ಚಿತ್ರದುರ್ಗ | ಗ್ರಾಮೀಣ ಪ್ರದೇಶದ ಈ ಊರುಗಳಲ್ಲಿ ಮಾ.8ರಂದು ವಿದ್ಯುತ್ ವ್ಯತ್ಯಯ

1 Min Read

ಚಿತ್ರದುರ್ಗ. ಮಾ.07: ಚಿತ್ರದುರ್ಗ ವಿಭಾಗದ ವ್ಯಾಪ್ತಿಯಲ್ಲಿರುವ 220/66/11 ಕೆ.ವಿ ಚಿತ್ರದುರ್ಗ ಸ್ವೀಕೃತಿ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ವಿ.ಜೆ.ಎನ್.ಎಲ್ ವತಿಯಿಂದ ಭದ್ರಾ ಮೇಲ್ದಂಡೆ ಯೋಜನೆಯ ಅಕ್ವಡಕ್ಟ್ ನಿರ್ಮಾಣ ಕೆಲಸ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಮಾರ್ಚ್ 8ರಂದು ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

 

ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ಮಾಡನಾಯಕನಹಳ್ಳಿ, ಸಿ.ಬಿ.ಹಳ್ಳಿ, ಯಳವರ್ತಿ, ಮುದ್ದಾಪುರ, ಹೊಸಗೊಲ್ಲರಹಟ್ಟಿ, ಬಂಗಾರಕ್ಕನಹಳ್ಳಿ, ರಾಯನಹಳ್ಳಿ, ಸೂರೇನಹಳ್ಳಿ, ಐನಹಳ್ಳಿ, ತುರುವನೂರು, ಬೊಮ್ಮಕ್ಕನಹಳ್ಳಿ, ಕೂನಬೇವು, ಅವಳೇನಹಳ್ಳಿ, ದೊಡ್ಡಘಟ್ಟ, ಕರಿಯಮ್ಮನಹಟ್ಟಿ, ಕೋಟೆಹಟ್ಟಿ, ಹುಣಸೇಕಟ್ಟೆ, ಯಳಗೋಡು, ಇಸಾಮುದ್ರ, ನೆಲ್ಲಿಕಟ್ಟೆ, ಕಾಲಗೆರೆ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಹಾಗೂ ಗ್ರಾಹಕರು ಇಲಾಖೆಯೊಂದಿಗೆ ಸಹಕರಿಸಬೇಕು ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.

Share This Article