Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗ | ಅಕ್ಟೋಬರ್ 21 ರಂಗಸೌರಭ ರಂಗೋತ್ಸವ ಕಾರ್ಯಕ್ರಮ

---Advertisement---

 

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 19 : ರಂಗಸೌರಭ ಕಲಾ ಸಂಘ ಮತ್ತು ಕನ್ನಡ ಮತ್ತು ಸಂಸ್ಕøತಿ ನಿರ್ದೇಶನಾಲಯ ಬೆಂಗಳೂರು ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ಸಂಭ್ರಮ-50, ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಎಂಬ ಧ್ಯೇಯ ವಾಕ್ಯದೊಂದಿಗೆ ರಂಗಸೌರಭ ರಂಗೋತ್ಸವ -2024 ನಾಡಗೀತೆ, ರಾಷ್ಟ್ರಗೀತೆ, ರೈತಗೀತೆ ಪ್ರಾಯೋಗಿಕ ತರಬೇತಿ ಕನ್ನಡ ಗೀತಗಾಯನ, ಯೋಗ ತರಬೇತಿ ಮತ್ತು ಕವಿಕಾವ್ಯ ಪರಿಚಯ ಕಾರ್ಯಕ್ರಮವನ್ನು ಕಾಮನಬಾವಿ ಬಡಾವಣೆಯಲ್ಲಿರುವ ಬಾಪೂಜಿ ವಿದ್ಯಾಸಂಸ್ಥೆಯ ಶ್ರೀಮತಿ ಹೇಮಾವತಿ ಕುವೆಂಪು ಶಿಕ್ಷಣ ಮಹಾವಿದ್ಯಾಲಯದ ಆವರಣದಲ್ಲಿ ಅಕ್ಟೋಬರ್ 21 ರಂದು ಸೋಮವಾರ ಬೆಳಿಗ್ಗೆ 10-30 ಗಂಟೆಗೆ ಏರ್ಪಡಿಸಲಾಗಿದೆ.

 

ಬಾಪೂಜಿ ವಿದ್ಯಾಸಂಸ್ಥೆಯ ಅಧ್ಯಕ್ಷ ಎಸ್.ಸಂದೀಪ್ ಉದ್ಘಾಟಿಸುವರು. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಚಿತ್ರದುರ್ಗ ಸಹಾಯಕ ನಿರ್ದೇಶಕ ರವಿಚಂದ್ರ ಅಧ್ಯಕ್ಷತೆ ವಹಿಸುವರು. ಪ್ರಾಚಾರ್ಯ ಡಾ.ಜಿ.ದಾಸಯ್ಯ ಉಪನ್ಯಾಸಕರಾದ ಡಾ.ಪಿ.ರಾಧಮ್ಮ, ಡಾ.ಎಂ.ಎಸ್.ಲಕ್ಷ್ಮೀದೇವಿ, ಎಂ.ಉಷಾಕಿರಣ, ಟಿ.ತಿಪ್ಪೇರುದ್ರಯ್ಯ, ಬಿ.ಪಾತಲಿಂಗಪ್ಪ, ಬಿ.ಹೇಮಲತ, ನಾಟಕಕಾರ ಮೈಸೂರು ರಮಾನಂದ, ರಂಗನಟ ಅಮಿತಾನಂದ ಮುಖ್ಯಅತಿಥಿಗಳಾಗಿ ಉಪಸ್ಥಿತರಿರುವರು.

 

ಯೋಗಥೆರಪಿ ತರಬೇತುದಾರ ಎಂ.ಬಿ.ಮುರುಳಿ, ರಂಗನಿರ್ದೇಶಕ ಕೆಪಿಎಂ ಗಣೇಶಯ್ಯ ತರಬೇತಿ ಸಂಪನ್ಮೂಲಗಳಾಗಿ ಭಾಗವಹಿಸುವರು.
ಕಂಡಕ್ಟರ್ ಗಂಗರಾಜು ವಿರಚಿತ ಮೈಸೂರು ರಮಾನಂದ ನಿರ್ದೇಶನದಲ್ಲಿ ಬೆಂಗಳೂರಿನ ಗೆಜ್ಜೆಹೆಜ್ಜೆ ರಂಗತಂಡದವರು ರಂಗಯ್ಯನ ರಾದ್ಧಾಂತ ಹಾಸ್ಯನಾಟಕ ಪ್ರದರ್ಶನ ನೀಡುವರು. ಪ್ರಶಿಕ್ಷಣಾರ್ಥಿಗಳಿಗೆ ಸರ್ಕಾರ ನಿಗಧಿಪಡಿಸಿದ ನಾಡಗೀತೆ, ರಾಷ್ಟ್ರಗೀತೆ, ರೈತಗೀತೆ, ಹುಯಿಲುಗೋಳ ನಾರಾಯಣರಾಯರ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ಕುವೆಂಪು ವಿರಚಿತ ಎಲ್ಲಾದರು ಇರು ಎಂತಾದರು ಇರು, ದ.ರಾ.ಬೇಂದ್ರೆ ಅವರ ಒಂದೇ ಒಂದೇ ಕರ್ನಾಟಕ ಒಂದೇ, ಸಿದ್ಧಯ್ಯ ಪುರಾಣಿಕ್ ಬರೆದ ಹೊತ್ತಿತೋ ಹೊತ್ತಿತೂ ಕನ್ನಡದ ದೀಪ, ಚನ್ನವೀರ ಕಣವಿಯವರ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡದ ಧ್ವನಿಮುದ್ರಿತ ಗೀತೆಗಳೊಂದಿಗೆ ಯೋಗ ತರಬೇತಿ ಹಾಗೂ ಸಾಹಿತ್ಯ ಕ್ಷೇತ್ರದ ವಿದ್ಯಾವಾರಿಧಿ ತ.ರಾ.ಸುಬ್ಬರಾವ್ ಇವರ ಕವಿಕಾವ್ಯ ಪರಿಚಯ ನೀಡಲಾಗುವುದು ಸಂಘದ ನಿರ್ದೇಶಕ ಪಿ.ಎನ್.ಗಿರೀಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment