Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ತುರುವನೂರಿನ ಎನ್. ತಿಪ್ಪಣ್ಣ ಇನ್ನಿಲ್ಲ

---Advertisement---

 

ಸುದ್ದಿಒನ್, ಚಿತ್ರದುರ್ಗ, ಜುಲೈ. 11 : ತಾಲ್ಲೂಕಿನ ತುರುವನೂರು ಗ್ರಾಮದ ಪ್ರಭಾವಿ ರಾಜಕೀಯ ಧುರೀಣರು, ಮುತ್ಸದ್ದಯೂ ಆಗಿದ್ದ ವಿಧಾನ ಪರಿಷತ್ತಿನ ಮಾಜಿ ಸಭಾಪತಿ, ಅಖಿಲ ಭಾರತ ವಿರಶೈವ‌ ಮಹಾಸಭಾ ರಾಜ್ಯ ಘಟಕದ ಮಾಜಿ ಅಧ್ಯಕ್ಷರೂ ಆದ ಎನ್‌. ತಿಪ್ಪಣ್ಣ ಅವರು ಶುಕ್ರವಾರ ಮುಂಜಾನೆ ಕೊನೆಯುಸಿರೆಳೆದಿದ್ದಾರೆ. ಇವರಿಗೆ 97 ವರ್ಷ ವಯಸ್ಸಾಗಿತ್ತು. ಅಂತ್ಯಕ್ರಿಯೆ ನಾಳೆ ಶನಿವಾರ  ತುರವನೂರಿನಲ್ಲಿ ನಡೆಸಲಿದ್ದಾರೆ. ಇಂದು ಬಳ್ಳಾರಿಯ ಅವರ ನಿವಾಸದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ತಿಪ್ಪಣ್ಣ ಅವರು ಹಲವು ವರ್ಷಗಳ ಕಾಲ ವಕೀಲರಾಗಿಯೂ ಕಾರ್ಯ ನಿರ್ವಹಿಸಿದ್ದರು. ಬಳಿಕ ರಾಜಕೀಯ ಕ್ಷೇತ್ರ ಪ್ರವೇಶಿಸಿದ ಅವರು, ನಾಲ್ಕು ಬಾರಿ ವಿಧಾನ ಪರಿಷತ್‌ಗೆ ಆಯ್ಕೆಯಾಗಿದ್ದರು. ವಿರೋಧ ಪಕ್ಷದ ಉಪ ನಾಯಕರಾಗಿಯೂ ಸೇವೆ ಸಲ್ಲಿಸಿದ್ದರು. ಅಲ್ಪ ಅವಧಿಗೆ ಸಭಾಪತಿಯಾಗಿ ಕೆಲಸ ಮಾಡಿದ್ದಾರೆ. ರಾಮಕೃಷ್ಣ ಹೆಗಡೆ ಅವರೊಂದಿಗೆ ಗುರುತಿಸಿಕೊಂಡಿದ್ದ ತಿಪ್ಪಣ್ಣ, ಜನತಾದಳದಿಂದ ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಪರಾಭವಗೊಂಡಿದ್ದರು. ಬಳಿಕ ಜೆಡಿಯುನಲ್ಲಿ ಇದ್ದ ಅವರು ಪಕ್ಷವನ್ನು ಜೆಡಿಎಸ್‌ನಲ್ಲಿ ವಿಲೀನಗೊಳಿಸಿದರು. ಜೆಡಿಎಸ್‌ನ ರಾಜ್ಯ ಘಟಕದ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದಾರೆ.

 

2012ರಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾದ ರಾಜ್ಯ ಘಟಕದ ಅಧ್ಯಕ್ಷರಾಗಿಯೂ ತಿಪ್ಪಣ್ಣ ಆಯ್ಕೆಯಾಗಿದ್ದರು. ಇದಕ್ಕೂ ಹಿಂದೆಯೂ ಅವರು ಮಹಾಸಭಾದ ವಿವಿಧ ಸ್ತರಗಳಲ್ಲಿ ಕಾರ್ಯನಿರ್ವಹಿಸಿದ್ದರು. ಬಳ್ಳಾರಿಯ ಪ್ರತಿಷ್ಠಿತ ವೀರಶೈವ ವಿದ್ಯಾವರ್ದಕ ಸಂಘದ ಅಧ್ಯಕ್ಷ ಹಾಗೂ ಇನ್ನಿತರ ಹುದ್ದೆಗಳಲ್ಲಿ ಅವರು 20 ವರ್ಷ ಕೆಲಸ ಮಾಡಿದ್ದಾರೆ.

ಇಂದು ನಿಧನರಾಗಿದ್ದು, ಒಬ್ಬ ಪುತ್ರನನ್ನು ಅಗಲಿದ್ದಾರೆ. ಅವರ ಅಗಲಿಕೆಗೆ ಕುಟುಂಬಸ್ಥರು ದುಃಖಿತರಾಗಿದ್ದಾರೆ. ಆಪ್ತರು, ಬೆಂಬಲಿಗರು ಅವರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...