Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಮುರುಘಾಮಠದ ಶೂನ್ಯಪೀಠಾರೋಹಣ

---Advertisement---

 

ಚಿತ್ರದುರ್ಗ, ಅಕ್ಟೋಬರ್.25 : ವೈಚಾರಿಕತೆಯಿಂದ ಗುರುತಿಸಿಕೊಂಡಿರುವ ಮುರುಘಾಮಠದ ಶೂನ್ಯಪೀಠಾರೋಹಣ  ಶ್ರೀ ಮುರುಗಿಶಾಂತವೀರ ಮಹಾಸ್ವಾಮಿಗಳ ಕಂಚಿನ ಪುತ್ಥಳಿಯನ್ನು ಇಡುವುದರ ಮೂಲಕ ಶೂನ್ಯ ಪೀಠಾರೋಹಣ ನೆರವೇರಿಸಲಾಯಿತು.

ಬಂಗಾರದ ಕೀರಿಟ, ಬಂಗಾರದ ಪಾದುಕೆಗಳು ಹಾಗೂ ಕತೃ ಮುರುಘೇಶನಿಗೆ ಬಂಗಾರದ ರುದ್ರಾಕ್ಷಿ ಸರ ಹಾಕುವುದರ ಮೂಲಕ ಪ್ರಧಾನ ಸತ್ರ ಮತ್ತು ಜಿಲ್ಲಾ ನ್ಯಾಯಾಧೀಶರು ಹಾಗೂ ಶ್ರೀಮುರುಘಾಮಠದ ಆಡಳಿತಾಧಿಕಾರಿಗಳಾದ ಶ್ರೀಮತಿ.ಬಿ.ಎಸ್.ರೇಖಾರವರು, ಶರಣ ಸಂಸ್ಕøತಿ ಉತ್ಸವ-2023ರ ಗೌರವಾಧ್ಯಕ್ಷರಾದ ಅಥಣಿ ಗಚ್ಚಿನಮಠದ ಶ್ರೀ ಶಿವಬಸವ ಮಹಾಸ್ವಾಮಿಗಳು, ಉಸ್ತುವಾರಿ ಶ್ರೀಗಳಾದ ಶ್ರೀ ಬಸವಪ್ರಭುಸ್ವಾಮಿಗಳು, ಎಸ್.ಜೆ.ಎಂ.ವಿದ್ಯಾಪೀಠದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಎಂ.ಭರತ್‍ಕುಮಾರ್,  ಕಾರ್ಯಾಧ್ಯಕ್ಷ ಕೆ.ಸಿ.ನಾಗರಾಜ್‍‌ ಅವರ  ನೇತೃತ್ವದಲ್ಲಿ ಶೂನ್ಯ ಪೀಠಾರೋಹಣ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ನಾಡಿನ ವಿವಿಧ ಮಠಾಧೀಶರು, ಹರಗುರುಚರಮೂರ್ತಿಗಳು, ಸಾಧಕರು, ಭಕ್ತರು, ಎಸ್.ಜೆ.ಎಂ.ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯರು, ಶಾಲಾ-ಕಾಲೇಜುಗಳ ಮುಖ್ಯಸ್ಥರುಗಳು, ನೌಕರ ವರ್ಗದವರು ಹಾಗೂ ಜನ ಸಮೂಹದ ಜಯಘೋಷಣೆಗಳೊಂದಿಗೆ ಶ್ರೀಮಠದಲ್ಲಿ ಶೂನ್ಯ ಪೀಠಾರೋಹಣವನ್ನು ಸಾಕ್ಷೀಕರಿಸಿದರು. ವಿವಿಧ ಕಲಾತಂಡಗಳು ಶ್ರೀಮಠದ ರಾಜಾಂಗಣದಲ್ಲಿ ತಮ್ಮ ಕಲೆಯನ್ನು ಪ್ರದರ್ಶಿಸಿದರು.

ಶ್ರೀಮಠದ ಪ್ರಾಂಗಣದಲ್ಲಿ ಅಲ್ಲಮ ಪ್ರಭುದೇವರ ಮತ್ತು ಧರ್ಮಗುರು ಬಸವಣ್ಣನವರ ಮತ್ತು ಪ್ರಾಚೀನ ಹಸ್ತ ಪ್ರತಿಗಳನ್ನು ಪಲ್ಲಕ್ಕಿಯಲ್ಲಿ ಇಡುವುದರ ಮೂಲಕ ಪ್ರಧಾನ ಸತ್ರ ಮತ್ತು ಜಿಲ್ಲಾ ನ್ಯಾಯಾಧೀಶರು ಹಾಗೂ ಶ್ರೀಮುರುಘಾಮಠದ ಆಡಳಿತಾಧಿಕಾರಿಗಳಾದ ಶ್ರೀಮತಿ.ಬಿ.ಎಸ್.ರೇಖಾರವರು ಮೆರವಣಿಗೆಗೆ ಚಾಲನೆ ನೀಡಿದರು.

ಮೆರವಣಿಗೆಯು ಜಾನಪದ ಕಲಾತಂಡಗಳೊಂದಿಗೆ ಶ್ರೀಮಠದ ಆವರಣದಲ್ಲಿ ವಿಜೃಂಭಣೆಯಿಂದ ನೆರವೇರಿತು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...