ಸುದ್ದಿಒನ್, ಚಿತ್ರದುರ್ಗ, ಜೂನ್. 21 : ತಾಲೂಕಿನ ಚಿಕ್ಕಾಲಘಟ್ಟ ಗ್ರಾಮದ ವಾಸಿ ದಿ.ಕಿಟ್ಟದಹಟ್ಟಿ ಗೌರಪ್ಪನವರ ಧರ್ಮಪತ್ನಿ ಶ್ರೀಮತಿ ಪಾರ್ವತಮ್ಮ ನವರು ಇಂದು ಸಂಜೆ ನಿಧನರಾದರು. ಮೃತರು ನಾಲ್ವರು ಪುತ್ರರು, ಮೂವರು ಪುತ್ರಿಯರು,ಮಕ್ಕಳು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಅಂತ್ಯಸಂಸ್ಕಾರ ನಾಳೆ (ಜೂನ್. 22 ರಂದು) ಚಿಕ್ಕಾಲಘಟ್ಟ ಗ್ರಾಮದಲ್ಲಿ ಜರುಗಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.




