Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಖಾಲಿ ನಿವೇಶನ ಸ್ವಚ್ಚಗೊಳಿಸಿ, ನಾಮಫಲಕ ಅಳವಡಿಸಿಕೊಳ್ಳಲು ಸೂಚನೆ

Facebook
Twitter
Telegram
WhatsApp

ಚಿತ್ರದುರ್ಗ. ಸೆ.20: ಚಿತ್ರದುರ್ಗ ನಗರದ ವ್ಯಾಪ್ತಿಯ ಸಾರ್ವಜನಿಕರು ತಮ್ಮ ನಿವೇಶನಗಳನ್ನು ಸ್ವಚ್ಛಗೊಳಿಸಿಕೊಂಡು ನಾಮಫಲಕ ಅಳವಡಿಸಿಕೊಳ್ಳಬೇಕು ಎಂದು ಚಿತ್ರದುರ್ಗ ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ತಿಳಿಸಿದ್ದಾರೆ.

ಚಿತ್ರದುರ್ಗ ನಗರ ವ್ಯಾಪ್ತಿಯಲ್ಲಿರುವ ಖಾಲಿ ನಿವೇಶಗಳನ್ನು ಸ್ವಚ್ಚಗೊಳಿಸಲು ಅನೇಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆದರೆ ಸ್ವಚ್ಚಗೊಳಿಸಿದ ನಿವೇಶನಗಳಲ್ಲಿ ಕಳೆದ ತಿಂಗಳು ಸುರಿದ ಮಳೆಗೆ ಮತ್ತೆ ಗಿಡ ಗಂಟೆಗಳು ಬೆಳೆದಿದ್ದು, ವಿಷಜಂತುಗಳು ಕಾಣಿಸುತ್ತಿರುವ ಬಗ್ಗೆ ಸಾರ್ವಜನಿಕರು ನಗರಸಭೆಗೆ ಮೌಖಿಕವಾಗಿ ದೂರು ನೀಡುತ್ತಿದ್ದಾರೆ. ನಿವೇಶನದ ಮಾಲೀಕರ ಮಾಹಿತಿ ಲಭ್ಯವಿದ್ದವರಿಗೆ ನಗರಸಭೆಯಿಂದ ನೋಟೀಸ್ ನೀಡಿ ಸ್ವಚ್ಛಗೊಳಿಸಲು ತಿಳಿಸಲಾಗಿರುತ್ತದೆ. ಇನ್ನೂ ಕೆಲವು ನಿವೇಶನಗಳ ಮಾಲೀಕರ ವಿವರ ದೊರೆತಿರುವುದಿಲ್ಲ.

ಆದ್ದರಿಂದ ಸಾರ್ವಜನಿಕರು ತಮ್ಮ ನಿವೇಶನಗಳನ್ನು ಸ್ವಚ್ಚಗೊಳಿಸಿಕೊಂಡು ಕಾಂಪೌಡ್ ನಿರ್ಮಾಣ ಮಾಡಿಕೊಳ್ಳುವುದು ಹಾಗೂ ನಿವೇಶನಕ್ಕೆ ಸಂಬAಧಪಟ್ಟ ಮಾಲೀಕರ ಹೆಸರು, ವಿಳಾಸ, ಖಾತೆ ಅಥವಾ ಅಸೆಸ್‌ಮೆಂಟ್ ಸಂಖ್ಯೆ, ಪಿ.ಐ.ಡಿ ನಂ, ಮೊಬೈಲ್ ನಂಬರ್‌ಗಳನ್ನೊಳಗೊಂಡ ನಾಮಫಲಕ ಹಾಕಿಕೊಳ್ಳುವಂತೆ ಕೋರಿದ್ದಾರೆ.

ಒಂದು ವೇಳೆ ನಿವೇಶನಗಳನ್ನು ಸ್ವಚ್ಚಗೊಳಿಸದಿದ್ದಲ್ಲಿ ನಗರಸಭೆಯಿಂದ ಸ್ವಚ್ಚಗೊಳಿಸಿ, ಸ್ವಚ್ಚಗೊಳಿಸಲು ತಗಲುವ ವೆಚ್ಚದ ಎರಡುಪಟ್ಟು ಮೊತ್ತವನ್ನು ದಂಡ ವಿಧಿಸಿ ವಸೂಲಿ ಮಾಡಲಾಗುವುದು ಎಂದು ಚಿತ್ರದುರ್ಗ ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶ್ವಾಸ ಇರುವವರೆಗೂ ವಿಶ್ವಾಸ ಕಳೆದುಕೊಳ್ಳಬೇಡಿ : ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

    ಸುದ್ದಿಒನ್ : ಶ್ವಾಸ ಇರುವವರಿಗೂ ವಿಶ್ವಾಸ ಕಳೆದುಕೊಳ್ಳಬೇಡಿ ಎಂದು ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದರು. ಮಾಲ್ಡೀವ್ಸ್ ದೇಶದ ವಿಲ್ಲಾ ನೌಟೀಕ ಪ್ಯಾರಡೇಸ್ ದ್ವೀಪದಲ್ಲಿ ಶುಕ್ರವಾರ ನಡೆದ ವಿಶ್ವ

ಡಿ.ಕೆಂಪಣ್ಣನವರು ತಮ್ಮ ಜೀವಿತಾವಧಿಯ ಕೊನೆಯವರೆಗೂ ಭ್ರಷ್ಠಾಚಾರದ ವಿರುದ್ಧ ಹೋರಾಡಿದರು : ಕೆ.ಮಲ್ಲೇಶಪ್ಪ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.20 : ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣನವರ ನಿಧನಕ್ಕೆ ಜಿಲ್ಲಾ ಗುತ್ತಿಗೆದಾರರ ಸಂಘದಿಂದ

ಶಾಸಕ ಮುನಿರತ್ನ ವಿರುದ್ಧ ದೌರ್ಜನ್ಯ ತಡೆ ಕಾಯಿದೆಯಡಿ ಪ್ರಕರಣ ದಾಖಲಿಸಿ : ಎಸ್.ಜಯಣ್ಣ ಮನವಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.20 : ಗುತ್ತಿಗೆದಾರನನ್ನು ಮನೆಗೆ ಕರೆಸಿಕೊಂಡು ಲಂಚಕ್ಕೆ ಬೇಡಿಕೆಯಿಟ್ಟು ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಬೆಂಗಳೂರು ರಾಜರಾಜೇಶ್ವರಿ

error: Content is protected !!