Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಸೆ. 02 ರಂದು ಪ್ರಾಣಿಗಳ ದತ್ತು ಸ್ವೀಕರಿಸುವ ಮೂಲಕ ಪವನ್ ಕಲ್ಯಾಣ್ ಜನ್ಮದಿನ ಆಚರಣೆ

---Advertisement---

 

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 01 : ಜನಸೇನಾ ಪಕ್ಷದ ಸಂಸ್ಥಾಪಕ, ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರ ಜನ್ಮ ದಿನವನ್ನು ಪ್ರಾಣಿಗಳನ್ನು ದತ್ತು ತೆಗೆದುಕೊಳ್ಳುವ ಮೂಲಕ ವಿಶೇಷವಾಗಿ ಆಚರಿಸಲು ಪಕ್ಷದ ರಾಜ್ಯ ಸಮಿತಿ ತೀರ್ಮಾನಿಸಿದೆ.

ಪಕ್ಷದ ರಾಜ್ಯ ಸಮಿತಿ ಸದಸ್ಯ, ಜಿಲ್ಲಾ ಘಟಕದ ಅಧ್ಯಕ್ಷ ಡಿ.ಬಸವರಾಜ್‌ (ಬಿ.ಟಿ.ರಾಜ್‌) ನೇತೃತ್ವದಲ್ಲಿ ಸೆ.2 ರಂದು ಆಡುಮಲ್ಲೇಶ್ವರ ಮೃಗಾಲಯದಲ್ಲಿ ಬೆಳಿಗ್ಗೆ 11 ಗಂಟೆಗೆ ಪ್ರಾಣಿಗಳ ದತ್ತು ಸ್ವೀಕಾರ ಸಮಾರಂಭ ನಡೆಯಲಿದೆ. ಇದೇ ವೇಳೆ ಅರಣ್ಯ ಪಾಲಕರಿಗೆ ಜರ್ಕಿನ್‌ ವಿತರಿಸಲಾಗುತ್ತಿದೆ.

ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಸಿಎಫ್) ಜಿ.ಗೋಪ್ಯಾ ನಾಯ್ಕ್‌ , ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್‌) ಆರ್‌.ವಸಂತ ಕುಮಾರ್‌, ವಲಯ ಅರಣ್ಯಾಧಿಕಾರಿ (ಆರ್‌ಎಫ್‌ಒ) ಐ.ಬಿ.ಅಕ್ಷತಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಪಕ್ಷದ ಮಾಧ್ಯಮ ಸಂಯೋಜಕ ಸಿ.ಅವಿನಾಶ್‌ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now