ಚಿತ್ರದುರ್ಗ | ಮುರುಘಾಶರಣರಿಗೆ ಬಿಡುಗಡೆ ಭಾಗ್ಯ

1 Min Read

ಸುದ್ದಿಒನ್, ಚಿತ್ರದುರ್ಗ, ನವೆಂಬರ್.15 : ತೀವ್ರ ಕುತೂಹಲ ಮೂಡಿಸಿದ್ದ ಮುರುಘಾ ಶರಣರ ಜಾಮೀನು ಅರ್ಜಿ ವಿಚಾರಣೆಗೆ ಸಂಬಂಧಿಸಿದಂತೆ ಇಂದು (ನವಂಬರ್.15) ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಬಿಡುಗಡೆ ಮಾಡುವಂತೆ ಆದೇಶಿಸಿದೆ.

ಆದರೆ ಎರಡನೇ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ನ.16 ಕ್ಕೆ ಮುಂದೂಡಿದೆ.

ಮೊದಲ ಪ್ರಕರಣದಲ್ಲಿ ಮುರುಘಾ ಶರಣರಿಗೆ ಹೈಕೋರ್ಟ್ ಜಾಮೀನು ನೀಡಿತ್ತು. ಈ ವಿಚಾರವಾಗಿ ಇಬ್ಬರು ವ್ಯಕ್ತಿಗಳ ಭದ್ರತಾ ಖಾತರಿ ಪರಿಶೀಲಿಸಿದ ನ್ಯಾಯಾಧೀಶೆ ಬಿ.ಕೆ.ಕೋಮಲಾ ಬಿಡುಗಡೆ ಮಾಡುವಂತೆ  ಆದೇಶ ನೀಡಿದ್ದಾರೆ. ಈ ಆದೇಶ ಪ್ರತಿ ಸಂಜೆ ವೇಳೆಗೆ ಕಾರಾಗೃಹ ತಲುಪಿದರೆ ಇಂದೇ (ಬುಧವಾರವೇ) ಬಿಡುಗಡೆ ಆಗಲಿದ್ದಾರೆ
ಎಂದು ಶರಣರ ಪರ ವಕೀಲ ಸಂದೀಪ್‌ ಪಾಟೀಲ್‌ ಹೇಳಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *