ಚಿತ್ರದುರ್ಗ. ಮೇ.19: ಬೆಸ್ಕಾಂ ಚಿತ್ರದುರ್ಗ ನಗರ ಉಪವಿಭಾಗ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಇರುವುದರಿಂದ ಮೇ 20ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಚಿತ್ರದುರ್ಗ ನಗರದ ಬಸವೇಶ್ವರ ನಗರ, ಕನಕ ನಗರ, ಮಲ್ಲಾಪುರ, ಮೆದೇಹಳ್ಳಿ ಮಲ್ಲನಕಟ್ಟೆ, ಅಶ್ವತ್ ರೆಡ್ಡಿ ಬಡಾವಣೆ, ಶಿವಚಾರ್ಯ ಬಡಾವಣೆ, ಕೋಡೆನಹಟ್ಟಿ, ತಮಟಕಲ್ಲು, ಗ್ರಾಮಾಂತರ ಪೊಲೀಸ್ ಠಾಣೆ, ಪಿ.ಕೆ.ಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ. ಚಿತ್ರದುರ್ಗ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಗ್ರಾಹಕರು ವಿದ್ಯುತ್ ನಿಲುಗಡೆ ಸಮಯದಲ್ಲಿ ಸಹಕರಿಸಬೇಕು ಎಂದು ಬೆಸ್ಕಾಂ ನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.















