ಶೌಚಾಲಯ ಶುಚಿತ್ವ ಹಾಗೂ ನಿರ್ವಹಣೆಯನ್ನು ಕಾಪಾಡಲು ಚಿತ್ರದುರ್ಗ ನಗರಸಭೆ ವಿಫಲ : ನ್ಯಾಯಾಧೀಶರಾದ ವಿಜಯ್

suddionenews
1 Min Read

 

ವರದಿ ಮತ್ತು ಫೋಟೋ ಕೃಪೆ :
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ. ನ.24:  ನಗರದ ವಿವಿಧೆಡೆ ಇರುವ ಸಾರ್ವಜನಿಕ ಶೌಚಾಲಯಗಳಿಗೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಶುಕ್ರವಾರ ಭೇಟಿ ನೀಡಿ ಸ್ವಚ್ಛತೆ ಹಾಗೂ ಮೂಲಸೌಲಭ್ಯಗಳ ಪರಿಶೀಲನೆ ನಡೆಸಿದರು.

ನಗರದ ಸಂತೆಹೊಂಡದ ಸಮೀಪ, ಖಾಸಗಿ ಬಸ್‍ನಿಲ್ದಾಣದ ಬಳಿ ಇರುವ ಸಾರ್ವಜನಿಕ ಶೌಚಾಲಯಗಳಿಗೆ ಧಿಡೀರ್ ಭೇಟಿ ನೀಡಿ ಸ್ವಚ್ಛತೆ ಹಾಗೂ ಮೂಲಭೂತ ಸೌಲಭ್ಯಗಳ ಕುರಿತು ಪರಿಶೀಲಿಸಿದರು.

ನಗರಸಭೆಯ ಸಾರ್ವಜನಿಕ ಶೌಚಾಲಯಗಳು ಶುಚಿತ್ವವಿಲ್ಲದೇ ದುರ್ವಾಸನೆ ಬರುತ್ತಿದ್ದು ಮತ್ತು ಸರಿಯಾದ ನಿರ್ವಹಣೆ ಇಲ್ಲದೇ ಇರುವುದು ಕಂಡುಬಂದಿದ್ದರಿಂದ ಅಸಮಾಧಾನ ವ್ಯಕ್ತಪಡಿಸಿದ ಅವರು,  ಶೌಚಾಲಯ ಶುಚಿತ್ವ ಹಾಗೂ ನಿರ್ವಹಣೆಯನ್ನು ಕಾಪಾಡಲು ನಗರಸಭೆಯು ವಿಫಲವಾಗಿರುತ್ತದೆ ಹಾಗೂ ಇದರ ಜವಾಬ್ದಾರಿಯನ್ನು ಹೊಂದಿರುವ ಸಂಬಂಧಪಟ್ಟ ಅಧಿಕಾರಿಗಳಿಗೆ ಕರೆ ಮಾಡಿದರೂ ಸಹ ಕರೆ ಸ್ವೀಕರಿಸಿರುವುದಿಲ್ಲ ಎಂಬುದಾಗಿ ಬೇಸರಪಟ್ಟರು.

ಒಟ್ಟಾರೆ ನಗರದ ಸಾರ್ವಜನಿಕ ಶೌಚಾಲಯಗಳ ದುಸ್ಥಿತಿಯ ಬಗ್ಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಅಸಮಾಧಾನ ವ್ಯಕ್ತಪಡಿಸಿದರು.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks