Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಶೀಲ ಶಂಕಿಸಿ ಹೆಂಡತಿ ಕೊಲೆ : ಆರೋಪಿಗೆ ಜೀವಾವಧಿ ಶಿಕ್ಷೆ

---Advertisement---

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 10 : ಶೀಲ ಶಂಕಿಸಿ ಹೆಂಡತಿಯನ್ನು ಕೊಲೆ ಮಾಡಿದ್ದ ಅಪರಾಧಿ ಹನುಮಂತಪ್ಪನಿಗೆ ಚಿತ್ರದುರ್ಗ 1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು ₹50 ಸಾವಿರ ದಂಡ ವಿಧಿಸಿದೆ.

ಮೊಳಕಾಲ್ಕೂರು ತಾಲ್ಲೂಕಿನ ಚಿಕ್ಕೇರನಹಳ್ಳಿ ಗ್ರಾಮದಲ್ಲಿ ಆರೋಪಿ ಹನುಮಂತಪ್ಪ ಹೆಂಡತಿ ಸಾವಿತ್ರಮ್ಮ ಅವರೊಂದಿಗೆ ವಾಸವಿದ್ದರು. ಬೇರೆಯವರೊಂದಿಗೆ ಅನೈತಿಕ ಸಂಪರ್ಕ ಹೊಂದಿರುವುದಾಗಿ ಮತ್ತು ಆ ಕಾರಣಕ್ಕಾಗಿ ಪ್ರತಿದಿನವೂ ನನ್ನನ್ನು ಬಿಟ್ಟು ಹೊಲಕ್ಕೆ ಒಬ್ಬಳೇ ಹೋಗುತ್ತೀಯಾ ಎಂದು ಆಕೆಯ ಮೇಲೆ ಪದೇಪದೇ ಅನುಮಾನ ವ್ಯಕ್ತಪಡಿಸುತ್ತಿದ್ದು, ಈ ವಿಚಾರವಾಗಿ ದಿನಂಪ್ರತಿ ಜಗಳವಾಡುತ್ತಿದ್ದರು. ದಿನಾಂಕ 19-7-2023 ರಂದು ಪತ್ನಿ ಸಾವಿತ್ರಮ್ಮನನ್ನು ಮಚ್ಚಿನಿಂದ ಹೊಡೆದು ಸಾಯಿಸಿರುತ್ತಾನೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಂಪುರ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆಯನ್ನು ವಸಂತ ವಿಠಲ್ ಆಸೋಡೆ, ಪೋಲೀಸ್ ವೃತ್ತ ನಿರೀಕ್ಷಕರು, ಮೊಳಕಾಲ್ಮೂರು ಇವರು ಪೂರೈಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿರುತ್ತಾರೆ.

ನಂತರ ಪ್ರಕರಣವು ಚಿತ್ರದುರ್ಗ 1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಶಂಕರಪ್ಪ ನಿಂಬಣ್ಣ ಕಲ್ಕನಿ ಅವರು ವಿಚಾರಣೆ ಕೈಗೊಂಡಿದ್ದು, ವಾದ–ವಿವಾದ, ಸಾಕ್ಷಿದಾರರ ಹೇಳಿಕೆ ಆಲಿಸಿ ಆರೋಪಿ ಹನುಮಂತಪ್ಪ ಪತ್ನಿ ಸಾವಿತ್ರಮ್ಮನವರನ್ನು ಮಚ್ಚಿನಿಂದ ಹಲ್ಲೆ ಮಾಡಿ ಕೊಲೆ ಮಾಡಿರುವುದು ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ ರೂ.50,000/- ದಂಡ ವಿಧಿಸಿ ಇಂದು (ಮಾರ್ಚ್. 10) ಶಿಕ್ಷೆ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಅಪರ ಸರ್ಕಾರಿ ಅಭಿಯೋಜಕರಾದ ಎನ್.ಎಸ್. ಮಲ್ಲಯ್ಯ ವಿಚಾರಣೆಯನ್ನು ನಡೆಸಿ ವಾದ ಮಂಡಿಸಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment