ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಆಗಸ್ಟ್.02 : ಜೋಗಿಮಟ್ಟಿ ರಸ್ತೆ ಮೂರನೆ ಕ್ರಾಸ್ ಶೃಂಗೇರಿ ಮಠದ ಹಿಂಭಾಗ ಮನೆಯ ಮುಂದಿನ ಸೈಟ್ನಲ್ಲಿ ಅವಿನಾಶ್ ಎಂಬುವವರು ಏರ್ಟೆಲ್ ಟವರ್ ಅಳವಡಿಸಲು ಹೊರಟಿರುವುದನ್ನು ಅಲ್ಲಿನ ಬಹುತೇಕ ನಿವಾಸಿಗಳು ವಿರೋಧಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ನೀಡಿದ್ದಾರೆ.
ಜನಸಾಮಾನ್ಯರು ವಾಸಿಸುವ ಪ್ರದೇಶಗಳಲ್ಲಿ ಯಾವುದೇ ರೀತಿಯ ಟವರ್ ಗಳನ್ನು ಅಳವಡಿಸಬಾರದೆಂಬ ನಿಯಮವಿದ್ದರೂ ಹತ್ತು ಅಡಿ ಉದ್ದ ಹಾಗೂ ಅಗಲ ಗುಂಡಿ ತೋಡಿ ಟವರ್ ಅಳವಡಿಸುವುದರಿಂದ ಯಾವ ಸಮಯದಲ್ಲಿ ಅಪಾಯ ಸಂಭವಿಸುತ್ತದೋ ಎನ್ನುವುದನ್ನು ಹೇಳುವಂತಿಲ್ಲ. ವೃದ್ದರು, ಅಂಗವಿಕಲರು, ಗರ್ಭಿಣಿಯರು, ಬಾಣಂತಿಯರು, ಕ್ಯಾನ್ಸರ್ ರೋಗ ಪೀಡಿತರು, ಅಸ್ತಮಾದವರು ಇದ್ದಾರೆ.
ಟವರ್ ಅಳವಡಿಸುವ ಜಾಗದ ಎದುರಿನಲ್ಲಿಯೇ ಮಹಿಳಾ ಹಾಸ್ಟೆಲ್ ಕೂಡ ಇದೆ. ಕಬೀರಾನಂದ ಮಠದ ಶಾಲೆ ಇಲ್ಲಿಯೇ ಇರುವುದರಿಂದ ಪ್ರತಿನಿತ್ಯ ನೂರಾರು ಮಕ್ಕಳು ಓಡಾಡುತ್ತಿರುತ್ತಾರೆ. ಹಾಗಾಗಿ ಇಲ್ಲಿ ಟವರ್ ನಿಲ್ಲಿಸಲು ಅವಿನಾಶ್ಗೆ ಅನುಮತಿ ನೀಡದೆ ಮುಂದೆ ಆಗಬಹುದಾದ ಅನಾಹುತವನ್ನು ತಪ್ಪಿಸುವಂತೆ ಹೆಚ್.ರಾಮಮೂರ್ತಿ, ವೆಂಕಟೇಶ್, ಕಮಲಮ್ಮ, ಗಂಗಮ್ಮ, ಕೋಮಲ, ಗಿರಿಜ, ಹರೀಶ, ಸವಿತ, ಇಂದ್ರಮ್ಮ, ದೀಪು, ಅಶೋಕ, ಸರೋಜ ಇನ್ನು ಮುಂತಾದವರು ಒತ್ತಾಯಿಸಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್