Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಮೊಬೈಲ್ ಟವರ್ ಅಳವಡಿಕೆಗೆ ಸ್ಥಳೀಯ ನಿವಾಸಿಗಳ ವಿರೋಧ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್.02  : ಜೋಗಿಮಟ್ಟಿ ರಸ್ತೆ ಮೂರನೆ ಕ್ರಾಸ್ ಶೃಂಗೇರಿ ಮಠದ ಹಿಂಭಾಗ ಮನೆಯ ಮುಂದಿನ ಸೈಟ್‍ನಲ್ಲಿ ಅವಿನಾಶ್ ಎಂಬುವವರು ಏರ್‌ಟೆಲ್ ಟವರ್ ಅಳವಡಿಸಲು ಹೊರಟಿರುವುದನ್ನು ಅಲ್ಲಿನ ಬಹುತೇಕ ನಿವಾಸಿಗಳು ವಿರೋಧಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ನೀಡಿದ್ದಾರೆ.

ಜನಸಾಮಾನ್ಯರು ವಾಸಿಸುವ ಪ್ರದೇಶಗಳಲ್ಲಿ ಯಾವುದೇ ರೀತಿಯ ಟವರ್‌ ಗಳನ್ನು ಅಳವಡಿಸಬಾರದೆಂಬ ನಿಯಮವಿದ್ದರೂ ಹತ್ತು ಅಡಿ ಉದ್ದ ಹಾಗೂ ಅಗಲ ಗುಂಡಿ ತೋಡಿ ಟವರ್ ಅಳವಡಿಸುವುದರಿಂದ ಯಾವ ಸಮಯದಲ್ಲಿ ಅಪಾಯ ಸಂಭವಿಸುತ್ತದೋ ಎನ್ನುವುದನ್ನು ಹೇಳುವಂತಿಲ್ಲ. ವೃದ್ದರು, ಅಂಗವಿಕಲರು, ಗರ್ಭಿಣಿಯರು, ಬಾಣಂತಿಯರು, ಕ್ಯಾನ್ಸರ್ ರೋಗ ಪೀಡಿತರು, ಅಸ್ತಮಾದವರು ಇದ್ದಾರೆ.

ಟವರ್ ಅಳವಡಿಸುವ ಜಾಗದ ಎದುರಿನಲ್ಲಿಯೇ ಮಹಿಳಾ ಹಾಸ್ಟೆಲ್ ಕೂಡ ಇದೆ. ಕಬೀರಾನಂದ ಮಠದ ಶಾಲೆ ಇಲ್ಲಿಯೇ ಇರುವುದರಿಂದ ಪ್ರತಿನಿತ್ಯ ನೂರಾರು ಮಕ್ಕಳು ಓಡಾಡುತ್ತಿರುತ್ತಾರೆ. ಹಾಗಾಗಿ ಇಲ್ಲಿ ಟವರ್ ನಿಲ್ಲಿಸಲು ಅವಿನಾಶ್‍ಗೆ ಅನುಮತಿ ನೀಡದೆ ಮುಂದೆ ಆಗಬಹುದಾದ ಅನಾಹುತವನ್ನು ತಪ್ಪಿಸುವಂತೆ ಹೆಚ್.ರಾಮಮೂರ್ತಿ, ವೆಂಕಟೇಶ್, ಕಮಲಮ್ಮ, ಗಂಗಮ್ಮ, ಕೋಮಲ, ಗಿರಿಜ, ಹರೀಶ, ಸವಿತ, ಇಂದ್ರಮ್ಮ, ದೀಪು, ಅಶೋಕ, ಸರೋಜ ಇನ್ನು ಮುಂತಾದವರು ಒತ್ತಾಯಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!