Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಇಂದಿನಿಂದ ರಾತ್ರಿ ಕಫ್ರ್ಯೂ : ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಆದೇಶ

Facebook
Twitter
Telegram
WhatsApp

ಚಿತ್ರದುರ್ಗ,( ಡಿಸೆಂಬರ್.28) :ಕೋವಿಡ್-19 ರೋಗ ತಡೆ ಹಿನ್ನಲೆಯಲ್ಲಿ ಕೋವಿಡ್-19 ಸರ್ವೇಕ್ಷಣಾ, ತಡೆಗಟ್ಟುವಿಕೆ ಮತ್ತು ಮುನ್ನೆಚ್ಚರಿಕಾ ಮಾರ್ಗಸೂಚಿಗಳೊಂದಿಗೆ ಹೆಚ್ಚುವರಿಯಾಗಿ ಇದೇ ಡಿಸೆಂಬರ್ 28 ರಿಂದ ಜಾರಿಗೆ ಬರುವಂತೆ 2022ರ ಜನವರಿ 07 ರವರೆಗೆ ಪ್ರತಿ ದಿನ ರಾತ್ರಿ 10 ಗಂಟೆಯಿಂದ ಮುಂಜಾನೆ 5 ಗಂಟೆಯವರೆಗೆ ರಾತ್ರಿ ಕಪ್ರ್ಯೂ ಜಾರಿಗೊಳಿಸಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಆದೇಶಿಸಿದ್ದಾರೆ.

ರಾತ್ರಿ ಕಫ್ರ್ಯೂ ಜಾರಿಗೊಳಿಸುವುದರ ಜೊತೆಗೆ ಇದೇ ಡಿಸೆಂಬರ್ 30 ರಿಂದ 2020ರ ಜನವರಿ 02 ರವರೆಗೆ ರೆಸ್ಟೋರೆಂಟ್, ಹೋಟಲ್, ಕ್ಲಬ್, ಪಬ್‍ಗಳಲ್ಲಿ ಶೇ.50 ಸಾಮಥ್ರ್ಯದೊಂದಿಗೆ ಕಾರ್ಯನಿರ್ವಹಿಸಲು ಮತ್ತು ಇದೇ ಡಿಸೆಂಬರ್ 27 ರಿಂದ ಎಲ್ಲ ರೀತಿಯ ಗುಂಪು ಸೇರುವಿಕೆ, ಸಭೆಗಳು, ಕಾರ್ಯಕಾರಣಿಗಳು, ಮದುವೆ ಸಮಾರಂಭಗಳು ಸೇರಿದಂತೆ ಗರಿಷ್ಟ 300 ಜನರಿಗೆ ಅವಕಾಶ ನೀಡಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ.

ವೈಯಕ್ತಿಕ ಓಡಾಟಗಳು, ಅನಿವಾರ್ಯವಲ್ಲದ ಚಟುವಟಿಕೆಗಳ ಕಾರ್ಯನಿರ್ವಹಣೆಯು ರಾತ್ರಿ 10 ರಿಂದ ಮುಂಜಾನೆ 5 ರವರೆಗೆ ಕಡ್ಡಾಯವಾಗಿ ನಿಷೇಧಿಸಿ ಸಿ.ಆರ್.ಪಿ.ಸಿ ಸೆಕ್ಷನ್ 144 ಜಾರಿಗೊಳಿಸಲಾಗಿರುತ್ತದೆ. ಈ ಆದೇಶ ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಮತ್ತು ಭಾರತೀಯ ದಂಡ ಸಂಹಿತೆಯನ್ವಯ ಸೂಕ್ತ ಕಾನೂನು ಕ್ರಮಕ್ಕೆ ಒಳಪಡಿಸಲಾಗುವುದು.

ಆದೇಶ ಪರಿಣಾಮಕಾರಿ ಜಾರಿಗೆ ಕ್ರಮ ಕೈಗೊಳ್ಳಲು ಪೊಲೀಸ್ ಅಧೀಕ್ಷಕರು, ಉಪವಿಭಾಗಾಧಿಕಾರಿಗಳು, ಎಲ್ಲ ತಾಲ್ಲೂಕಿನ ತಹಶೀಲ್ದಾರ್‍ಗಳು, ಎಲ್ಲ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಎಲ್ಲ ನಗರ ಸ್ಥಳೀಯ ಸಂಸ್ಥೆಯ ಪೌರಾಯುಕ್ತರು, ಮುಖ್ಯಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಸೂಚಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜೆಇಇ” ಮೈನ್ಸ್‌ ಫಲಿತಾಂಶ | ಆಲ್‌ ಇಂಡಿಯಾ ರ್ಯಾಂಕ್‌ ಪಡೆದು ದಾಖಲೆ ನಿರ್ಮಿಸಿದ ಚಿತ್ರದುರ್ಗದ ʼಎಸ್‌ ಆರ್‌ ಎಸ್‌ʼ ವಿದ್ಯಾರ್ಥಿಗಳು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.25 :  ನಗರದ ಎಸ್‌ ಆರ್‌ ಎಸ್‌ ಪಿಯು ಕಾಲೇಜಿನ ವಿದ್ಯಾರ್ಥಿಗಳು ಇದೇ ಏಪ್ರಿಲ್‌ ತಿಂಗಳಲ್ಲಿ ನಡೆದ “ಜೆಇಇ ಮೈನ್ಸ್‌”ನ (ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಎರಡನೇ ಸ್ಲಾಟ್‌ ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿ

ಮತದಾನಕ್ಕೂ ಮುನ್ನ ಅರ್ಥ ಪೂರ್ಣ ಟ್ವೀಟ್ ಮಾಡಿದ ಸುಮಲತಾ : ನೆಟ್ಟಿಗರಿಂದ ಪ್ರಶ್ನೆಗಳ ಸುರಿಮಳೆ

  ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ದಿನ ಬೆಳಗಾಗುವುದರೊಳಗೆ ಚುನಾವಣೆ ಬರಲಿದೆ. ನಾಳೆ ಬೆಳಗ್ಗೆ 7 ಗಂಟೆಯಿಂದಾನೆ ಮತದಾನ ಆರಂಭವಾಗಲಿದೆ. ಹದಿನಾಲ್ಕು ಕ್ಷೇತ್ರಗಳಿಗೆ ಚುನಾವಣೆ ಮಡೆಯಲಿದ್ದು, ಭದ್ರತೆಯೂ ಸಿದ್ಧವಾಗಿದೆ. ಈ ಬಾರಿಯ ಚುನಾವಣೆಯಲ್ಲೂ ಮಂಡ್ಯ

JEE MAIN 2024 : ಉತ್ತಮ ಸಾಧನೆ ಮಾಡಿದ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು

  ಸುದ್ದಿಒನ್, ಚಳ್ಳಕೆರೆ, ಏಪ್ರಿಲ್. 25 : ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಯ ಫಲಿತಾಂಶದೊಂದಿಗೆ JEE MAINS ನಲ್ಲೂ  ಮೂರು  ADVANCE ಗೆ ಅರ್ಹತೆ ಪಡೆದುಕೊಂಡಿದ್ದಾರೆ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು. ತಾಲೂಕು ಸಾಣಿಕೆರೆಯ

error: Content is protected !!