Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ನೂತನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ: ವೀಕ್ಷಕ ರಿಪಿನ್ ಬೊಹರಾ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜುಲೈ. 27 : ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರುಗಳ ಅಭಿಪ್ರಾಯ ಸಂಗ್ರಹಿಸಿ ಜಿಲ್ಲಾ ಕಾಂಗ್ರೆಸ್‍ಗೆ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಿ ಪಕ್ಷವನ್ನು ಸಂಘಟಿಸುವುದು ಸಂಘಟನ್ ಸೃಜನ್ ಅಭಿಯಾನದ ಉದ್ದೇಶ ಎಂದು ಅಸ್ಸಾಂ ಪ್ರದೇಶ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷರು ಹಾಗೂ ಜಿಲ್ಲಾ ವೀಕ್ಷಕರಾದ ರಿಪಿನ್‍ಬೊಹರಾ ಹೇಳಿದರು.

ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವುದು ರಾಹುಲ್‍ಗಾಂಧಿರವರ ಭಾರತ್ ಜೋಡೊ ಯಾತ್ರೆಯ ಉದ್ದೇಶ. ದೇಶದ ಪ್ರತಿ ಪ್ರಜೆಗೆ ತಲುಪಿಸುವುದು ಅಭಿಯಾನದ ಗುರಿ. 2025 ರಲ್ಲಿ ಆರಂಭಗೊಂಡ ಈ ಅಭಿಯಾನ 22 ರಾಜ್ಯಗಳಲ್ಲಿದೆ. 2027 ಕ್ಕೆ ಈ ಪ್ರಕ್ರಿಯೆ ಪೂರ್ಣಗೊಳ್ಳಲಿದ್ದು, ಮುಂಬರುವ ವಿಧಾನಸಭೆ, ಪಾರ್ಲಿಮೆಂಟ್ ಚುನಾವಣೆ ಹಾಗೂ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷ ಅಧಿಕಾರ ಹಿಡಿಯಬೇಕಾಗಿದೆ ಎಂದು ತಿಳಿಸಿದರು.

 

ಜಿಲ್ಲೆಯಲ್ಲಿ ಅನೇಕ ರಾಜಕೀಯ ಸವಾಲುಗಳನ್ನು ಪಕ್ಷ ಎದುರಿಸುತ್ತಿದೆ. ಆರು ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಿ ಶಾಸಕರು, ಮಾಜಿ ಶಾಸಕರು, ಎಂಎಲ್‍ಸಿ. ಎಕ್ಸ್ ಎಂ.ಪಿ.ಗಳ ಜೊತೆ ಚರ್ಚಿಸಿ ನಂತರ ಜಿಲ್ಲಾಧ್ಯಕ್ಷರನ್ನು ಆಯ್ಕೆ ಮಾಡಲಾಗುವುದು. ಈ ಸಂಬಂಧ ಆರು ಹೆಸರುಗಳನ್ನು ಎಐಸಿಸಿ. ಹಾಗೂ ಕೆಪಿಸಿಸಿ. ಕಳಿಸಲಾಗುವುದು. ಧರ್ಮ ಜಾತಿ ಹೆಸರಿನಲ್ಲಿ ರಾಜಕೀಯ ಮಾಡುತ್ತಿರುವ ಕೋಮುವಾದಿ ಬಿಜೆಪಿ.ಯನ್ನು ಕಿತ್ತೊಗೆದು ಮುಂದೆ ಕೇಂದ್ರದಲ್ಲಿ ಪಕ್ಷವನ್ನು ಅಧಿಕಾರ ತರಬೇಕು. ಶೋಷಿತರು, ದಲಿತರು, ಅಲ್ಪಸಂಖ್ಯಾತರು, ಹಿಂದುಳಿದವರಿಗೆ ಬಿಜೆಪಿ. ತಾರತಮ್ಯವೆಸಗುತ್ತಿದೆ. ಕಾಂಗ್ರೆಸ್‍ನಿಂದ ಮಾತ್ರ ಎಲ್ಲರಿಗೂ ಸಾಮಾಜಿಕ ನ್ಯಾಯ ದೊರಕಲಿದೆ ಎಂದರು.

 

ಕೆಪಿಸಿಸಿ. ಉಪಾಧ್ಯಕ್ಷರು ಹಾಗೂ ಮಾಜಿ ಸಂಸದರಾದ ವಿ.ಎಸ್.ಉಗ್ರಪ್ಪ ಮಾತನಾಡಿ ಸಂವಿಧಾನ ಪ್ರಜಾಪ್ರಭುತ್ವ ಉಳಿಸುವುದಕ್ಕಾಗಿ ರಾಹುಲ್‍ಗಾಂಧಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ್ ಜೋಡೋ ಯಾತ್ರೆ ನಡೆಸಿದರು. ಈಗ ರಾಷ್ಟ್ರ ವ್ಯಾಪಿ ಸಂಘಟನ್ ಸೃಜನ್ ಅಭಿಯಾನ ಹಮ್ಮಿಕೊಂಡಿದೆ. ಪ್ರದಕ್ಷಿಣೆ ರಾಜಕಾರಣವನ್ನು ದೂರವಿಟ್ಟು ಪಕ್ಷದ ನೈಜ ಕಾರ್ಯಕರ್ತರು ಹಾಗೂ ಜನಸಾಮಾನ್ಯರಿಂದ ಮಾಹಿತಿ ಸಂಗ್ರಹಿಸಿ ಜಿಲ್ಲಾ ಕಾಂಗ್ರೆಸ್‍ಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗುವುದು. ಆರು ಜನರ ಹೆಸರನ್ನು ಆಯ್ಕೆ ಮಾಡಿ ಎಐಸಿಸಿ.ಗೆ ಕಳಿಸಲಾಗುವುದು.

ಅಪ್ಪರ್‍ಭದ್ರಾ, ಚಿತ್ರದುರ್ಗ-ತುಮಕೂರು ನೇರ ರೈಲು ಮಾರ್ಗ ಯೋಜನೆಗೆ ಅನುದಾನದ ಕೊರತೆ, ಬರ ಪರಿಸ್ಥಿತಿ ಕುರಿತು ಕೇಂದ್ರಕ್ಕೆ ಮಾಹಿತಿ ನೀಡಲಾಗುವುದು. ಪಕ್ಷ ಸಂಘಟಿಸುವ ಈ ಪ್ರಕ್ರಿಯೆ ನಿರಂತರವಾಗಿ ನಡೆಯಲಿದೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಆರಕ್ಕೆ ಆರು ಕಾಂಗ್ರೆಸ್ ಗೆಲ್ಲಬೇಕೆಂದರು.

ಕೆಪಿಸಿಸಿ. ಉಪಾಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿ ಮುರಳಿಧರ ಹಾಲಪ್ಪ ಮಾತನಾಡುತ್ತ ಕಾರ್ಯಕರ್ತರು ಹಾಗೂ ಮುಖಂಡರುಗಳಿಂದ ಮಾಹಿತಿ ಕಲೆ ಹಾಕಿ ಜಿಲ್ಲಾ ಕಾಂಗ್ರೆಸ್‍ಗೆ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುವುದು. ರಾಜ್ಯದಲ್ಲಿ ನಲವತ್ತು ಜಿಲ್ಲಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಪಕ್ಷಕ್ಕೆ ಶಕ್ತಿ ತುಂಬುವುದು ಸಂಘಟನ್ ಸೃಜನ್ ಅಭಿಯಾನದ ಉದ್ದೇಶ ಎಂದು ಹೇಳಿದರು.

 

ಸೈಯದ್ ಅಹಮದ್ ಮಾತನಾಡಿ ಹೊಸ ನಾಯಕತ್ವ ಸಂಘಟನ್ ಸೃಜನ್ ಅಭಿಯಾನದ ಗುರಿ. ಪಕ್ಷಕ್ಕೆ ಕೆಲಸ ಮಾಡುವ ನೈಜ ಕಾರ್ಯಕರ್ತರಿಗೆ ಆದ್ಯತೆ ನೀಡಲಾಗುವುದು ಇದರಿಂದ ಪಕ್ಷಕ್ಕೆ ಶಕ್ತಿ ತುಂಬಿದಂತಾಗುತ್ತದೆಂದು ನುಡಿದರು.

 

ಸೌಗಂಧಿಕ ರಘುನಾಥ್ ಮಾತನಾಡುತ್ತ ಚಿತ್ರದುರ್ಗಕ್ಕೆ ಐದು ಮಂದಿ ವೀಕ್ಷಕರನ್ನು ಎಐಸಿಸಿ. ಮತ್ತು ಕೆಪಿಸಿಸಿ.ಯಿಂದ ನೇಮಿಸಿದ್ದು, ಆರು ಹೆಸರುಗಳನ್ನು ಸಂಗ್ರಹಿಸಿ ಅದರಲ್ಲಿ ಒಬ್ಬರನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಕೂರಿಸಲಾಗುವುದು. ಶೇ.33 ರಷ್ಟು ಮಹಿಳೆಯರಿಗೆ ಮೀಸಲಾತಿಯಿರುವುದರಿಂದ ಮಹಿಳೆಯರು ಜಿಲ್ಲಾಧ್ಯಕ್ಷ ಸ್ಥಾನಕೆ ಪೈಪೋಟಿ ನೀಡಬಹುದೆಂದು ತಿಳಿಸಿದರು.

 

ಎನ್.ರಮೇಶ್ ಮಾತನಾಡಿ ಸಂಘಟನ್ ಸೃಜನ್ ಅಭಿಯಾನ ಪಕ್ಷಕ್ಕೆ ಅತ್ಯಂತ ಮಹತ್ವದ್ದು, ಮುಂಬರುವ ವಿಧಾನಸಭೆ, ಪಾರ್ಲಿಮೆಂಟ್ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸಿಕೊಂಡು ಬೂತ್ ಮಟ್ಟದಲ್ಲಿ ಪಕ್ಷವನ್ನು ಗಟ್ಟಿಗೊಳಿಸಲಾಗುವುದು. ನೀಟ್ ವಿರುದ್ದ ರಾಹುಲ್‍ಗಾಂಧಿ ವಿದ್ಯಾರ್ಥಿಗಳಿಗೆ ಬೆಂಬಲಿಸಿ ಹೋರಾಟಕ್ಕೆ ಇಳಿದ ಪರಿಣಾಮ ಕೇಂದ್ರ ಸಚಿವರ ತಲೆದಂಡವಾಗಿದೆ ಎಂದರು.

 

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಕಾರ್ಯಾಧ್ಯಕ್ಷ ಕೆ.ಎಂ.ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‍ಕುಮಾರ್, ಡಿ.ಎನ್.ಮೈಲಾರಪ್ಪ, ಉಪಾಧ್ಯಕ್ಷರಾದ ಡಿ.ಟಿ.ವೆಂಕಟೇಶ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ನಂದಿನಿಗೌಡ, ನ್ಯಾಯವಾದಿ ಜಿ.ಎಸ್.ಕುಮಾರ್‍ಗೌಡ, ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸೈಯದ್ ಖುದ್ದೂಸ್, ಅಲ್ಲಾಭಕ್ಷಿ, ಗ್ಯಾರೆಂಟಿ ಸಮಿತಿ ಅಧ್ಯಕ್ಷ ಆರ್.ಶಿವಣ್ಣ, ಪದವೀಧರ ವಿಭಾಗದ ಅಧ್ಯಕ್ಷ ಪ್ರಕಾಶ್‍ರಾಮನಾಯ್ಕ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅನಂತ್, ರುದ್ರಾಣಿ ಗಂಗಾಧರ್, ಮಧುಪಾಲೆಗೌಡ ಇವರುಗಳು ಪತ್ರಿಕಾಗೋಷ್ಟಿಯಲ್ಲಿ ಹಾಜರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now