದರು.

ಗಾಂಧಿ ವೃತ್ತದಲ್ಲಿ  ಬೆಳಿಗ್ಗೆ 6:30 ರ ಸುಮಾರಿಗೆ ಪೌರ ಕಾರ್ಮಿಕರು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ, ಮಣ್ಣಿನ ಗಣೇಶನನ್ನು ಪೂಜಿಸಿ, ಪಿಓಪಿ ಮೂರ್ತಿಯನ್ನು ತ್ಯಜಿಸಿ ಎಂದು ಘೋಷಣೆಯನ್ನು ಕೂಗುವುದರ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.

ಈ ಸಂದರ್ಭದಲ್ಲಿ ನಗರಸಭೆಯ ಆರೋಗ್ಯ ನಿರೀಕ್ಷಕರಾದ ನಾಗರಾಜ್, ಶ್ರೀಮತಿ ಭಾರತಿ ಮತ್ತು ಬಸವರಾಜ್ ಸಿಬ್ಬಂದಿ ವರ್ಗದವರು ಸೇರಿದಂತೆ ಪೌರ ಕಾರ್ಮಿಕರು ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕಾವೇರಿ ವಿಚಾರಕ್ಕೆ ಕಣ್ಣೀರು ಹಾಕಿದ ಮಾಜಿ ಪ್ರಧಾನಿ ದೇವೇಗೌಡ..!

  ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುವುದಿಲ್ಲ ಎಂದು ಆಗ್ರಹಿಸಿ ಇಂದು ಹಲವಾರು ಸಂಘಟನೆಗಳು ಪ್ರತಿಭಟಿಸುತ್ತಿವೆ. ಈ ಮಧ್ಯೆ ಮಾಜಿ ಪ್ರಧಾನಿ ದೇವೇಗೌಡ್ರು ಸುದ್ದಿಗೋಷ್ಟಿ ನಡೆಸಿ, ಕಾವೇರಿ ವಿಚಾರಕ್ಕೆ ಕಣ್ಣೀರು ಹಾಕಿದ್ದಾರೆ‌. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ

ಹಿರಿಯೂರಿನಲ್ಲಿ ನಡೆದ ಜನತಾ ದರ್ಶನ ಹೇಗಿತ್ತು ? ಸಚಿವ ಸುಧಾಕರ್ ಅಧಿಕಾರಿಗಳಿಗೆ ನೀಡಿದ ಸೂಚನೆ ಏನು ? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್…!

  ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.25 : ಸಾರ್ವಜನಿಕರ ಅಹವಾಲು ಸ್ವೀಕರಿಸಿ, ಸ್ಥಳದಲ್ಲಿಯೇ ಪರಿಹಾರ ಒದಗಿಸಬೇಕು ಎಂದು ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ  ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಹಿರಿಯೂರು

ಹಿರಿಯೂರಿನಲ್ಲಿ ಜನತಾದರ್ಶನ ಕಾರ್ಯಕ್ರಮಕ್ಕೆ ಸಚಿವ ಡಿ. ಸುಧಾಕರ್ ಚಾಲನೆ : ಸಾರ್ವಜನಿಕರಿಂದ ಅಹವಾಲು ಸ್ವೀಕಾರ

  ಸುದ್ದಿಒನ್, ಹಿರಿಯೂರು, ಸೆಪ್ಟೆಂಬರ್.25 :  ನಗರದ ತಾಹಾ ಪ್ಯಾಲೇಸ್‌ನಲ್ಲಿ ಸೋಮವಾರ‌ ಜಿಲ್ಲಾ ಉಸ್ತುವಾರಿ ಸಚಿವರಾದ  ಡಿ. ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಜನತಾದರ್ಶನ ಕಾರ್ಯಕ್ರಮ ನೆಡಯಿತು. ಕಾರ್ಯಕ್ರಮದಲ್ಲಿ ಸಚಿವ ಡಿ. ಸುಧಾಕರ್

error: Content is protected !!