ಚಿತ್ರದುರ್ಗ : ನ. 8 ಮತ್ತು 9 ರಂದು ಜಿಲ್ಲಾ ಉಸ್ತುವಾರಿ ಸಚಿವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

suddionenews
1 Min Read

ಮಾಹಿತಿ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ,(ನ.07) : ಕೃಷಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ಪಾಟೀಲ್ ಅವರು ಇದೇ ನವೆಂಬರ್ 8 ಮತ್ತು 9ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಸಚಿವರು ನವೆಂಬರ್ 8ರಂದು ಸಂಜೆ 4ಕ್ಕೆ ಬ್ಯಾಡಗಿಯಿಂದ ರಸ್ತೆ ಮೂಲಕ ಸಾಣೇಹಳ್ಳಿಗೆ ಆಗಮಿಸುವರು. ಶ್ರೀ ಶಿವಕುಮಾರ ಕಲಾ ಸಂಘ ಸಾಣೇಹಳ್ಳಿ ವತಿಯಿಂದ ಆಯೋಜಿಸಿರುವ ನಾಟಕೋತ್ಸವ ಸಮಾರೋಪ ಸಮಾರಂಭದಲ್ಲಿ ಭಾಗವಹಿಸುವರು. ನಂತರ ಸಾಣೇಹಳ್ಳಿಯಿಂದ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡುವರು.

ನವೆಂಬರ್ 9ರಂದು ಬೆಳಿಗ್ಗೆ 8ಕ್ಕೆ ವಾಣಿವಿಲಾಸ ಅತಿಥಿ ಗೃಹದಿಂದ ಹೊರಟು, ಬೆಳಿಗ್ಗೆ 9ಕ್ಕೆ ಚಿತ್ರದುರ್ಗಕ್ಕೆ ಆಗಮಿಸಿ, ಪಕ್ಷದ ಜಿಲ್ಲಾ ಕಚೇರಿಗೆ ಭೇಟಿ ನೀಡುವರು. ನಂತರ ಮಧ್ಯಾಹ್ನ 12ಕ್ಕೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಜಿಲ್ಲಾ ಉಸ್ತುವಾರಿ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಕೆ.ಆರ್.ಶಿವಕುಮಾರ್ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *