Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಚಿಕ್ಕಗೊಂಡನಹಳ್ಳಿ ಶಾಲೆಯಲ್ಲಿ ರಾಷ್ಟ್ರೀಯ ಏಕತಾ ದಿನಾಚರಣೆ : ಪ್ರತಿಜ್ಞಾವಿಧಿ ಸ್ವೀಕಾರ

---Advertisement---

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.31 : ಶಾಲಾ ಕಾಲೇಜು ಹಂತದ ವಿದ್ಯಾರ್ಥಿಗಳಲ್ಲಿ ಭಾರತದ ಅಖಂಡತೆ ಎತ್ತಿ ತೋರಿದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಆದರ್ಶಗಳ ಕುರಿತು ಮನವರಿಕೆ ಮಾಡಿಕೊಡಬೇಕು  ಎಂದು ಚಿಕ್ಕಗೊಂಡನಹಳ್ಳಿ ಸ.ಹಿ.ಪ್ರಾ  ಮಾದರಿ ಆಂಗ್ಲ -ಕನ್ನಡ ಮಾಧ್ಯಮದ ಶಾಲಾ  ಬಡ್ತಿ ಮುಖ್ಯ ಶಿಕ್ಷಕ ದಿನೇಶರೆಡ್ಡಿ ಹೇಳಿದರು.

ತಾಲೂಕಿನ ಚಿಕ್ಕಗೊಂಡನಹಳ್ಳಿ ಗ್ರಾಮದ ಸರ್ಕಾರಿ ಮಾದರಿ  ಕನ್ನಡ ಮತ್ತು ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ  ಶಾಲಾ ಶಿಕ್ಷಣ ಇಲಾಖೆ, ಶಾಲಾ  ಸಮಿತಿ ಹಾಗೂ ಶಾಲಾ ವತಿಯಿಂದ  ಆಯೋಜಿಸಿದ್ದ ರಾಷ್ಟ್ರೀಯ ಏಕತಾ ದಿನದ ಕಾರ್ಯಕ್ರಮದಲ್ಲಿ ಅವರು ಮಕ್ಕಳಿಗೆ ಪ್ರತಿಜ್ಞಾವಿಧಿ ಭೋಧಿಸಿ ಮಾತನಾಡಿದರು.

ಚಿಕ್ಕಂದಿನ ಮಕ್ಕಳಲ್ಲಿ ಪ್ರಜಾಪ್ರಭುತ್ವದ ಅಶಯಗಳು ಮತ್ತು ಜಾತ್ಯಾತೀತ ಮನೋಭಾವವನ್ನು ರೂಢಿಸಿ, ರಾಷ್ಟ್ರನಾಯಕರ ಆದರ್ಶಗಳನ್ನು ಮಕ್ಕಳಿಗೆ ತಿಳಿಸಿಕೊಡಲು ಸರ್ಕಾರ ಈ ಕಾರ್ಯಕ್ರಮವನ್ನು ಜಾರಿಗೆ ತಂದಿದೆ ಎಂದರು.

ಸಂದರ್ಭದಲ್ಲಿ  ಮುಖ್ಯಶಿಕ್ಷಕ ದಿನೇಶರೆಡ್ಡಿ ಶಿಕ್ಷಕರಾದ ರುದ್ರಪ್ಪ, ಸುದರ್ಶನ್, ರೇವಣ್ಣ, ಅರುಣ್, ಅಣ್ಣಯ್ಯ, ವಿಜಯಲಕ್ಷ್ಮೀ, ಶೈಲಾ, ತ್ರಿವೇಣಿ ಆನಂದಮೂರ್ತಿ ಸುವರ್ಣ, ಕುಸುಮಾ ರೀಟಾಮಣಿ, ವೀಣಾ, ವಿಜೇತ ವಿದ್ಯಾರ್ಥಿಗಳು ಇದ್ದರು .

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...