Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಕಳೆದ 24 ಗಂಟೆಯಲ್ಲಿ ಸುರಿದ ಮಳೆ ವರದಿ : 22 ಮನೆಗಳಿಗೆ ಹಾನಿ

Facebook
Twitter
Telegram
WhatsApp

 

ಚಿತ್ರದುರ್ಗ. ಆಗಸ್ಟ್.17:  ಶುಕ್ರವಾರ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ ಜಿಲ್ಲೆಯಲ್ಲಿ 21.9 ಮಿ.ಮೀ ಮಳೆಯಾಗಿದೆ.

ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನಲ್ಲಿ 32.1 ಮಿ.ಮೀ, ಚಿತ್ರದುರ್ಗ ತಾಲ್ಲೂಕಿನಲ್ಲಿ 19.8 ಹಿರಿಯೂರು ತಾಲ್ಲೂಕು 21.8 ಮಿ.ಮೀ,

ಹೊಳಲ್ಕೆರೆ ತಾಲ್ಲೂಕು 13.5 ಮಿ.ಮೀ, ಹೊಸದುರ್ಗ ತಾಲ್ಲೂಕಿನಲ್ಲಿ 21.9 ಹಾಗೂ ಮೊಳಕಾಲ್ಮುರು ತಾಲ್ಲೂಕಿನಲ್ಲಿ 9.5 ಮಿ.ಮೀ ಮಳೆಯಾಗಿದೆ.

ಹೋಬಳಿವಾರು ಮಳೆ ವಿವರ: ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆಯಲ್ಲಿ 26.2 ಮಿ.ಮೀ, ನಾಯಕನಹಟ್ಟಿ 35.7 ಮಿ.ಮೀ, ಪರಶುರಾಂಪುರ 44.3 ಮಿ.ಮೀ, ತಳಕು 23.1 ಮಿ.ಮೀ ಮಳೆಯಾಗಿದೆ.

ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗದಲ್ಲಿ 32.2 ಮಿ.ಮೀ, ಭರಮಸಾಗರ 10.4 ಮಿ.ಮೀ, ಹಿರೇಗುಂಟನೂರು 16.3 ಮಿ.ಮೀ, ತುರುವನೂರು 11.1 ಮಿ.ಮೀ ಮಳೆಯಾಗಿದೆ.

ಹಿರಿಯೂರು ತಾಲ್ಲೂಕಿನ ಹಿರಿಯೂರಿನಲ್ಲಿ 16.8 ಮಿ.ಮೀ, ಐಮಂಗಲ 18.9 ಮಿ.ಮೀ, ಧರ್ಮಪುರ 36.9 ಮಿ.ಮೀ, ಜೆ.ಜೆ.ಹಳ್ಳಿ 13.7 ಮಿ.ಮೀ ಮಳೆಯಾಗಿದೆ.

ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 13.8 ಮಿ.ಮೀ, ಬಿ.ದುರ್ಗ 2.7 ಮಿ.ಮೀ, ರಾಮಗಿರಿ 10.6 ಮಿ.ಮೀ, ತಾಳ್ಯ 23.1 ಮಿ.ಮೀ ಮಳೆಯಾಗಿದೆ.

ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 12.1 ಮಿ.ಮೀ, ಮಾಡದಕೆರೆ 12.6 ಮಿ.ಮೀ, ಮತ್ತೋಡು 37.9 ಮಿ.ಮೀ, ಶ್ರೀರಾಂಪುರ 34 ಮಿ.ಮೀ ಮಳೆಯಾಗಿದೆ.

ಮೊಳಕಾಲ್ಮುರು ತಾಲ್ಲೂಕಿನ ಮೊಳಕಾಲ್ಮುರುನಲ್ಲಿ 3.2 ಮಿ.ಮೀ ಹಾಗೂ ದೇಮಸಮುದ್ರದಲ್ಲಿ 16.5 ಮಿ.ಮೀ ಮಳೆಯಾಗಿದೆ.

44 ಮನೆಗಳು ಭಾಗಶಃ ಹಾನಿ: ಶುಕ್ರವಾರ ಸುರಿದ ಮಳೆಗೆ ಜಿಲ್ಲೆಯಾದ್ಯಂತ ಒಟ್ಟು 44 ಮನೆಗಳು ಭಾಗಶಃ ಹಾನಿಯಾಗಿವೆ. 20 ಮನೆಗಳಿಗೆ ನೀರು ನುಗ್ಗಿರುವ ಪ್ರಕರಣಗಳು ವರದಿಯಾಗಿದ್ದು, 106 ಸಣ್ಣ ಜಾನುವಾರುಗಳು ಮೃತಪಟ್ಟಿವೆ. 2 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾಗೂ 612.4 ಹೆಕ್ಟೇರ್ ಕೃಷಿ ಬೆಳೆಹಾನಿಯಾಗಿದೆ.

ಚಿತ್ರದುರ್ಗ ತಾಲ್ಲೂಕಿನಲ್ಲಿ 22 ಮನೆಗಳು ಭಾಗಶಃ ಹಾನಿ ಹಾಗೂ 20 ಮನಗಳಿಗೆ ನೀರು ನುಗ್ಗಿದ್ದು, 610 ಹೆಕ್ಟೇರ್ ಕೃಷಿ ಬೆಳೆಹಾನಿಯಾಗಿದೆ. ಚಳ್ಳಕೆರೆ ತಾಲ್ಲೂಕಿನಲ್ಲಿ 18 ಮನೆಗಳು ಭಾಗಶಃ ಹಾನಿ, 106 ಸಣ್ಣ ಜಾನುವಾರು ಮೃತಪಟ್ಟಿವೆ ಹಾಗೂ 2 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾಗೂ 2 ಹೆಕ್ಟೇರ್ ಕೃಷಿ ಬೆಳೆಹಾನಿಯಾಗಿದೆ. ಹೊಳಲ್ಕೆರೆ ತಾಲ್ಲೂಕಿನಲ್ಲಿ 1 ಮನೆ ಭಾಗಶಃ ಹಾನಿಯಾಗಿದೆ. ಹಿರಿಯೂರು ತಾಲ್ಲೂಕಿನಲ್ಲಿ 2 ಮನೆಗಳು ಭಾಗಶಃ ಹಾನಿಯಾಗಿದ್ದು, 0.40 ಹೆಕ್ಟೇರ್ ಕೃಷಿ ಬೆಳೆಹಾನಿಯಾಗಿದೆ. ಮೊಳಕಾಲ್ಮುರು ತಾಲ್ಲೂಕಿನಲ್ಲಿ 1 ಮನೆ ಭಾಗಶಃ ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!