ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 18 : ಚಿತ್ರನಟ ಪ್ರಕಾಶ್ ರಾಜ್ ಅವರ ನಿರ್ದಿಗಂತ ತಂಡದ ಪ್ರಾಜೆಕ್ಟ್ ಪಂಚತಂತ್ರ ನಾಟಕ ಪ್ರದರ್ಶನ ಸೆಪ್ಟಂಬರ್ 19 ಶನಿವಾರ ಸಂಜೆ 6 ಗಂಟೆಗೆ ತರಾಸು ರಂಗಮಂದಿರಲ್ಲಿ ಆಯೋಜಿಸಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬಸವಕೇಂದ್ರ ಮುರುಘಾಮಠ, ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ದುರ್ಗದ ಸಿರಿ ಕಲಾ ತಂಡದ ಸಹಯೋಗದಲ್ಲಿ ನಾಟಕ ಪ್ರದರ್ಶನಗೊಳ್ಳಲಿದೆ.
ಬಸವಕೇಂದ್ರ ಮುರುಘಾಮಠದ ಡಾ.ಬಸವಕುಮಾರ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ, ಆದಿ ಜಾಂಬವ ಅಭಿವೃದ್ದಿ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ್, ದುರ್ಗದ ಸಿರಿ ಕಲಾ ತಂಡದ ಮಹಾಂತರೆಡ್ಡಿ, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ವಿನಾಯಕ ತೊಡರನಾಳು ಪಾಲ್ಗೊಳ್ಳುವರೆಂದು ಸಂಘಟಕ ಚಿಕ್ಕಪ್ಪನಹಳ್ಳಿಷಣ್ಮುಖ ತಿಳಿಸಿದ್ದಾರೆ.










