Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ : ಮಳೆಗೆ ತೋಟಗಾರಿಕೆ ಬೆಳೆಗಳು ನಾಶ : ಪರಿಹಾರಕ್ಕಾಗಿ ರೈತರ ಪ್ರತಿಭಟನೆ

Facebook
Twitter
Telegram
WhatsApp

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 23  : ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದಾಗಿ ಈರುಳ್ಳಿ ಹಾಗೂ ತೋಟಗಾರಿಕೆ ಬೆಳೆ ನಾಶವಾಗಿರುವುದರಿಂದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಡಿ.ಎಸ್.ಹಳ್ಳಿ, ಜೋಡಿಚಿಕ್ಕೇನಹಳ್ಳಿ, ತೋಪುರಮಾಳಿಗೆ, ದ್ಯಾಮವ್ವನಹಳ್ಳಿ, ಕಾಸವರಹಟ್ಟಿ, ದಂಡಿನಕುರುಬರಹಟ್ಟಿ, ನರೇನಾಳ್, ಜೆ.ಎನ್.ಕೋಟೆ, ಎಣ್ಣೆಗೆರೆ ಇನ್ನು ಮುಂತಾದ ಗ್ರಾಮಗಳಲ್ಲಿ ಬೆಳೆ ಹಾನಿಯಾಗಿರುವ ಚೀಕಲು ಈರುಳ್ಳಿಯನ್ನು ಪ್ರದರ್ಶಿಸಿದ ರೈತರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಕಳೆದ ವರ್ಷದ ಬರಗಾಲವನ್ನೆ ರೈತರು ಇನ್ನು ಸುಧಾರಿಸಿಕೊಳ್ಳಲು ಆಗದೆ ಸಾಲಗಾರರಾಗಿದ್ದಾರೆ. ಆರಂಭದಲ್ಲಿ ಉತ್ತಮ ಮಳೆಯಾಯಿತಾದರೂ ಕಳೆದ ಇಪ್ಪತ್ತು ದಿನಗಳಿಂದ ಸುರಿದ ಮಳೆಗೆ ಈರುಳ್ಳಿ ಹಾಗೂ ಇನ್ನಿತರೆ ತೋಟಗಾರಿಕೆ ಬೆಳೆಗಳು ಕೊಳೆತು ನಾಶವಾಗಿವೆ. ಕೃಷಿಗಾಗಿ ಸಾಲ ಮಾಡಿರುವ ರೈತ ಒಕ್ಕಲುತನಕ್ಕೆ ಹಾಕಿದ ಬಂಡವಾಳವೂ ಕೈಗೆ ಸಿಗದೆ ಕಂಗಾಲಾಗಿದ್ದಾನೆ. ತಕ್ಷಣವೆ ಬೆಳೆ ಸಮೀಕ್ಷೆ ನಡೆಸಿ ಹಾನಿಗೊಳಗಾಗಿರುವ ರೈತರಿಗೆ ಬೆಳೆ ಪರಿಹಾರ ಕೊಡಬೇಕು. ಬೆಳೆವಿಮೆಗೊಳಪಟ್ಟವರಿಗೆ ತಡ ಮಾಡದೆ ಬೆಳೆ ಪರಿಹಾರ ನೀಡಬೇಕೆಂದು ಜಿಲ್ಲಾಡಳಿತವನ್ನು ಪ್ರತಿಭಟನಾನಿರತ ರೈತರು ಒತ್ತಾಯಿಸಿದರು.

ತಾಲ್ಲೂಕಿನಲ್ಲಿ ಹೆಚ್ಚಾಗಿ ಖುಷ್ಕಿ ಜಮೀನುಗಳಲ್ಲಿ ಸೂರ್ಯಕಾಂತಿ ಬೆಳೆದಿದ್ದು, ಖರೀಧಿ ಕೇಂದ್ರಗಳನ್ನು ತೆರೆದು ಬೆಂಬಲ ಬೆಲೆಗೆ ಖರೀಧಿಸಿ ಜಿಲ್ಲಾಡಳಿತ ರೈತರ ನೆರವಿಗೆ ಮುಂದಾಗಬೇಕೆಂದು ಆಗ್ರಹಿಸಿದರು.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಜಿಲ್ಲಾಧ್ಯಕ್ಷ ಡಿ.ಎಸ್.ಹಳ್ಳಿ ಮಲ್ಲಿಕಾರ್ಜುನ್, ತಾಲ್ಲೂಕು ಅಧ್ಯಕ್ಷ ಬಿ.ಇ.ಮಂಜುನಾಥ, ರಾಮರೆಡ್ಡಿ, ಮಹಂತೇಶ್‍ರೆಡ್ಡಿ, ರಾಜಶೇಖರ್, ರಾಮರೆಡ್ಡಿ, ಪರಶಿವಣ್ಣ, ಪ್ರವೀಣ, ಮಾರುತಿ, ಸದಾಶಿವ, ನಾಗರಾಜ್‍ರೆಡ್ಡಿ, ಸುರೇಶ್‍ರೆಡ್ಡಿ, ಕೃಷ್ಣಪ್ಪ, ಲೋಕೇಶ, ಶಶಿಧರ, ಕೇಶವರೆಡ್ಡಿ, ಹರಳಯ್ಯ ಇನ್ನು ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!