ಚಿತ್ರದುರ್ಗ | ಶೀಲ ಶಂಕಿಸಿ ಹೆಂಡತಿ ಕೊಲೆ : ಆರೋಪಿಗೆ ಜೀವಾವಧಿ ಶಿಕ್ಷೆ

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 10 : ಶೀಲ ಶಂಕಿಸಿ ಹೆಂಡತಿಯನ್ನು ಕೊಲೆ ಮಾಡಿದ್ದ ಅಪರಾಧಿ ಹನುಮಂತಪ್ಪನಿಗೆ ಚಿತ್ರದುರ್ಗ 1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು ₹50 ಸಾವಿರ ದಂಡ ವಿಧಿಸಿದೆ.

ಮೊಳಕಾಲ್ಕೂರು ತಾಲ್ಲೂಕಿನ ಚಿಕ್ಕೇರನಹಳ್ಳಿ ಗ್ರಾಮದಲ್ಲಿ ಆರೋಪಿ ಹನುಮಂತಪ್ಪ ಹೆಂಡತಿ ಸಾವಿತ್ರಮ್ಮ ಅವರೊಂದಿಗೆ ವಾಸವಿದ್ದರು. ಬೇರೆಯವರೊಂದಿಗೆ ಅನೈತಿಕ ಸಂಪರ್ಕ ಹೊಂದಿರುವುದಾಗಿ ಮತ್ತು ಆ ಕಾರಣಕ್ಕಾಗಿ ಪ್ರತಿದಿನವೂ ನನ್ನನ್ನು ಬಿಟ್ಟು ಹೊಲಕ್ಕೆ ಒಬ್ಬಳೇ ಹೋಗುತ್ತೀಯಾ ಎಂದು ಆಕೆಯ ಮೇಲೆ ಪದೇಪದೇ ಅನುಮಾನ ವ್ಯಕ್ತಪಡಿಸುತ್ತಿದ್ದು, ಈ ವಿಚಾರವಾಗಿ ದಿನಂಪ್ರತಿ ಜಗಳವಾಡುತ್ತಿದ್ದರು. ದಿನಾಂಕ 19-7-2023 ರಂದು ಪತ್ನಿ ಸಾವಿತ್ರಮ್ಮನನ್ನು ಮಚ್ಚಿನಿಂದ ಹೊಡೆದು ಸಾಯಿಸಿರುತ್ತಾನೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಂಪುರ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆಯನ್ನು ವಸಂತ ವಿಠಲ್ ಆಸೋಡೆ, ಪೋಲೀಸ್ ವೃತ್ತ ನಿರೀಕ್ಷಕರು, ಮೊಳಕಾಲ್ಮೂರು ಇವರು ಪೂರೈಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿರುತ್ತಾರೆ.

ನಂತರ ಪ್ರಕರಣವು ಚಿತ್ರದುರ್ಗ 1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಶಂಕರಪ್ಪ ನಿಂಬಣ್ಣ ಕಲ್ಕನಿ ಅವರು ವಿಚಾರಣೆ ಕೈಗೊಂಡಿದ್ದು, ವಾದ–ವಿವಾದ, ಸಾಕ್ಷಿದಾರರ ಹೇಳಿಕೆ ಆಲಿಸಿ ಆರೋಪಿ ಹನುಮಂತಪ್ಪ ಪತ್ನಿ ಸಾವಿತ್ರಮ್ಮನವರನ್ನು ಮಚ್ಚಿನಿಂದ ಹಲ್ಲೆ ಮಾಡಿ ಕೊಲೆ ಮಾಡಿರುವುದು ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ ರೂ.50,000/- ದಂಡ ವಿಧಿಸಿ ಇಂದು (ಮಾರ್ಚ್. 10) ಶಿಕ್ಷೆ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಅಪರ ಸರ್ಕಾರಿ ಅಭಿಯೋಜಕರಾದ ಎನ್.ಎಸ್. ಮಲ್ಲಯ್ಯ ವಿಚಾರಣೆಯನ್ನು ನಡೆಸಿ ವಾದ ಮಂಡಿಸಿದ್ದರು.

suddionenews

Recent Posts

ಪ್ರತಿದಿನ 30 ನಿಮಿಷಗಳ ಕಾಲ ವಾಕ್ ಮಾಡಿದರೆ ಎಷ್ಟೊಂದು ಆರೋಗ್ಯ ಪ್ರಯೋಜನಗಳು ಗೊತ್ತಾ ?

ಸುದ್ದಿಒನ್ : ವಾಕಿಂಗ್ ಮಾಡುವುದರಿಂದ ಅನೇಕ ರೋಗಗಳನ್ನು ತಡೆಗಟ್ಟಲು ಸಹಾಯ ಮಾಡುತ್ತದೆ. ಪ್ರತಿದಿನ 30 ನಿಮಿಷಗಳ ವಾಕ್ ಆರೋಗ್ಯಕ್ಕೆ ಎಷ್ಟು…

17 minutes ago

ಈ ರಾಶಿಯವರು ಹೊಸದಾಗಿ ವ್ಯಾಪಾರ ಪ್ರಾರಂಭ ಮಾಡಿದ್ದಾರೆ ಕೈಹಿಡಿದರೆ ಸಾಕು

ಈ ರಾಶಿಯವರು ಹೊಸದಾಗಿ ವ್ಯಾಪಾರ ಪ್ರಾರಂಭ ಮಾಡಿದ್ದಾರೆ ಕೈಹಿಡಿದರೆ ಸಾಕು, ಈ ರಾಶಿಯವರು ಮದುವೆಯಾಗಿ ತಿಂಗಳಾಯಿತು ಕಲಹಗಳು ಶುರು, ಮಂಗಳವಾರದ…

3 hours ago

ಹುಬ್ಬಳ್ಳಿಯಲ್ಲಿ ಕಣ್ಣೀರುಡುತ್ತಾ ಜೈನ ಮುನಿ ಸರ್ಕಾರಕ್ಕೆ ಹೇಳಿದ್ದೇನು..?

ಹುಬ್ಬಳ್ಳಿ; ಜೈನ ಸಮುದಾಯದವರು ಸರ್ಕಾರಕ್ಕೆ ಒಂದಷ್ಟು ಬೇಡಿಕೆಗಳನ್ನ ಮುಂದಿಟ್ಟಿದ್ದಾರೆ. ಅದರಲ್ಲೂ ಜೈನ ನಿಗಮ ಸ್ಥಾಪನೆ ಮಾಡುವ ಬಗ್ಗೆ ಹೆಚ್ಚು ಒತ್ತು…

12 hours ago

ಅಪ್ಪು ಅಭಿಮಾನಿಗಳಿಗೆ ಗುಡ್ ನ್ಯೂಸ್ ; ಅಶ್ವಿನಿ ಅವರಿಂದ ವಿಶೇಷ ಕಾರ್ಯಕ್ಕೆ ಚಾಲನೆ

ಬೆಂಗಳೂರು; ಇಂದು ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ 50ನೇ ಹುಟ್ಟುಹಬ್ಬ. ಕುಟುಂಬಸ್ಥರು, ಆಪ್ತರು, ಅಭಿಮಾನಿಗಳೆಲ್ಲಾ ಸಮಾಧಿ ಬಳಿ ಹೋಗಿ…

13 hours ago

ಲಸಿಕೆಗಳು ಮಾರಕ ರೋಗಗಳಿಂದ ಮಕ್ಕಳನ್ನು ರಕ್ಷಿಸುತ್ತವೆ : ಎನ್.ಎಸ್.ಮಂಜುನಾಥ

  ಚಿತ್ರದುರ್ಗ. ಮಾರ್ಚ್17: ಲಸಿಕೆಗಳು ಮಾರಕ ರೋಗಗಳಿಂದ ಮಕ್ಕಳನ್ನು ರಕ್ಷಿಸುತ್ತವೆ ಎಂದು ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ ಹೇಳಿದರು. ನಗರದ…

14 hours ago

ಅಗ್ನವೀರ್ ನೇಮಕಾತಿ ಅರ್ಜಿ ಆಹ್ವಾನ

ಚಿತ್ರದುರ್ಗ.ಮಾರ್ಚ್.17:ಬಾಗಲಕೋಟೆ, ಗದಗ, ವಿಜಯಪುರ, ಧಾರವಾಡ, ಉತ್ತರಕನ್ನಡ, ಉಡುಪಿ, ದಾವಣಗೆರೆ, ಹಾವೇರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ…

14 hours ago