ಚಿತ್ರದುರ್ಗ | ವರ್ಷಿತಾ ಕುಟುಂಬಕ್ಕೆ ಒಂದು ಕೋಟಿ ಪರಿಹಾರ ನೀಡಿ : ಕರುನಾಡ ವಿಜಯಸೇನೆ ಒತ್ತಾಯ

1 Min Read

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 22 : ಕೋವೇರಹಟ್ಟಿಯ ವಿದ್ಯಾರ್ಥಿನಿ ವರ್ಷಿತಾಳ ಮೇಲೆ ಅತ್ಯಾಚಾರವೆಸಗಿ ಕೊಲೆಗೈದಿರುವ ಕಾಮುಕರಿಗೆ ಕಠಿಣ ಶಿಕ್ಷೆ ವಿಧಿಸಿ ನೊಂದ ಕುಟುಂಬಕ್ಕೆ ಒಂದು ಕೋಟಿ ರೂ.ಗಳ ಪರಿಹಾರ ನೀಡುವಂತೆ ಒತ್ತಾಯಿಸಿ ಕರುನಾಡ ವಿಜಯಸೇನೆಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.

ಹಾಸ್ಟೆಲ್‍ನಲ್ಲಿದ್ದ ವರ್ಷಿತಾಳನ್ನು ಹೊರಗೆ ಕರೆದುಕೊಂಡು ಹೋಗಿ ಗೋನೂರು ಸಮೀಪ ಅತ್ಯಾಚಾರವೆಸಗಿ ಸುಟ್ಟು ಹಾಕಿರುವುದು ಸಾರ್ವಜನಿಕರಲ್ಲಿ ಭಯದ ವಾತಾವರಣ ಮೂಡಿಸಿದೆ. ಎಲ್ಲಾ ಹಾಸ್ಟೆಲ್‍ಗಳ ಸುತ್ತಮುತ್ತ ಸಿ.ಸಿ.ಕ್ಯಾಮರಾ ಇಲ್ಲದಿರುವುದು ಇಂತಹ ಅನಾಹುತಗಳಿಗೆ ಕಾರಣ. ಈ ಹಿಂದೆ ಇದ್ದ ಓಬವ್ವ ಪೊಲೀಸ್ ಪಡೆಯನ್ನು ಮರು ಸ್ಥಾಪಿಸಿ ಮಹಿಳಾ ಡಿ.ವೈ.ಎಸ್ಪಿ. ತಂಡ ರಚಿಸಬೇಕು. ನಗರ ಸೇರಿದಂತೆ ಸುತ್ತಮುತ್ತ ಐದಾರು ಕಿ.ಮೀ. ವ್ಯಾಪ್ತಿಯ ಎಲ್ಲಾ ರಸ್ತೆಗಳಲ್ಲಿ ಸಿ.ಸಿ.ಕ್ಯಾಮರಾಗಳನ್ನು ಅಳವಡಿಸಬೇಕು. ಭದ್ರತೆ ಇಲ್ಲದಿರುವುದಕ್ಕೆ ಇಂತಹ ಅನೈತಿಕ, ಅಕ್ರಮ ಚಟುವಟಿಕೆಗಳು ಹೆಚ್ಚುತ್ತಿವೆ ಎಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಒತ್ತಾಯಿಸಿದರು.

ಕರುನಾಡ ವಿಜಯಸೇನೆ ಮಹಿಳಾಧ್ಯಕ್ಷೆ ವೀಣಗೌರಣ್ಣ, ಪ್ರಧಾನ ಕಾರ್ಯದರ್ಶಿ ಗೋಪಿನಾಥ್, ಕಮಲಮ್ಮ, ರತ್ನಮ್ಮ, ಅವಿನಾಶ್, ಮುಜಾಯಿದ್, ಜಗದೀಶ್, ಅಖಿಲೇಶ್,  ವಿಜಯ್‍ಬಾಬು, ಸುಶೀಲ, ಪ್ರದೀಪ್, ತಿಪ್ಪೇಸ್ವಾಮಿ, ಯಶವಂತ್ ಇನ್ನು ಅನೇಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks