Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಚಿತ್ರದುರ್ಗ | ಒನಕೆ ಓಬವ್ವ ಜಯಂತಿ ಅದ್ದೂರಿ ಆಚರಣೆಗೆ ಸಿದ್ದತೆ : ಪೂರ್ವಭಾವಿ ಸಭೆಯಲ್ಲಿ ಮುಖಂಡರು ಭಾಗಿ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 20 : ಮುಂದಿನ ತಿಂಗಳು ನಡೆಯುವ ಒನಕೆ ಓಬವ್ವ ಜಯಂತಿಯನ್ನು ಅದ್ದೂರಿಯಾಗಿ ಆಚರಿಸುವ ಸಂಬಂಧ ಪ್ರವಾಸಿ ಮಂದಿರದಲ್ಲಿ ಛಲವಾದಿ ಜನಾಂಗದವರು ಭಾನುವಾರ ಪೂರ್ವಭಾವಿ ಸಭೆ ನಡೆಸಿ ಚರ್ಚಿಸಿದರು.

ನಗರಸಭೆ ಮಾಜಿ ಅಧ್ಯಕ್ಷ ಛಲವಾದಿ ಜನಾಂಗದ ಮುಖಂಡ ಹೆಚ್.ಸಿ.ನಿರಂಜನಮೂರ್ತಿ ಸಭೆಯನ್ನುದ್ದೇಶಿಸಿ ಮಾತನಾಡುತ್ತ ಒನಕೆಯ ಮೂಲಕ ಶತ್ರುಗಳನ್ನು ಸದೆಬಡಿದು ಐತಿಹಾಸಿಕ ಚಿತ್ರದುರ್ಗದ ಕೋಟೆಯನ್ನು ನಾಡಿನಾದ್ಯಂತ ಪರಿಚಯಿಸಿರುವ ಒನಕೆ ಓಬವ್ವಳ ಜಯಂತಿಯನ್ನು ಸರ್ಕಾರದ ಜೊತೆ ನಾವುಗಳು ಕೈಜೋಡಿಸಿ ಆಚರಿಸಬೇಕಾಗಿರುವುದರಿಂದ ಛಲವಾದಿ ಜನಾಂಗದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಜಯಂತಿಯನ್ನು ಯಶಸ್ವಿಗೊಳಿಸುಬೇಕು. ಜಯಂತಿಗೆ ಸಂಬಂಧಿಸಿದಂತೆ ನ.3 ರಂದು ಮತ್ತೊಮ್ಮೆ ನಡೆಯುವ ಪೂವಭಾವಿ ಸಭೆಗೆ ಛಲವಾದಿ ಸಮುದಾಯದವರು ಆಗಮಿಸಿ ಸೂಕ್ತ ಸಲಹೆಗಳನ್ನು ನೀಡುವಂತೆ ಮನವಿ ಮಾಡಿದರು.

ಡಾ.ಪಿ.ವಿ.ಶ್ರೀಧರಮೂರ್ತಿ ಮಾತನಾಡುತ್ತ ವೀರವನಿತೆ ಒನಕೆ ಓಬವ್ವ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸೋಣ. ಜನಾಂಗದ ಎಲ್ಲರ ಸಹಕಾರ ಅತಿ ಮುಖ್ಯ ಎಂದು ಕೋರಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ್ ಮಾತನಾಡುತ್ತ ಛಲವಾದಿ ಸಮುದಾಯದವರಲ್ಲಿ ಜಾಗೃತಿ ಮೂಡಿಸಬೇಕಾಗಿರುವುದರಿಂದ ಒನಕೆ ಓಬವ್ವಳ ಜಯಂತಿ ಮೂಲಕವಾದರೂ ಎಲ್ಲರೂ ಒಂದೆಡೆ ಸೇರೋಣ. ಮುಂದಿನ ಪೀಳಿಗೆಗೆ ಓಬವ್ವಳ ಸಾಹಸವನ್ನು ತಿಳಿಸುವುದರ ಜೊತೆಗೆ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗಬೇಕಿದೆ. ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿ.ಯು.ಸಿ.ಯಲ್ಲಿ ಅತಿ ಹೆಚ್ಚಿನ ಅಂಕಗಳನ್ನು ಗಳಿಸಿರುವ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಪ್ರೋತ್ಸಾಹಿಸಿದರೆ

ಜನಾಂಗದ ಇತರೆ ಮಕ್ಕಳನ್ನು ಉತ್ತೇಜಿಸಿದಂತಾಗುತ್ತದೆ. ಹೋರಾಟ, ಸಂಘಟನೆ ಮೂಲಕ ಸರ್ಕಾರದಿಂದ ಸಿಗುವ ಸೌಲತ್ತುಗಳನ್ನು ಪಡೆದುಕೊಂಡು ಮಕ್ಕಳನ್ನು ವಿದ್ಯಾವವಂತರನ್ನಾಗಿ ಮಾಡಬೇಕಿದೆ ಎಂದು ತಿಳಿಸಿದರು.

ಶಾರದಾ ಬ್ರಾಸ್‍ಬ್ಯಾಂಡ್‍ನ ಗುರುಮೂರ್ತಿ ಮಾತನಾಡಿ ಒನಕೆ ಓಬವ್ವ ಜಯಂತಿಯಂದು ನಿಗಧಿತ ಸಮಯಕ್ಕೆ ಸರಿಯಾಗಿ ಮೆರವಣಿಗೆ ಹೊರಡಬೇಕು. ಅದಕ್ಕಾಗಿ ಸಮುದಾಯದ ಎಲ್ಲರೂ ಸಮಯಕ್ಕೆ ಸರಿಯಾಗಿ ಆಗಮಿಸಿದರೆ ಒಳ್ಳೆಯದು. ಜನಾಂಗದ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಜಯಂತಿಯಲ್ಲಿ ಪ್ರೋತ್ಸಾಹಿಸಿದರೆ ಅದಕ್ಕೆ ಬೇಕಾದ ಎಲ್ಲಾ ರೀತಿಯ ನೆರವು ನೀಡುತ್ತೇನೆ. ಹೊಳಲ್ಕೆರೆ ರಸ್ತೆಯಲ್ಲಿರುವ ಗೌರಸಮುದ್ರ ಮಾರಮ್ಮನ ದೇವಸ್ಥಾನದ ಸಮೀಪದಿಂದ ಮೆರವಣಿಗೆ ಹೊರಡೋಣ ಎಂದು ಸಲಹೆ ನೀಡಿದರು.

ಭಾರ್ಗವಿ ದ್ರಾವಿಡ್ ಮಾತನಾಡುತ್ತ ಒನಕೆ ಓಬವ್ವ ಜಯಂತಿಯನ್ನು ಹಬ್ಬದ ರೀತಿಯಲ್ಲಿ ಆಚರಿಸೋಣ. ಛಲವಾದಿ ಜನಾಂಗದವರು ಕುಟುಂಬ ಸಮೇತ ಜಯಂತಿಯಲ್ಲಿ ಪಾಲ್ಗೊಂಡು ಚಿತ್ರದುರ್ಗದಲ್ಲಿ ಓಬವ್ವಳನ್ನು ಸ್ಮರಿಸಿಕೊಳ್ಳುವಂತಾಗಬೇಕೆಂದು ಹೇಳಿದರು.

ಎಸ್.ಎನ್.ರವಿಕುಮಾರ್ ಮಾತನಾಡಿ ನ.11 ರಂದು ಸರ್ಕಾರದ ವತಿಯಿಂದ ಆಚರಿಸಲಾಗುವ ಒನಕೆ ಓಬವ್ವ ಜಯಂತಿಯಲ್ಲಿ ಛಲವಾದಿ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಕ್ತಿ ಪ್ರದರ್ಶಿಸುವಂತೆ ಮನವಿ ಮಾಡಿದರು.

ಶಿಕ್ಷಣ ಇಲಾಖೆಯ ನಾಗರಾಜ್, ಹೆಚ್.ಅಣ್ಣಪ್ಪಸ್ವಾಮಿ, ದಯಾನಂದ್, ಚನ್ನಬಸಪ್ಪ ಮುಸ್ಟೂರು, ಮಂಜಣ್ಣ, ಜಯರಾಂ ಕೆ. ಶಶಾಂಕ್, ರಂಗಸ್ವಾಮಿ ಚಿಕ್ಕಪುರ, ರಾಮಲಿಂಗಪ್ಪ, ಪರಮೇಶ್ ಪೂಜಾರ್, ಮಂಜುನಾಥ್, ಜಯಣ್ಣ, ನಾಗರಾಜ್ ಪೈಲೆಟ್, ಉಮಾಶಂಕರ್ ಸೇರಿದಂತೆ ಛಲವಾದಿ ವಂಶಸ್ಥರು ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ್ದರು.

 

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...