Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಏಕೀಕೃತ ಪಿಂಚಣಿ ಯೋಜನೆ ವಿರೋಧಿಸಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ

---Advertisement---

 

 

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 06 : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಎನ್‌ಪಿಎಸ್ ತೆಗೆದು ಯುಪಿಎಸ್ ಅಂದರೆ ಎಕಿಕೃತ ಪಿಂಚಣಿ ಯೋಜನೆ ವಿರೋಧಿಸಿ ಸಾಂಕೇತಿಕವಾಗಿ ಕಪ್ಪು ಪಟ್ಟಿಯನ್ನು ಧರಿಸಿಕೊಂಡು ಕರ್ತವ್ಯ ನಿರ್ವಹಿಸುತ್ತಿರುವ ಸ್ಥಳದಲ್ಲಿ ಹಳೆ ಪಿಂಚಣಿ ಮರು ಜಾರಿಗೆ ಒತ್ತಾಯಿಸಲಾಯಿತು.

ಕ.ರಾ.ಸ.NPS ನೌಕರರ ಸಂಘದ ಜಿಲ್ಲಾಧ್ಯಕ್ಷ ಇವರ ನೇತೃತ್ವದಲ್ಲಿ ಜಿಲ್ಲೆಯ ಎಲ್ಲಾ ನೌಕರರು ಒಂದು ದಿನದ ಸಾಂಕೇತಿಕ ಪ್ರತಿಭಟನೆ ನಡೆಸಿದರು. ಅದೇ ರೀತಿ ದೇಶದ 27 ರಾಜ್ಯಗಳಲ್ಲಿ NMOPS ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘದ ರಾಜ್ಯ ಅಧ್ಯಕ್ಷರಾದ ಶಾಂತರಾಮ್ ತೇಜ ರವರ ನೇತೃತ್ವದಲ್ಲಿ ಕಪ್ಪು ಪಟ್ಟಿಯನ್ನು ಧರಿಸಿಕೊಂಡು ಪ್ರತಿಭಟಿಸಿದರು.

ಈ ಹಿಂದೆ ರಾಜ್ಯ ಸರ್ಕಾರಿ NPS ನೌಕರರ ಸಂಘದ ವತಿಯಿಂದ ಹಲವಾರು ಹೋರಾಟಗಳು ನಡೆದಿದ್ದನ್ನು ಸ್ಮರಿಸಬಹುದು. ರಾಜ್ಯ ಸರ್ಕಾರವು ತನ್ನ ಪ್ರಣಾಳಿಕೆಯಲ್ಲಿ ಹಳೆಯ ಪಿಂಚಣಿ ಜಾರಿಗೊಳಿಸುವುದಾಗಿ ತಿಳಿಸಿದೆ ಅದರಂತೆ NPS ರದ್ದುಗೊಳಿಸಿ OPS ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

ನೌಕರರ ಸಂಘದ ಪದಾಧಿಕಾರಿಗಳು ಚಿತ್ರದುರ್ಗ ನಗರದ ಜಿಲ್ಲಾ ಕಛೇರಿ, ತಾಲೂಕು ಕಚೇರಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಸಮನ್ವಯ ಅಧಿಕಾರಿಗಳ ಕಚೇರಿ, ಜಿಲ್ಲಾ ಶಿಕ್ಷಕರ ಶಿಕ್ಷಣ ಇಲಾಖೆಯ ಕಚೇರಿ, ಡಯಟ್, ಲೋಕೋಪಯೋಗಿ ಇಲಾಖೆ, ಭೂಮಾಪನ ಇಲಾಖೆ, ಚಿತ್ರದುರ್ಗ ಜಿಲ್ಲಾ ಪಂಚಾಯತಿ, ಆಯುಷ್ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ತೋಟಗಾರಿಕಾ ಇಲಾಖೆ, ಕೃಷಿ ಇಲಾಖೆ, ಜಲಸಂಪನ್ಮೂಲ ಇಲಾಖೆ, ಭದ್ರ ಮೇಲ್ದಂಡೆ ಯೋಜನೆ ಇಲಾಖೆ, ಚಿತ್ರದುರ್ಗ ಜಿಲ್ಲಾ ಖಜಾನ ಇಲಾಖೆ, ಸಬ್ ರಿಜಿಸ್ಟರ್ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕಲ್ಯಾಣ ಇಲಾಖೆ, ಇನ್ನು ಅನೇಕ ಇಲಾಖೆಗಳ ನೌಕರರು ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲಾ ಏನ್.ಪಿ.ಎಸ್ ನೌಕರ ಸಂಘದ ಜಿಲ್ಲಾಧ್ಯಕ್ಷರಾದ ಡಾ ಸ.ರಾ.ಲೇಪಾಕ್ಷ, ರಾಜ್ಯ ಪರಿಷತ್ ಸದಸ್ಯರಾದ ಪಾಟೀಲ್, ಉಪಾಧ್ಯಕ್ಷರಾದ ರವಿಕುಮಾರ್, ಅಜಯ್ ಕುಮಾರ್, ಸಂಘಟನಾ ಕಾರ್ಯದರ್ಶಿಯಾದ ಇಕ್ಬಾಲ್, ವಿನಯ್, ಜಿಲ್ಲಾ ಪದಾಧಿಕಾರಿಗಳು ಹಾಗೂ ಚಿತ್ರದುರ್ಗ ತಾಲೂಕು nps ನೌಕರರ ಸಂಘದ ಅಧ್ಯಕ್ಷರಾದ ಕಲ್ಲೇಶ್ ಡಿ ಮೌರ್ಯ, ಪ್ರಧಾನ ಕಾರ್ಯದರ್ಶಿಗಳಾದ ಅಜಯ್ ಕುಮಾರ್, ಸಂಘಟನಾ ಕಾರ್ಯದರ್ಶಿಯದ CRP ರಾಜಪ್ಪ, ಶಿಕ್ಷಕರಾದ ಬಸವರಾಜ್, ಕೆಪಿಟಿಸಿಎಲ್ ಮಂಜುನಾಥ್, ಕರಿಬಸಯ್ಯ, ಶ್ರೀನಿವಾಸ್ ಇತರರು ಉಪಸ್ಥಿತಿಯಲ್ಲಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment