Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಪಿ.ಸಿ.ಪಿ.ಎನ್.ಡಿ.ಟಿ ಸಲಹಾ ಸಮಿತಿಯ ಅಧ್ಯಕ್ಷರಾಗಿ ಡಾ. ಸೌಮ್ಯ ನೇಮಕ

Facebook
Twitter
Telegram
WhatsApp

ಚಿತ್ರದುರ್ಗ. ಜುಲೈ.06:  ಪಿ.ಸಿ.ಪಿ.ಎನ್.ಡಿ.ಟಿ (ಗರ್ಭಪೂರ್ವ ಮತ್ತು ಪ್ರಸವಪೂರ್ವ ಲಿಂಗ ಪತ್ತೆ ತಂತ್ರ ವಿಧಾನಗಳು (ಲಿಂಗ ಆಯ್ಕೆ ನಿಷೇಧ) ಕಾಯ್ದೆ ಅನುಸಾರ ಸಲಹಾ ಸಮಿತಿಯನ್ನು ಪುನರ್ ರಚಿಸಲಾಗಿದ್ದು, ಸಲಹಾ ಸಮಿತಿ ಅಧ್ಯಕ್ಷರಾಗಿ ಚಿತ್ರದುರ್ಗದ ಖಾಸಗಿ ನರ್ಸಿಂಗ್ ಹೋಂನ ತಜ್ಞ ವೈದ್ಯೆ ಡಾ.ಸೌಮ್ಯ, ಸದಸ್ಯ ಕಾರ್ಯದರ್ಶಿಯಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಣುಪ್ರಸಾದ್, ಸದಸ್ಯರುಗಳಾಗಿ, ಡಾ.ದೇವರಾಜು, ಡಾ.ಸತ್ಯನಾರಾಯಣ, ಕಾನೂನು ಸಲಹೆಗಾರರಾಗಿ ವಕೀಲ ಉಮೇಶ್, ಸರ್ಕಾರೇತರ ಸ್ವಯಂ ಸೇವಾ ಸಂಘದ ಮೀನಾಕ್ಷಿ, ಗಾಯಿತ್ರಿ ಶಿವರಾಂ, ಜಿ.ಎಸ್.ಗೌಡ ಸೇರಿದಂತೆ ಜಿಲ್ಲಾ ವಾರ್ತಾಧಿಕಾರಿ, ಸರ್ಕಾರಿ ಅಭಿಯೋಜಕರು ಕಾರ್ಯನಿರ್ವಹಿಸಲಿದ್ದಾರೆ.

ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಶನಿವಾರ ಸಲಹಾ ಸಮಿತಿ ಸಭೆ ಜರುಗಿತು.

ಸಭೆಯಲ್ಲಿ ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆಯಲ್ಲಿರುವ ಮಾತೃತ್ವ ಮೆಟರ್‍ನಿಟಿ ಮತ್ತು ಫರ್ಟಿಲಿಟಿ ಸೆಂಟರ್ ಹೊಸ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಸೆಂಟರ್ ತೆರೆಯಲು ಅನುಮತಿ ನೀಡಲಾಯಿತು. ಹೊಸದುರ್ಗದ ಮಾರುತಿ ನರ್ಸಿಂಗ್ ಹೋಂ, ಚಿತ್ರದುರ್ಗ ನಗರದ ಗುರು ಕೊಟ್ಟೂರೇಶ್ವರ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಸೆಂಟರ್‍ಗಳ ನೊಂದಣಿಗಳನ್ನು ಪುನಃ ನವೀಕರಿಸಲಾಯಿತು.

ಹೊಸದುರ್ಗದ ಶಾರದಾ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಸೆಂಟರ್, ಹಿರಿಯೂರಿನ ಸಾಯಿ ಶ್ರೀನಿವಸ ಡಯೋಗ್ನೋಸಿಸ್ ಸೆಂಟರ್‍ಗಳ ವಿಳಾಸ ಬದಲಾವಣೆಗೆ ಅನುಮತಿ ನೀಡಲಾಯಿತು. ನಗರದ ಪಶುಸಂಗೋಪನೆ ಇಲಾಖೆಯ ಪಾಲಿ ಕ್ಲಿನಿಕ್, ಮತ್ತು ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಸೆಂಟರ್ ನೋಂದಣಿ ಅವಧಿ ಮುಕ್ತಾಯವಾಗಿದ್ದು, ನವೀಕರಿಸಿಕೊಳ್ಳುವಂತೆ ಪಶು ಇಲಾಖೆ ಉಪನಿರ್ದೇಶಕರಿಗೆ ಪತ್ರ ಬರೆಯಲು ನಿರ್ಣಯ ಕೈಗೊಳ್ಳಲಾಯಿತು.

ಹಿರಿಯೂರಿನ ಬಾಲಾಜಿ ನರ್ಸಿಂಗ್ ಹೋಂ ಮತ್ತು ಡೆಂಟಲ್ ಕ್ಲಿನಿಕ್ ಮತ್ತು ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಸೆಂಟರ್ ಇವರು ಹೊಸದಾಗಿ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಯಂತ್ರ ಖರೀದಿಸಿದ ನಂತರ ಹೊಸದಾಗಿ ನೊಂದಣಿ ಮಾಡಬೇಕು. ಬಸವೇಶ್ವರ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಇಲ್ಲಿ ಪ್ರಾತ್ಯಕ್ಷಿತೆಗಾಗಿ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಯಂತ್ರ ಬಳಸಲು ರಾಜ್ಯ ಮಟ್ಟದಲ್ಲಿ ಅನುಮತಿ ಪಡೆಯಲು ತಿಳಿಸುವಂತೆ ಸಭೆಯಲ್ಲಿ ಚರ್ಚಿಸಲಾಯಿತು. ವೇದಾಂತ ಆಸ್ಪತ್ರೆ, ಚಿತ್ರದುರ್ಗ ಇವರು ಹೊಸದಾಗಿ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಸೆಂಟರ್ ಆರಂಭಿಸಲು ಸಲ್ಲಿಸಿದ ಅರ್ಜಿಯನ್ನು ತಜ್ಞ ರೇಡಿಯಾಲಜಿಸ್ಟ್ ಇಲ್ಲದ ಕಾರಣ ಅರ್ಜಿಯನ್ನು ತಿರಸ್ಕರಿಸಲಾಯಿತು.

ಸ್ಕ್ಯಾನಿಂಗ್ ಕೊಠಡಿಗೆ ಅನ್ಯರ ಪ್ರವೇಶ ನಿಷೇಧ : ಗರ್ಭಿಣಿಯರ ಸ್ಕ್ಯಾನಿಂಗ್ ವೇಳೆ ಸ್ಕ್ಯಾನಿಂಗ್ ಕೊಠಡಿಯೊಳಗೆ ಗರ್ಭಿಣಿಯರ ಕುಟುಂಬ ವರ್ಗ, ಹಾಗೂ ಇತರೆ ಸಹಾಯಕರ ಪ್ರವೇಶವನ್ನು ಕಡ್ಡಾಯವಾಗಿ ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ. ಇದರ ಜೊತೆಗೆ ಸ್ಕ್ಯಾನಿಂಗ್ ಯಂತ್ರಕ್ಕೆ ಹೆಚ್ಚುವರಿಯಾಗಿ ಕಂಪ್ಯೂಟರ್ ಮಾನಿಟರ್ ಅಳವಡಿಸುವುದನ್ನು ಸಹ ನಿಷೇಧಿಸಲಾಗಿದೆ.  ಈ ಬಗ್ಗೆ ಮಾಹಿತಿ ಫಲಕವನ್ನು ಸ್ಕ್ಯಾನಿಂಗ್ ಸೆಂಟರ್‍ನಲ್ಲಿ ಪ್ರದರ್ಶಿಸಬೇಕು.  ಈ ಅಂಶಗಳನ್ನು ಎಲ್ಲಾ ಸ್ಕ್ಯಾನಿಂಗ್ ಸೆಂಟರ್‍ಗಳು ಪಾಲಿಸುವಂತೆ ಸೂಚನೆ ನೀಡಲು ನಿರ್ಧರಿಸಲಾಯಿತು.

ಸಭೆಯಲ್ಲಿ ಪಿಸಿಪಿಎನ್‍ಡಿಟಿ ಸಲಹಾ ಸಮಿತಿ ಅಧ್ಯಕ್ಷೆ ಡಾ.ಎಸ್.ಸೌಮ್ಯ, ಸದಸ್ಯರಾದ ಡಾ.ಸತ್ಯನಾರಾಯಣ, ಎಂ.ಉಮೇಶ್, ಕೆ.ಪಿ.ಮೀನಾಕ್ಷಿ ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸರ್ಕಾರಿ ಭೂಮಿಯನ್ನು ಸಕ್ರಮಗೊಳಿಸಲು ಸರ್ಕಾರ ನಿರ್ಧಾರ..!

ಬೆಂಗಳೂರು: ಸಾಕಷ್ಟು ಕಡೆ ಸರ್ಕಾರಿ ಭೂಮಿಯಲ್ಲೇ ಜನ ಉಳುಮೆ ಜಮೀನು ಮಾಡಿಕೊಂಡಿದ್ದಾರೆ. ಇದೀಗ ಸರ್ಕಾರಿ ಜಮೀನಿನಲ್ಲಿ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸುವ ಬಕರ್ ಹುಕುಂ ಯೋಜನೆಯಡಿಯಲ್ಲಿ ತಿರಸ್ಕೃತಗೊಂಡ ಅರ್ಜಿಗಳನ್ನು ಪುನರ್ ಪರಿಶೀಲಿಸಲಾಗುವುದು ಎಂದು ಸಚಿವ ಕೃಷ್ಣ

ಚಿತ್ರದುರ್ಗ ಡಿಸಿಸಿ ಬ್ಯಾಂಕ್ ನಿಂದ 17 ಲಕ್ಷ ಶಿಕ್ಷಣ ನಿಧಿಗೆ ದೇಣಿಗೆ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 05 : ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ., ಚಿತ್ರದುರ್ಗ ಇದರ ದಿನಾಂಕ:05-10-2024 ರಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಸನ್ಮಾನ್ಯ ಡಿ. ಸುಧಾಕರ್, ಮಾನ್ಯ

ಚಿತ್ರದುರ್ಗದಲ್ಲಿ ಶರನ್ನವರಾತ್ರಿ ಸಂಭ್ರಮ : ಕಣಿವೆಮಾರಮ್ಮ ಹಾಗೂ ತುಳಜಾ ಭವಾನಿ ದೇವಿಗೆ ವಿಶೇಷ ಪೂಜೆ

  ವರದಿ ಮತ್ತು ಫೋಟೋ ಕೃಪೆ, ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಹೊಳಲ್ಕೆರೆ, ಅಕ್ಟೋಬರ್. 05 : ದಸರಾ ನವರಾತ್ರಿ ವಿಶೇಷವಾಗಿ ನಗರ ಪೊಲೀಸ್ ಠಾಣೆ ಆವರಣದಲ್ಲಿರುವ ಕಣಿವೆಮಾರಮ್ಮನಿಗೆ ಶನಿವಾರ

error: Content is protected !!