ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಆಗಸ್ಟ್.02 : ಜೋಗಿಮಟ್ಟಿ ರಸ್ತೆ ಮೂರನೆ ಕ್ರಾಸ್ ಶೃಂಗೇರಿ ಮಠದ ಹಿಂಭಾಗ ಮನೆಯ ಮುಂದಿನ ಸೈಟ್ನಲ್ಲಿ ಅವಿನಾಶ್ ಎಂಬುವವರು ಏರ್ಟೆಲ್ ಟವರ್ ಅಳವಡಿಸಲು ಹೊರಟಿರುವುದನ್ನು ಅಲ್ಲಿನ ಬಹುತೇಕ ನಿವಾಸಿಗಳು ವಿರೋಧಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ನೀಡಿದ್ದಾರೆ.
ಜನಸಾಮಾನ್ಯರು ವಾಸಿಸುವ ಪ್ರದೇಶಗಳಲ್ಲಿ ಯಾವುದೇ ರೀತಿಯ ಟವರ್ ಗಳನ್ನು ಅಳವಡಿಸಬಾರದೆಂಬ ನಿಯಮವಿದ್ದರೂ ಹತ್ತು ಅಡಿ ಉದ್ದ ಹಾಗೂ ಅಗಲ ಗುಂಡಿ ತೋಡಿ ಟವರ್ ಅಳವಡಿಸುವುದರಿಂದ ಯಾವ ಸಮಯದಲ್ಲಿ ಅಪಾಯ ಸಂಭವಿಸುತ್ತದೋ ಎನ್ನುವುದನ್ನು ಹೇಳುವಂತಿಲ್ಲ. ವೃದ್ದರು, ಅಂಗವಿಕಲರು, ಗರ್ಭಿಣಿಯರು, ಬಾಣಂತಿಯರು, ಕ್ಯಾನ್ಸರ್ ರೋಗ ಪೀಡಿತರು, ಅಸ್ತಮಾದವರು ಇದ್ದಾರೆ.
ಟವರ್ ಅಳವಡಿಸುವ ಜಾಗದ ಎದುರಿನಲ್ಲಿಯೇ ಮಹಿಳಾ ಹಾಸ್ಟೆಲ್ ಕೂಡ ಇದೆ. ಕಬೀರಾನಂದ ಮಠದ ಶಾಲೆ ಇಲ್ಲಿಯೇ ಇರುವುದರಿಂದ ಪ್ರತಿನಿತ್ಯ ನೂರಾರು ಮಕ್ಕಳು ಓಡಾಡುತ್ತಿರುತ್ತಾರೆ. ಹಾಗಾಗಿ ಇಲ್ಲಿ ಟವರ್ ನಿಲ್ಲಿಸಲು ಅವಿನಾಶ್ಗೆ ಅನುಮತಿ ನೀಡದೆ ಮುಂದೆ ಆಗಬಹುದಾದ ಅನಾಹುತವನ್ನು ತಪ್ಪಿಸುವಂತೆ ಹೆಚ್.ರಾಮಮೂರ್ತಿ, ವೆಂಕಟೇಶ್, ಕಮಲಮ್ಮ, ಗಂಗಮ್ಮ, ಕೋಮಲ, ಗಿರಿಜ, ಹರೀಶ, ಸವಿತ, ಇಂದ್ರಮ್ಮ, ದೀಪು, ಅಶೋಕ, ಸರೋಜ ಇನ್ನು ಮುಂತಾದವರು ಒತ್ತಾಯಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.















