Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಮೈಸೂರು ಕೆಫೆ ಅಣ್ಣಾದೊರೈ ನಿಧನ

---Advertisement---

ಸುದ್ದಿಒನ್, ಚಿತ್ರದುರ್ಗ, ಮೇ. 10 : ನಗರದ ದೊಡ್ಡಪೇಟೆಯ ಮೈಸೂರು ಕೆಫೆ ಹೋಟೆಲಿನ ಮಾಲೀಕರಾಗಿದ್ದ ವೇದವ್ಯಾಸ ಆಚಾರ್ಯ (ಅಣ್ಣಾದೊರೈ, 77 ವರ್ಷ) ಇಂದು ಮುಂಜಾನೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.

ಮೃತರು ಓರ್ವ ಪುತ್ರ, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.ಮೈಸೂರು ಕೆಫೆ ಮಾಲೀಕರಾಗಿದ್ದ ಅವರು ಸುಮಾರು 5 ದಶಕಕ್ಕೂ ಹೆಚ್ಚು ಕಾಲ ಹೋಟೆಲ್ ಉದ್ಯಮವನ್ನು ಯಶಸ್ವಿಯಾಗಿ ನಡೆಸಿದ್ದರು. ಅವರನ್ನು ಅಣ್ಣಾದೊರೆ ಎಂದೇ ಕರೆಯುತ್ತಿದ್ದರು. ದೊಡ್ಡಪೇಟೆಯಲ್ಲಿ ಕನ್ನಡ ಬಳಗ ಸ್ಥಾಪಿಸಿ ಅನೇಕ ಕಾರ್ಯಕ್ರಮಗಳನ್ನು ಮಾಡುತ್ತಾ ಹಿರಿಯ ಸಾಹಿತಿ ಕವಿ ದ.ರಾ.ಬೇಂದ್ರೆ. ಜಿ ಎಸ್ ಶಿವರುದ್ರಪ್ಪ ಮುಂತಾದವರನ್ನು ಕರೆಸಿದ್ದನ್ನು ಸ್ಥಳೀಯರು ಸ್ಮರಿಸುತ್ತಾರೆ. ಬೆಂಗಳೂರಿನಲ್ಲೇ ಇಂದು ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now