Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ |  ಪಿ.ಡಿ.ಒ. ಅಮಾನತು : ಜಿ.ಪಂ. ಸಿಇಒ  ಆದೇಶ

---Advertisement---

ಚಿತ್ರದುರ್ಗ. ಜುಲೈ.30:  ಗ್ರಾಮ ಪಂಚಾಯತಿಗೆ ಬರಬೇಕಾದ ಸಾರ್ವಜನಿಕ ಹಣದ ದುರುಪಯೋಗ, ಸರ್ಕಾರದ ಮಾರ್ಗಸೂಚಿ ಉಲ್ಲಂಘಿಸಿ ಕರ್ತವ್ಯ ಲೋಪ ಎಸಗಿದ್ದಾರೆ ಎಂಬ ಆರೋಪಕ್ಕಾಗಿ ಭರಮಸಾಗರ ಗ್ರಾಮ ಪಂಚಾಯತಿ ಪಿಡಿಒ ಶ್ರೀದೇವಿ ಅವರನ್ನು ಅಮಾನತುಗೊಳಿಸಿ, ಅವರ ವಿರುದ್ದ ವಿಚಾರಣೆ ಕಾಯ್ದಿರಿಸಿ, ಜಿ.ಪಂ. ಸಿಇಓ ಎಸ್.ಜೆ.ಸೋಮಶೇಖರ್ ಆದೇಶ ಹೊರಡಿಸಿದ್ದಾರೆ.

ಭರಮಸಾಗರ ಗ್ರಾ.ಪಂ. ನಲ್ಲಿ ಪಿಡಿಒ ಆಗಿ ಕಾರ್ಯನಿರ್ವಹಿಸುತ್ತಿರುವ ಶ್ರೀದೇವಿ ಅವರು ಕಾನೂನು ಬಾಹಿರವಾಗಿ ಸಾರ್ವಜನಿಕ ವಿರೋಧಿ, ಸರ್ವಾಧಿಕಾರಿ ಧೋರಣೆಯಿಂದ ಕರ್ತವ್ಯ ನಿರ್ವಹಣೆ, ಆಡಳಿತ ಮಂಡಳಿಯ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಚುನಾಯಿತ ಪ್ರತಿನಿಧಿಗಳಿಗೆ ಯಾವುದೇ ಬೆಲೆ ಕೊಡದೆ, ಗೌರವ ನೀಡದೆ, ಕಚೇರಿಯ ನೌಕರರನ್ನಾಗಲಿ, ಸಿಬ್ಬಂದಿಯನ್ನಾಗಲಿ ವಿಶ್ವಾಸಕ್ಕೆ ತೆಗೆದುಕೊಳ್ಳದೆ ಏಕಪಕ್ಷೀಯವಾಗಿ ಆಡಳಿತ ನಡೆಸುತ್ತಿದ್ದು, ಗ್ರಾ.ಪಂ. ನ ವಿವಿಧ ಕೆಲಸಗಳಿಗೆ ಬರುವ ಸಾರ್ವಜನಿಕರಿಂದ ರಶೀದಿ ಹಣ ಪಾವತಿಸಿಕೊಂಡು, ಗ್ರಾ.ಪಂ. ಖಾತೆಗೆ ಜಮಾ ಮಾಡದೆ ಹಣ ದುರುಪಯೋಗ ಮಾಡಿರುತ್ತಾರೆಂದು, ಅಲ್ಲದೆ ಕೆಲವು ಇ-ಸ್ವತ್ತುಗಳ ವಿತರಣೆಗೆ ಪಾವತಿಸಲಾದ ಹಣಕ್ಕೆ ರಸೀದಿ ಹಾಕದೆ ಹಣವನ್ನು ಸ್ವಂತಕ್ಕೆ ಉಪಯೋಗಿಸಿರುತ್ತಾರೆ ಎಂಬುದಾಗಿ ಗ್ರಾ.ಪಂ. ಅಧ್ಯಕ್ಷರು, ಗ್ರಾ.ಪಂ. ಸದಸ್ಯರು ನೀಡಿರುವ ದೂರುಗಳ ಕುರಿತು ಜಿ.ಪಂ. ಮುಖ್ಯ ಲೆಕ್ಕಾಧಿಕಾರಿಯವರು ವಿಶೇಷ ಲೆಕ್ಕ ತನಿಖೆ ಕೈಗೊಂಡು ತನಿಖಾ ವರದಿಯನ್ನು ಸಲ್ಲಿಸಿದ್ದರು.

96 ಸಾವಿರ ರೂ. ಗಳಿಗೆ ಸಾರ್ವಜನಿಕರಿಂದ ಶುಲ್ಕ ಪಡೆದು ಸರ್ಕಾರದ ಮಾರ್ಗಸೂಚಿ ಉಲ್ಲಂಘಿಸಿ ಮ್ಯಾನ್ಯುಯಲ್‌ನಲ್ಲಿ ಜನರಲ್ ಲೈಸೆನ್ಸ್ ನೀಡಿರುವುದು, ಸೇರಿದಂತೆ ಗ್ರಾ.ಪಂ. ಗೆ ಬರಬೇಕಾದ ಸಾರ್ವಜನಿಕ ಹಣದ ದುರುಪಯೋಗವಾಗಿರಬಹುದೆಂಬ ಅಂಶ ಮೇಲ್ನೋಟಕ್ಕೆ ಕಂಡು ಬಂದಿರುವುದಾಗಿ ಅವರು ವರದಿ ಸಲ್ಲಿಸಿದ್ದರು.

ಆರೋಪಗಳ ಬಗ್ಗೆ ಸ್ಪಷ್ಟೀಕರಣ ನೀಡುವಂತೆ ನೀಡಿದ ನೋಟಿಸ್‌ಗೆ, ಪಿಡಿಒ ಶ್ರೀದೇವಿ ಅವರು ನೀಡಿರುವ ಸಮಜಾಯಿಷಿಯು ಅಸಮಂಜಸವಾಗಿರುವುದರಿAದ ನಿಯಮಾನುಸಾರ ಶ್ರೀದೇವಿ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಸಿಇಓ ಎಸ್.ಜೆ.ಸೋಮಶೇಖರ್ ಆದೇಶದಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment