Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ನಿವೇಶನ ನೀಡುವಂತೆ ಒತ್ತಾಯಿಸಿ ವೆಂಕಟೇಶ್ವರ ಬಡಾವಣೆ ನಿವಾಸಿಗಳ ಪ್ರತಿಭಟನೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

 

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 20 : ಚಳ್ಳಕೆರೆ ರಸ್ತೆ ವೆಂಕಟೇಶ್ವರ ಬಡಾವಣೆಯ ನಿವಾಸಿಗಳು ವಸತಿ ಕಲ್ಪಿಸುವಂತೆ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿ ಉಪ ವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು.

ಅನೇಕ ವರ್ಷಗಳಿಂದಲೂ ಇಲ್ಲಿ ವಾಸಿಸುತ್ತಿರುವ ನಮಗೆ ಸ್ವಂತ ನಿವೇಶನವಾಗಲಿ, ಮನೆಗಳಾಗಲಿ ಇಲ್ಲ. ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದೇವೆ. ಕೂಲಿ ಮಾಡಿಕೊಂಡು ಬದುಕುತ್ತಿರುವ ನಮಗೆ ದಿನನಿತ್ಯದ ಪದಾರ್ಥಗಳನ್ನು ಕೊಂಡುಕೊಂಡು ವಾಸಿಸುವುದು ಕಷ್ಟವಾಗಿದೆ. ಒಂದು ತಾಲ್ಲೂಕಿಗೆ ಐವತ್ತು ಸಾವಿರ ನಿವೇಶನಗಳನ್ನು ನೀಡಲು ಸರ್ಕಾರದ ಆದೇಶವಿದೆ. ಅದರಂತೆ ನಮಗೆ ನಿವೇಶನಗಳನ್ನು ಕೊಟ್ಟು ಮನೆಗಳನ್ನು ಕಟ್ಟಿಸಿಕೊಳ್ಳಲು ನೆರವಾಗುವಂತೆ ಜಿಲ್ಲಾಡಳಿತವನ್ನು ಒತ್ತಾಯಿಸಿದರು.

ಕರ್ನಾಟಕ ರಾಜ್ಯ ಆದಿ ಜಾಂಬವ ಸಂಘದ ಅಧ್ಯಕ್ಷ ಜಿ.ಎಂ.ಪ್ರಕಾಶ್, ಗಂಗಮ್ಮ, ಟಿ.ದ್ರಾಕ್ಷಾಯಿಣಿ, ಮೇರಿ, ಲಕ್ಷ್ಮಿ, ಮಂಜುಳ, ರತ್ನಮ್ಮ, ಮಮತ, ಸರೋಜಮ್ಮ, ಭೈರಮ್ಮ
ಗಂಗಾ, ಸುಧಾ, ಚೌಡಮ್ಮ, ಕಮಲಮ್ಮ, ಪದ್ಮಾವತಿ, ನಾಗರತ್ನ, ಕಾವ್ಯ, ಹನುಮಕ್ಕ ಇವರುಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now