Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಡಿಸೆಂಬರ್ 15 ರಂದು ನಾಟ್ಯರಂಜನಿ ಹಬ್ಬ

---Advertisement---

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 12 : ನಗರದ ನಾಟ್ಯರಂಜನಿ ನೃತ್ಯ ಕಲಾ ಕೇಂದ್ರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಕಲಾ ಕೇಂದ್ರದ ರಜತ ಮಹೋತ್ಸವ -25, ನಾಟ್ಯರಂಜನಿ ಹಬ್ಬ -2024 ಕಾರ್ಯಕ್ರಮವನ್ನು ಡಿಸೆಂಬರ್ 15ರಂದು ತರಾಸು ರಂಗಮಂದಿರದಲ್ಲಿ ಸಂಜೆ 5:00 ಗಂಟೆಗೆ ಏರ್ಪಡಿಸಲಾಗಿದೆ.

ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ್ ಅಧ್ಯಕ್ಷತೆ ವಹಿಸಲಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ನಾಗಭೂಷಣ್, ಕರ್ನಾಟಕ ರಾಜ್ಯ ಕಂಟ್ರಾಕ್ಟರ್ ಅಸೋಸಿಯೇಷನ್ ಬೆಂಗಳೂರು ಕಾರ್ಯಾಧ್ಯಕ್ಷ ಆರ್.ಮಂಜುನಾಥ್, ಕ್ರಿಯೇಟಿವ್ ಸ್ಟುಡಿಯೋ ಚಿತ್ರ ಕಲಾವಿದ ಟಿಎಂ ವೀರೇಶ್, ಭಾರತ ಸ್ಕೌಟ್ ಅಂಡ್ ಗೈಡ್ ಜಿಲ್ಲಾ ಆಯುಕ್ತೆ ಎಲ್.ಸವಿತಾ ಶಿವಕುಮಾರ್ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು. ಇದೇ ಸಂದರ್ಭದಲ್ಲಿ ನಾಗಶ್ರೀ ಪ್ರಶಸ್ತಿಯನ್ನು ಎಂಎನ್ಕೆ ವಾದ್ಯವೃಂದದ ರಂಗ ಕಲಾವಿದ ಸಿ.ಕರಿಯಪ್ಪ ಹಾಗೂ ವಾದ್ಯ ಕಲಾನಿಧಿ ಪ್ರಶಸ್ತಿಯನ್ನು ಮೃದಂಗ ಕಲಾವಿದ ಹೆಚ್.ಎಂ.ರಾಘವೇಂದ್ರ ನೀಡಿ ಸನ್ಮಾನಿಸಿ ಗೌರವಿಸಲಾಗುವುದು.

ನಾಟ್ಯ ರಂಜನಿ ನೃತ್ಯ ಸಂಭ್ರಮ ಕಾರ್ಯಕ್ರಮ ನಿಮಿತ್ತ ಕಲಾತಂಡದವರಿಂದ ಶಿವನ ಸಪ್ತ ತಾಂಡವಗಳ ವಿಶೇಷ ನೃತ್ಯ ರೂಪಕ ಸಪ್ತ ತಾಂಡವ, ಕನ್ನಡ ಭಾವಗೀತೆಗಳ ಆಧಾರಿತ ವಿಶೇಷ ನೃತ್ಯ ರೂಪಕ ರಾಧಾಕೃಷ್ಣರ ವಿರಹಗಾಥೆ ರಾಧಾ ವಿರಹಂ ನಿರಂತರಂ, ನವಶಕ್ತಿ ವೈಭವ ಸೇರಿದಂತೆ ಭಾರತೀಯ ಸಾಂಸ್ಕೃತಿಕ ಕಲೆಗಳ ನೃತ್ಯ ವೈವಿಧ್ಯ ಕಾರ್ಯಕ್ರಮ ಕಲರ್ಸ್ ಆಫ್ ಇಂಡಿಯಾ ನೃತ್ಯಗಳನ್ನು ಏರ್ಪಡಿಸಲಾಗಿದೆ ಎಂದು ರಂಗ ನಿರ್ದೇಶಕ ಕೆಪಿಎಂ ಗಣೇಶಯ್ಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...