Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗ : ಜಿಲ್ಲೆಯಲ್ಲಿ ಸುಸೂತ್ರವಾಗಿ ಜರುಗಿದ ನೀಟ್ ಪರೀಕ್ಷೆ : 141 ವಿದ್ಯಾರ್ಥಿಗಳು ಗೈರು

---Advertisement---

ಚಿತ್ರದುರ್ಗ ಮೇ. 04 : ವೈದ್ಯಕೀಯ, ದಂತ ವೈದ್ಯಕೀಯ ಸೇರಿದಂತೆ ವೈದ್ಯಕೀಯ ಪದವಿ ಕೋರ್ಸ್ಗಳ ಪ್ರವೇಶಕ್ಕಾಗಿ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ವತಿಯಿಂದ ಭಾನುವಾರದಂದು ಚಿತ್ರದುರ್ಗದಲ್ಲಿ ಜರುಗಿದ ನೀಟ್ ಪರೀಕ್ಷೆ ಸುಗಮವಾಗಿ ಜರುಗಿದ್ದು, ಒಟ್ಟು 141 ವಿದ್ಯಾರ್ಥಿಗಳು ಗೈರಾಗಿದ್ದಾರೆ.

 

ನೀಟ್ ಪರೀಕ್ಷೆಗಾಗಿ ಜಿಲ್ಲೆಗೆ ಒಟ್ಟು 3019 ವಿದ್ಯಾರ್ಥಿಗಳನ್ನು ಹಂಚಿಕೆ ಮಾಡಲಾಗಿತ್ತು.  ಇದಕ್ಕಾಗಿ ಒಟ್ಟು 06 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿತ್ತು.  ಭಾನುವಾರದಂದು  ಮಧ್ಯಾಹ್ನ 02 ರಿಂದ ಸಂಜೆ 05 ರವರೆಗೆ ಜರುಗಿದ ನೀಟ್ ಪರೀಕ್ಷೆ ಸುಗಮವಾಗಿ ಹಾಗೂ ಯಾವುದೇ ಗೊಂದಲಗಳಿಲ್ಲದ ರೀತಿ ಅಚ್ಚುಕಟ್ಟಾಗಿ ಜರುಗಿದ್ದು, 3019 ವಿದ್ಯಾರ್ಥಿಗಳ ಪೈಕಿ 2878 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ, 141 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದಾರೆ.
ಜಿಲ್ಲೆಯಲ್ಲಿ ಭಾನುವಾರ ಜರುಗಿದ ನೀಟ್ ಪರೀಕ್ಷೆ ಕಾರ್ಯಗಳ ಕುರಿತಂತೆ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಅವರು ಎಲ್ಲ 06 ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ, ಪರೀಕ್ಷಾ ಪ್ರಕ್ರಿಯೆಗಳ ಬಗ್ಗೆ ಪರಿಶೀಲನೆ ನಡೆಸಿದರು.  ನೀಟ್ ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಅನುವಾಗುವಂತೆ ಪರೀಕ್ಷಾ ಕೇಂದ್ರದ ಸುತ್ತ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ, ಪೊಲೀಸ್ ಬಂದೋಬಸ್ತ್ ಕಾರ್ಯ ಕೈಗೊಳ್ಳಲಾಗಿತ್ತು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment